AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ಕಡೆಯಿಂದ ‘ಕೆಜಿಎಫ್ 2’​ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲಿರುವ ವಿಶೇಷ ಅಭಿಮಾನಿ

ಅಕ್ಕಿ ಕಾಳಿನ ಮೇಲೆ ಅಕ್ಷರಗಳನ್ನು ಬರೆಯುವ ಕಲಾವಿದ ವೈವಸ್ವತ್​ ತಾಂಡುಲ. ಆ ಮೂಲಕ ಅವರು ‘ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​’ನಲ್ಲಿ ದಾಖಲೆ ಮಾಡಿದ್ದಾರೆ.

ಪ್ರಶಾಂತ್​ ನೀಲ್​ ಕಡೆಯಿಂದ ‘ಕೆಜಿಎಫ್ 2’​ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲಿರುವ ವಿಶೇಷ ಅಭಿಮಾನಿ
ಯಶ್​-ಪ್ರಶಾಂತ್​ ನೀಲ್
TV9 Web
| Edited By: |

Updated on: Jul 24, 2021 | 8:51 AM

Share

ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ ಯಶ್​ (Yash) ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಈಗಾಗಲೇ ಅದ್ದೂರಿಯಾಗಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿರಬೇಕಿತ್ತು. ಆದರೆ ಕೊರೊನಾ ವೈರಸ್​​ ಎರಡನೇ ಅಲೆಯ ಹಾವಳಿಯಿಂದಾಗಿ ಈ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಹಾಗಂತ ಅಭಿಮಾನಿಗಳ ನಿರೀಕ್ಷೆ ಕಿಂಚಿತ್ತೂ ಕಡಿಮೆ ಆಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಸಿನಿಪ್ರಿಯರು ‘ಕೆಜಿಎಫ್​ 2’ (KGF Chapter 2) ಬಗ್ಗೆ ತಮಗಿರುವ ನಿರೀಕ್ಷೆಯ ಮಟ್ಟವನ್ನು ತೋರ್ಪಡಿಸುತ್ತಿದ್ದಾರೆ. ಅದಕ್ಕೆ ಈಗೊಂದು ಹೊಸ ಉದಾಹರಣೆ ಸಿಕ್ಕಿದೆ. ಅದನ್ನು ಕಂಡು ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಖುಷಿ ಆಗಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ದಿನಾಂಕ ಇನ್ನಷ್ಟೇ ಘೋಷಣೆ ಆಗಬೇಕಿದೆ. ಈ ಚಿತ್ರವನ್ನು ಫಸ್ಟ್​ ಡೇ ಫಸ್ಟ್​ ಶೋ ನೋಡಲು ಅಪಾರ ಅಭಿಮಾನಿಗಳು ಕಾಯುತ್ತಿದ್ದಾರೆ. ಹಾಗಂತ ಮೊದಲ ದಿನವೇ ಎಲ್ಲರಿಗೂ ಟಿಕೆಟ್​ ಸಿಗುವುದಿಲ್ಲ. ಅದಕ್ಕಾಗಿ ಎಷ್ಟೋ ಜನರು ಹರಸಾಹಸ ಮಾಡುತ್ತಾರೆ. ಆದರೆ ಒಬ್ಬ ಅಭಿಮಾನಿಗೆ ತುಂಬ ಸುಲಭವಾಗಿ ‘ಕೆಜಿಎಫ್​ 2’ ಚಿತ್ರದ ಮೊದಲ ದಿನ ಮೊದಲ ಶೋ ಟಿಕೆಟ್​ ಸಿಗಲಿದೆ. ಅದು ಕೂಡ ಸ್ವತಃ ನಿರ್ದೇಶಕ ಪ್ರಶಾಂತ್​ ನೀಲ್​ ಕಡೆಯಿಂದ ಎಂಬುದು ಅಚ್ಚರಿಯ ವಿಚಾರ.

ಹೌದು, ವೈವಸ್ವತ್​ ತಾಂಡುಲ ಎಂಬ ಅಭಿಮಾನಿಗೆ ನಿರ್ದೇಶಕ ಪ್ರಶಾಂತ್​ ಅವರು ಈ ಭರವಸೆ ನೀಡಿದ್ದಾರೆ. ಅಕ್ಕಿ ಕಾಳಿನ ಮೇಲೆ ಅಕ್ಷರಗಳನ್ನು ಬರೆಯುವ ಕಲಾವಿದ ವೈವಸ್ವತ್​ ತಾಂಡುಲ. ಆ ಮೂಲಕ ಅವರು ‘ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​’ನಲ್ಲಿ ದಾಖಲೆ ಮಾಡಿದ್ದಾರೆ. ಈಗ ಅವರು ಅಕ್ಕಿ ಕಾಳಿನ ಮೇಲೆ ‘ಹೊಂಬಾಳೆ’ ಮತ್ತು ‘ಕೆಜಿಎಫ್’ ಎಂದು ಬರೆದು ಚಿತ್ರತಂಡಕ್ಕೆ ಕಳಿಸಿಕೊಟ್ಟಿದ್ದಾರೆ. ಅಲ್ಲದೆ, ಈ ನಿರ್ಮಾಣ ಸಂಸ್ಥೆ​ಯಿಂದ ಬಂದ ಸಿನಿಮಾಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಒಳಗೊಂಡ ಪತ್ರವನ್ನೂ ಬರೆದಿದ್ದಾರೆ.

ಇದನ್ನು ಕಂಡು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಗೆ ಖುಷಿ ಆಗಿದೆ. ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದು, ‘ಹಾಯ್​ ವೈವಸ್ವತ್​. ನಿಮ್ಮ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳು. ಸಂಪರ್ಕದಲ್ಲಿ ಇರೋಣ. ನಿಮಗೆ ನಮ್ಮ ಕಡೆಯಿಂದ ಕೆಜಿಎಫ್​: ಚಾಪ್ಟರ್​ 2 ಚಿತ್ರದ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ಗಳು’ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಎಷ್ಟು ಕೋಟಿಗೆ ಸೇಲ್​ ಆಯ್ತು ‘ಕೆಜಿಎಫ್​ 2’ ಆಡಿಯೋ? ಲಹರಿ ಮ್ಯೂಸಿಕ್​ ತೆಕ್ಕೆಗೆ ಎಲ್ಲ ಭಾಷೆಯ ಸಾಂಗ್ಸ್​

ಅನಂತ್ ನಾಗ್​ ಬಗ್ಗೆ ಯಶ್​ ವಿಶೇಷ ಮಾತು; ಪದ್ಮ ಪ್ರಶಸ್ತಿ ಒತ್ತಾಯಕ್ಕೆ ರಾಕಿಂಗ್​ ಸ್ಟಾರ್​ ಧ್ವನಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ