AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಮತ್ತು ‘ಬೀಸ್ಟ್​’ ನಿರ್ದೇಶಕರ ನಡುವೆ ದೋಸ್ತಿ ಹೇಗಿದೆ ನೋಡಿ; ಕ್ಲ್ಯಾಶ್​ ವಿಷಯ ಬಿಟ್ಟುಬಿಡಿ

KGF Chapter 2 | Beast Movie: ‘ಕೆಜಿಎಫ್​ 2’ ಟ್ರೇಲರ್ ಬಗ್ಗೆ ತಮ್ಮ ಅನಿಸಿಕೆ ಏನು ಎಂಬುದನ್ನು ‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ತಿಳಿಸಿದ್ದಾರೆ. ಅದಕ್ಕೆ ಪ್ರಶಾಂತ್​ ನೀಲ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಕೆಜಿಎಫ್​ 2’ ಮತ್ತು ‘ಬೀಸ್ಟ್​’ ನಿರ್ದೇಶಕರ ನಡುವೆ ದೋಸ್ತಿ ಹೇಗಿದೆ ನೋಡಿ; ಕ್ಲ್ಯಾಶ್​ ವಿಷಯ ಬಿಟ್ಟುಬಿಡಿ
ಪ್ರಶಾಂತ್​ ನೀಲ್​, ನೆಲ್ಸನ್​ ದಿಲೀಪ್​ ಕುಮಾರ್​
TV9 Web
| Updated By: ಮದನ್​ ಕುಮಾರ್​|

Updated on: Mar 30, 2022 | 3:08 PM

Share

ಏಪ್ರಿಲ್​ ತಿಂಗಳಲ್ಲಿ ಸಿನಿಪ್ರಿಯರಿಗೆ ಮಸ್ತ್​ ಮನರಂಜನೆ ಸಿಗಲಿದೆ. ಹಲವು ಬಿಗ್​ ಬಜೆಟ್​ ಸಿನಿಮಾಗಳು ಒಟ್ಟೊಟ್ಟಿಗೆ ತೆರೆ ಕಾಣುತ್ತಿವೆ. ಆ ಪೈಕಿ ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಮತ್ತು ದಳಪತಿ ವಿಜಯ್​ ಅಭಿನಯದ ‘ಬೀಸ್ಟ್​’ ಸಿನಿಮಾಗಳು ಹೆಚ್ಚು ನಿರೀಕ್ಷೆ ಹುಟ್ಟುಹಾಕಿದೆ. ಈ ಎರಡೂ ಚಿತ್ರಗಳು ಒಂದು ದಿನದ ಅಂತರದಲ್ಲಿ ಬಿಡುಗಡೆ ಆಗುತ್ತಿರುವುದು ಚರ್ಚೆಯ ವಿಷಯ ಆಗಿದೆ. ‘ಬೀಸ್ಟ್​’ ಸಿನಿಮಾಗೆ ನೆಲ್ಸನ್​ ದಿಲೀಪ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್ (Prashanth Neel)​ ಅವರ ಬತ್ತಳಿಕೆಯಿಂದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬರುತ್ತಿದೆ. ಏ.13ರಂದು ‘ಬೀಸ್ಟ್’ ತೆರೆಕಂಡರೆ, ಮರುದಿನ ಅಂದರೆ ಏ.14ರಂದು ‘ಕೆಜಿಎಫ್​ 2’ ಚಿತ್ರ ಅಬ್ಬರಿಸಲಿದೆ. ಇಬ್ಬರು ಸ್ಟಾರ್​ ಕಲಾವಿದರ ಸಿನಿಮಾಗಳು ಹೀಗೆ ಏಕಕಾಲಕ್ಕೆ ತೆರೆ ಕಾಣುತ್ತಿರುವುದರಿಂದ ಚಿತ್ರಮಂದಿರಗಳ ಹಂಚಿಕೆ ವಿಚಾರದಲ್ಲಿ ಪೈಪೋಟಿ ಏರ್ಪಡಲಿದೆ. ಯಾವ ಚಿತ್ರ ಎಷ್ಟು ಕಲೆಕ್ಷನ್​ ಮಾಡುತ್ತದೆ ಎಂಬ ಕೌತುಕ ಕೂಡ ನಿರ್ಮಾಣ ಆಗಿದೆ. ಈ ನಡುವೆ ‘ಬೀಸ್ಟ್​’ ಚಿತ್ರದ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ (Nelson Dilipkumar) ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಪರಸ್ಪರ ವಿಶ್​ ಮಾಡಿಕೊಂಡಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಟ್ರೇಲರ್​ ಇತ್ತೀಚೆಗೆ ಬಿಡುಗಡೆ ಆಗಿ ಧೂಳೆಬ್ಬಿಸುತ್ತಿದೆ. ಅದನ್ನು ಕಂಡು ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಇಷ್ಟಪಟ್ಟಿದ್ದಾರೆ. ಟ್ರೇಲರ್​ ನೋಡಿ ಮೆಚ್ಚಿಕೊಂಡಿರುವ ಸೆಲೆಬ್ರಿಟಿಗಳ ಪೈಕಿ ‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಕೂಡ ಪ್ರಮುಖರು. ‘ಕೆಜಿಎಫ್​ 2’ ಟ್ರೇಲರ್ ಬಗ್ಗೆ ತಮ್ಮ ಅನಿಸಿಕೆ ಏನು ಎಂಬುದನ್ನು ಅವರು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ಪ್ರಶಾಂತ್​ ನೀಲ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಇದು ತುಂಬ ದೊಡ್ಡದಾಗಿದೆ ಮತ್ತು ಚೆನ್ನಾಗಿದೆ. ನಿರೀಕ್ಷೆಯಲ್ಲಿದ್ದೇನೆ’ ಎಂದು ನೆಲ್ಸನ್​ ದಿಲೀಪ್​ ಕುಮಾರ್​ ಅವರು ಟ್ವೀಟ್​ ಮಾಡಿದ್ದಾರೆ. ಅದನ್ನು ರಿಟ್ವೀಟ್​ ಮಾಡಿರುವ ಪ್ರಶಾಂತ್​ ನೀಲ್​ ಅವರು, ‘ಧನ್ಯವಾದಗಳು ನೆಲ್ಸನ್​ ದಿಲೀಪ್​ ಕುಮಾರ್​. ಎಂದಿನಂತೆ ವಿಜಯ್​ ಸರ್​ ಅವರನ್ನು ದೊಡ್ಡ ಪರೆದ ಮೇಲೆ ನೋಡಲು ಕಾಯುತ್ತಿದ್ದೇನೆ. ಬೀಸ್ಟ್​ ಚಿತ್ರಕ್ಕೆ ಆಲ್​ ದಿ ಬೆಸ್ಟ್​’ ಎಂದು ಬರೆದುಕೊಂಡಿದ್ದಾರೆ. ಈ ನಿರ್ದೇಶಕರಿಬ್ಬರ ಟ್ವೀಟ್​ ಮಾತುಕಥೆ ಕಂಡು ಅಭಿಮಾನಿಗಳು ಖುಷಿ ಆಗಿದ್ದಾರೆ.

‘ಬೀಸ್ಟ್​’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳ ನಡುವೆ ಕ್ಲ್ಯಾಶ್​ ಆಗಲಿದ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ ಇದನ್ನು ಕ್ಲ್ಯಾಶ್​ ಎಂದು ಹೇಳಲು ಈ ಚಿತ್ರತಂಡಗಳು ಸಿದ್ಧವಿಲ್ಲ. ಈ ಕುರಿತಂತೆ ಟ್ರೇಲರ್​ ಲಾಂಚ್​ ಕಾರ್ಯಕ್ರಮದಲ್ಲಿ ಯಶ್​ ಮಾತನಾಡಿದರು. ಅವರು ಹೇಳಿದ ಮಾತು ಕೇಳಿ ಫ್ಯಾನ್ಸ್​ ಕೂಡ ಇಂಪ್ರೆಸ್​ ಆದರು. ‘ಬೀಸ್ಟ್​’ ಮತ್ತು ‘ಕೆಜಿಎಫ್​ 2’ ಸಿನಿಮಾಗಳು ಬಹುಭಾಷೆಯಲ್ಲಿ ತೆರೆಕಾಣುತ್ತಿವೆ. ಎಲ್ಲ ರಾಜ್ಯದಲ್ಲೂ ಪೈಪೋಟಿ ಇರಲಿದೆ.

ಯಶ್​ ಹೇಳಿದ್ದಿಷ್ಟು..

‘ನಾವು ತುಂಬ ಮುಂಚೆಯೇ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದ್ವಿ. ಯಾವ ಸಿನಿಮಾ ರಿಲೀಸ್​ ಆಗುತ್ತದೆ ಅನ್ನೋದು ನಮಗೆ ಗೊತ್ತಿರಲಿಲ್ಲ. ಈಗ ವಿಜಯ್​ ಅವರ ಬೀಸ್ಟ್​ ಚಿತ್ರ ಬರುತ್ತಿದೆ. ಬೀಸ್ಟ್​ ವರ್ಸಸ್​ ಕೆಜಿಎಫ್​ ಅಂತ ಕೇಳಬಾರದು. ಬೀಸ್ಟ್​ ಮತ್ತು ಕೆಜಿಎಫ್​ ಎನ್ನಬೇಕು. ಎರಡೂ ಕೂಡ ಇಂಡಿಯನ್​ ಸಿನಿಮಾ. ಇದು ಎಲೆಕ್ಷನ್​ ಅಲ್ಲ, ಸಿನಿಮಾ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬ ಮಾತು ಇದರಲ್ಲಿ ಬರಲ್ಲ. ಎರಡೂ ಸಿನಿಮಾವನ್ನೂ ನೋಡೋಣ. ವಿಜಯ್ ಸರ್​ ನನಗಿಂತ ಸೀನಿಯರ್​. ನಾವು ಅವರಿಗೆ ಗೌರವ ಕೊಡಬೇಕು. ವಿಜಯ್​ ಅವರ ಅಭಿಮಾನಿಗಳಿಗೂ ‘ಕೆಜಿಎಫ್​ 2’ ಸಿನಿಮಾ ಇಷ್ಟ ಆಗಲಿದೆ’ ಎಂದು ಟ್ರೇಲರ್​ ಲಾಂಚ್​ ಸಂದರ್ಭದಲ್ಲಿ ಯಶ್​ ಹೇಳಿದರು.

ಇದನ್ನೂ ಓದಿ:

 ‘ಕೆಜಿಎಫ್​ ಚಾಪ್ಟರ್​ 2’ ಟ್ರೇಲರ್​ಗೆ ಕೋಟಿಕೋಟಿ ವೀಕ್ಷಣೆ; ಯಶ್ ಅವರನ್ನು ತಡೆಯುವವರೇ ಇಲ್ಲ

‘ಕೆಜಿಎಫ್​ 2’ ವೀಕ್ಷಿಸಿದ್ದಾರೆ ರಾಧಿಕಾ ಪಂಡಿತ್​; ಸಿನಿಮಾ ಬಗ್ಗೆ ಅವರು ಹೇಳಿದ್ದಿಷ್ಟು

ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು