AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ಕಡೆಯಿಂದ ‘ಕೆಜಿಎಫ್ 2’​ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲಿರುವ ವಿಶೇಷ ಅಭಿಮಾನಿ

ಅಕ್ಕಿ ಕಾಳಿನ ಮೇಲೆ ಅಕ್ಷರಗಳನ್ನು ಬರೆಯುವ ಕಲಾವಿದ ವೈವಸ್ವತ್​ ತಾಂಡುಲ. ಆ ಮೂಲಕ ಅವರು ‘ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​’ನಲ್ಲಿ ದಾಖಲೆ ಮಾಡಿದ್ದಾರೆ.

ಪ್ರಶಾಂತ್​ ನೀಲ್​ ಕಡೆಯಿಂದ ‘ಕೆಜಿಎಫ್ 2’​ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲಿರುವ ವಿಶೇಷ ಅಭಿಮಾನಿ
ಯಶ್​-ಪ್ರಶಾಂತ್​ ನೀಲ್
TV9 Web
| Edited By: |

Updated on: Jul 24, 2021 | 8:51 AM

Share

ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ ಯಶ್​ (Yash) ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಈಗಾಗಲೇ ಅದ್ದೂರಿಯಾಗಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿರಬೇಕಿತ್ತು. ಆದರೆ ಕೊರೊನಾ ವೈರಸ್​​ ಎರಡನೇ ಅಲೆಯ ಹಾವಳಿಯಿಂದಾಗಿ ಈ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಹಾಗಂತ ಅಭಿಮಾನಿಗಳ ನಿರೀಕ್ಷೆ ಕಿಂಚಿತ್ತೂ ಕಡಿಮೆ ಆಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಸಿನಿಪ್ರಿಯರು ‘ಕೆಜಿಎಫ್​ 2’ (KGF Chapter 2) ಬಗ್ಗೆ ತಮಗಿರುವ ನಿರೀಕ್ಷೆಯ ಮಟ್ಟವನ್ನು ತೋರ್ಪಡಿಸುತ್ತಿದ್ದಾರೆ. ಅದಕ್ಕೆ ಈಗೊಂದು ಹೊಸ ಉದಾಹರಣೆ ಸಿಕ್ಕಿದೆ. ಅದನ್ನು ಕಂಡು ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಖುಷಿ ಆಗಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ದಿನಾಂಕ ಇನ್ನಷ್ಟೇ ಘೋಷಣೆ ಆಗಬೇಕಿದೆ. ಈ ಚಿತ್ರವನ್ನು ಫಸ್ಟ್​ ಡೇ ಫಸ್ಟ್​ ಶೋ ನೋಡಲು ಅಪಾರ ಅಭಿಮಾನಿಗಳು ಕಾಯುತ್ತಿದ್ದಾರೆ. ಹಾಗಂತ ಮೊದಲ ದಿನವೇ ಎಲ್ಲರಿಗೂ ಟಿಕೆಟ್​ ಸಿಗುವುದಿಲ್ಲ. ಅದಕ್ಕಾಗಿ ಎಷ್ಟೋ ಜನರು ಹರಸಾಹಸ ಮಾಡುತ್ತಾರೆ. ಆದರೆ ಒಬ್ಬ ಅಭಿಮಾನಿಗೆ ತುಂಬ ಸುಲಭವಾಗಿ ‘ಕೆಜಿಎಫ್​ 2’ ಚಿತ್ರದ ಮೊದಲ ದಿನ ಮೊದಲ ಶೋ ಟಿಕೆಟ್​ ಸಿಗಲಿದೆ. ಅದು ಕೂಡ ಸ್ವತಃ ನಿರ್ದೇಶಕ ಪ್ರಶಾಂತ್​ ನೀಲ್​ ಕಡೆಯಿಂದ ಎಂಬುದು ಅಚ್ಚರಿಯ ವಿಚಾರ.

ಹೌದು, ವೈವಸ್ವತ್​ ತಾಂಡುಲ ಎಂಬ ಅಭಿಮಾನಿಗೆ ನಿರ್ದೇಶಕ ಪ್ರಶಾಂತ್​ ಅವರು ಈ ಭರವಸೆ ನೀಡಿದ್ದಾರೆ. ಅಕ್ಕಿ ಕಾಳಿನ ಮೇಲೆ ಅಕ್ಷರಗಳನ್ನು ಬರೆಯುವ ಕಲಾವಿದ ವೈವಸ್ವತ್​ ತಾಂಡುಲ. ಆ ಮೂಲಕ ಅವರು ‘ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​’ನಲ್ಲಿ ದಾಖಲೆ ಮಾಡಿದ್ದಾರೆ. ಈಗ ಅವರು ಅಕ್ಕಿ ಕಾಳಿನ ಮೇಲೆ ‘ಹೊಂಬಾಳೆ’ ಮತ್ತು ‘ಕೆಜಿಎಫ್’ ಎಂದು ಬರೆದು ಚಿತ್ರತಂಡಕ್ಕೆ ಕಳಿಸಿಕೊಟ್ಟಿದ್ದಾರೆ. ಅಲ್ಲದೆ, ಈ ನಿರ್ಮಾಣ ಸಂಸ್ಥೆ​ಯಿಂದ ಬಂದ ಸಿನಿಮಾಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಒಳಗೊಂಡ ಪತ್ರವನ್ನೂ ಬರೆದಿದ್ದಾರೆ.

ಇದನ್ನು ಕಂಡು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಗೆ ಖುಷಿ ಆಗಿದೆ. ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದು, ‘ಹಾಯ್​ ವೈವಸ್ವತ್​. ನಿಮ್ಮ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳು. ಸಂಪರ್ಕದಲ್ಲಿ ಇರೋಣ. ನಿಮಗೆ ನಮ್ಮ ಕಡೆಯಿಂದ ಕೆಜಿಎಫ್​: ಚಾಪ್ಟರ್​ 2 ಚಿತ್ರದ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ಗಳು’ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಎಷ್ಟು ಕೋಟಿಗೆ ಸೇಲ್​ ಆಯ್ತು ‘ಕೆಜಿಎಫ್​ 2’ ಆಡಿಯೋ? ಲಹರಿ ಮ್ಯೂಸಿಕ್​ ತೆಕ್ಕೆಗೆ ಎಲ್ಲ ಭಾಷೆಯ ಸಾಂಗ್ಸ್​

ಅನಂತ್ ನಾಗ್​ ಬಗ್ಗೆ ಯಶ್​ ವಿಶೇಷ ಮಾತು; ಪದ್ಮ ಪ್ರಶಸ್ತಿ ಒತ್ತಾಯಕ್ಕೆ ರಾಕಿಂಗ್​ ಸ್ಟಾರ್​ ಧ್ವನಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು