AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ಕಡೆಯಿಂದ ‘ಕೆಜಿಎಫ್ 2’​ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲಿರುವ ವಿಶೇಷ ಅಭಿಮಾನಿ

ಅಕ್ಕಿ ಕಾಳಿನ ಮೇಲೆ ಅಕ್ಷರಗಳನ್ನು ಬರೆಯುವ ಕಲಾವಿದ ವೈವಸ್ವತ್​ ತಾಂಡುಲ. ಆ ಮೂಲಕ ಅವರು ‘ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​’ನಲ್ಲಿ ದಾಖಲೆ ಮಾಡಿದ್ದಾರೆ.

ಪ್ರಶಾಂತ್​ ನೀಲ್​ ಕಡೆಯಿಂದ ‘ಕೆಜಿಎಫ್ 2’​ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲಿರುವ ವಿಶೇಷ ಅಭಿಮಾನಿ
ಯಶ್​-ಪ್ರಶಾಂತ್​ ನೀಲ್
TV9 Web
| Edited By: |

Updated on: Jul 24, 2021 | 8:51 AM

Share

ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ ಯಶ್​ (Yash) ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಈಗಾಗಲೇ ಅದ್ದೂರಿಯಾಗಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿರಬೇಕಿತ್ತು. ಆದರೆ ಕೊರೊನಾ ವೈರಸ್​​ ಎರಡನೇ ಅಲೆಯ ಹಾವಳಿಯಿಂದಾಗಿ ಈ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಹಾಗಂತ ಅಭಿಮಾನಿಗಳ ನಿರೀಕ್ಷೆ ಕಿಂಚಿತ್ತೂ ಕಡಿಮೆ ಆಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಸಿನಿಪ್ರಿಯರು ‘ಕೆಜಿಎಫ್​ 2’ (KGF Chapter 2) ಬಗ್ಗೆ ತಮಗಿರುವ ನಿರೀಕ್ಷೆಯ ಮಟ್ಟವನ್ನು ತೋರ್ಪಡಿಸುತ್ತಿದ್ದಾರೆ. ಅದಕ್ಕೆ ಈಗೊಂದು ಹೊಸ ಉದಾಹರಣೆ ಸಿಕ್ಕಿದೆ. ಅದನ್ನು ಕಂಡು ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಖುಷಿ ಆಗಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ದಿನಾಂಕ ಇನ್ನಷ್ಟೇ ಘೋಷಣೆ ಆಗಬೇಕಿದೆ. ಈ ಚಿತ್ರವನ್ನು ಫಸ್ಟ್​ ಡೇ ಫಸ್ಟ್​ ಶೋ ನೋಡಲು ಅಪಾರ ಅಭಿಮಾನಿಗಳು ಕಾಯುತ್ತಿದ್ದಾರೆ. ಹಾಗಂತ ಮೊದಲ ದಿನವೇ ಎಲ್ಲರಿಗೂ ಟಿಕೆಟ್​ ಸಿಗುವುದಿಲ್ಲ. ಅದಕ್ಕಾಗಿ ಎಷ್ಟೋ ಜನರು ಹರಸಾಹಸ ಮಾಡುತ್ತಾರೆ. ಆದರೆ ಒಬ್ಬ ಅಭಿಮಾನಿಗೆ ತುಂಬ ಸುಲಭವಾಗಿ ‘ಕೆಜಿಎಫ್​ 2’ ಚಿತ್ರದ ಮೊದಲ ದಿನ ಮೊದಲ ಶೋ ಟಿಕೆಟ್​ ಸಿಗಲಿದೆ. ಅದು ಕೂಡ ಸ್ವತಃ ನಿರ್ದೇಶಕ ಪ್ರಶಾಂತ್​ ನೀಲ್​ ಕಡೆಯಿಂದ ಎಂಬುದು ಅಚ್ಚರಿಯ ವಿಚಾರ.

ಹೌದು, ವೈವಸ್ವತ್​ ತಾಂಡುಲ ಎಂಬ ಅಭಿಮಾನಿಗೆ ನಿರ್ದೇಶಕ ಪ್ರಶಾಂತ್​ ಅವರು ಈ ಭರವಸೆ ನೀಡಿದ್ದಾರೆ. ಅಕ್ಕಿ ಕಾಳಿನ ಮೇಲೆ ಅಕ್ಷರಗಳನ್ನು ಬರೆಯುವ ಕಲಾವಿದ ವೈವಸ್ವತ್​ ತಾಂಡುಲ. ಆ ಮೂಲಕ ಅವರು ‘ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​’ನಲ್ಲಿ ದಾಖಲೆ ಮಾಡಿದ್ದಾರೆ. ಈಗ ಅವರು ಅಕ್ಕಿ ಕಾಳಿನ ಮೇಲೆ ‘ಹೊಂಬಾಳೆ’ ಮತ್ತು ‘ಕೆಜಿಎಫ್’ ಎಂದು ಬರೆದು ಚಿತ್ರತಂಡಕ್ಕೆ ಕಳಿಸಿಕೊಟ್ಟಿದ್ದಾರೆ. ಅಲ್ಲದೆ, ಈ ನಿರ್ಮಾಣ ಸಂಸ್ಥೆ​ಯಿಂದ ಬಂದ ಸಿನಿಮಾಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಒಳಗೊಂಡ ಪತ್ರವನ್ನೂ ಬರೆದಿದ್ದಾರೆ.

ಇದನ್ನು ಕಂಡು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಗೆ ಖುಷಿ ಆಗಿದೆ. ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದು, ‘ಹಾಯ್​ ವೈವಸ್ವತ್​. ನಿಮ್ಮ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳು. ಸಂಪರ್ಕದಲ್ಲಿ ಇರೋಣ. ನಿಮಗೆ ನಮ್ಮ ಕಡೆಯಿಂದ ಕೆಜಿಎಫ್​: ಚಾಪ್ಟರ್​ 2 ಚಿತ್ರದ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ಗಳು’ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಎಷ್ಟು ಕೋಟಿಗೆ ಸೇಲ್​ ಆಯ್ತು ‘ಕೆಜಿಎಫ್​ 2’ ಆಡಿಯೋ? ಲಹರಿ ಮ್ಯೂಸಿಕ್​ ತೆಕ್ಕೆಗೆ ಎಲ್ಲ ಭಾಷೆಯ ಸಾಂಗ್ಸ್​

ಅನಂತ್ ನಾಗ್​ ಬಗ್ಗೆ ಯಶ್​ ವಿಶೇಷ ಮಾತು; ಪದ್ಮ ಪ್ರಶಸ್ತಿ ಒತ್ತಾಯಕ್ಕೆ ರಾಕಿಂಗ್​ ಸ್ಟಾರ್​ ಧ್ವನಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ