Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ಕಡೆಯಿಂದ ‘ಕೆಜಿಎಫ್ 2’​ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲಿರುವ ವಿಶೇಷ ಅಭಿಮಾನಿ

ಅಕ್ಕಿ ಕಾಳಿನ ಮೇಲೆ ಅಕ್ಷರಗಳನ್ನು ಬರೆಯುವ ಕಲಾವಿದ ವೈವಸ್ವತ್​ ತಾಂಡುಲ. ಆ ಮೂಲಕ ಅವರು ‘ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​’ನಲ್ಲಿ ದಾಖಲೆ ಮಾಡಿದ್ದಾರೆ.

ಪ್ರಶಾಂತ್​ ನೀಲ್​ ಕಡೆಯಿಂದ ‘ಕೆಜಿಎಫ್ 2’​ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲಿರುವ ವಿಶೇಷ ಅಭಿಮಾನಿ
ಯಶ್​-ಪ್ರಶಾಂತ್​ ನೀಲ್
Follow us
TV9 Web
| Updated By: ಮದನ್​ ಕುಮಾರ್​

Updated on: Jul 24, 2021 | 8:51 AM

ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ ಯಶ್​ (Yash) ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಈಗಾಗಲೇ ಅದ್ದೂರಿಯಾಗಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿರಬೇಕಿತ್ತು. ಆದರೆ ಕೊರೊನಾ ವೈರಸ್​​ ಎರಡನೇ ಅಲೆಯ ಹಾವಳಿಯಿಂದಾಗಿ ಈ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಹಾಗಂತ ಅಭಿಮಾನಿಗಳ ನಿರೀಕ್ಷೆ ಕಿಂಚಿತ್ತೂ ಕಡಿಮೆ ಆಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಸಿನಿಪ್ರಿಯರು ‘ಕೆಜಿಎಫ್​ 2’ (KGF Chapter 2) ಬಗ್ಗೆ ತಮಗಿರುವ ನಿರೀಕ್ಷೆಯ ಮಟ್ಟವನ್ನು ತೋರ್ಪಡಿಸುತ್ತಿದ್ದಾರೆ. ಅದಕ್ಕೆ ಈಗೊಂದು ಹೊಸ ಉದಾಹರಣೆ ಸಿಕ್ಕಿದೆ. ಅದನ್ನು ಕಂಡು ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಖುಷಿ ಆಗಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ದಿನಾಂಕ ಇನ್ನಷ್ಟೇ ಘೋಷಣೆ ಆಗಬೇಕಿದೆ. ಈ ಚಿತ್ರವನ್ನು ಫಸ್ಟ್​ ಡೇ ಫಸ್ಟ್​ ಶೋ ನೋಡಲು ಅಪಾರ ಅಭಿಮಾನಿಗಳು ಕಾಯುತ್ತಿದ್ದಾರೆ. ಹಾಗಂತ ಮೊದಲ ದಿನವೇ ಎಲ್ಲರಿಗೂ ಟಿಕೆಟ್​ ಸಿಗುವುದಿಲ್ಲ. ಅದಕ್ಕಾಗಿ ಎಷ್ಟೋ ಜನರು ಹರಸಾಹಸ ಮಾಡುತ್ತಾರೆ. ಆದರೆ ಒಬ್ಬ ಅಭಿಮಾನಿಗೆ ತುಂಬ ಸುಲಭವಾಗಿ ‘ಕೆಜಿಎಫ್​ 2’ ಚಿತ್ರದ ಮೊದಲ ದಿನ ಮೊದಲ ಶೋ ಟಿಕೆಟ್​ ಸಿಗಲಿದೆ. ಅದು ಕೂಡ ಸ್ವತಃ ನಿರ್ದೇಶಕ ಪ್ರಶಾಂತ್​ ನೀಲ್​ ಕಡೆಯಿಂದ ಎಂಬುದು ಅಚ್ಚರಿಯ ವಿಚಾರ.

ಹೌದು, ವೈವಸ್ವತ್​ ತಾಂಡುಲ ಎಂಬ ಅಭಿಮಾನಿಗೆ ನಿರ್ದೇಶಕ ಪ್ರಶಾಂತ್​ ಅವರು ಈ ಭರವಸೆ ನೀಡಿದ್ದಾರೆ. ಅಕ್ಕಿ ಕಾಳಿನ ಮೇಲೆ ಅಕ್ಷರಗಳನ್ನು ಬರೆಯುವ ಕಲಾವಿದ ವೈವಸ್ವತ್​ ತಾಂಡುಲ. ಆ ಮೂಲಕ ಅವರು ‘ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​’ನಲ್ಲಿ ದಾಖಲೆ ಮಾಡಿದ್ದಾರೆ. ಈಗ ಅವರು ಅಕ್ಕಿ ಕಾಳಿನ ಮೇಲೆ ‘ಹೊಂಬಾಳೆ’ ಮತ್ತು ‘ಕೆಜಿಎಫ್’ ಎಂದು ಬರೆದು ಚಿತ್ರತಂಡಕ್ಕೆ ಕಳಿಸಿಕೊಟ್ಟಿದ್ದಾರೆ. ಅಲ್ಲದೆ, ಈ ನಿರ್ಮಾಣ ಸಂಸ್ಥೆ​ಯಿಂದ ಬಂದ ಸಿನಿಮಾಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಒಳಗೊಂಡ ಪತ್ರವನ್ನೂ ಬರೆದಿದ್ದಾರೆ.

ಇದನ್ನು ಕಂಡು ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಗೆ ಖುಷಿ ಆಗಿದೆ. ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದು, ‘ಹಾಯ್​ ವೈವಸ್ವತ್​. ನಿಮ್ಮ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳು. ಸಂಪರ್ಕದಲ್ಲಿ ಇರೋಣ. ನಿಮಗೆ ನಮ್ಮ ಕಡೆಯಿಂದ ಕೆಜಿಎಫ್​: ಚಾಪ್ಟರ್​ 2 ಚಿತ್ರದ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ಗಳು’ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಎಷ್ಟು ಕೋಟಿಗೆ ಸೇಲ್​ ಆಯ್ತು ‘ಕೆಜಿಎಫ್​ 2’ ಆಡಿಯೋ? ಲಹರಿ ಮ್ಯೂಸಿಕ್​ ತೆಕ್ಕೆಗೆ ಎಲ್ಲ ಭಾಷೆಯ ಸಾಂಗ್ಸ್​

ಅನಂತ್ ನಾಗ್​ ಬಗ್ಗೆ ಯಶ್​ ವಿಶೇಷ ಮಾತು; ಪದ್ಮ ಪ್ರಶಸ್ತಿ ಒತ್ತಾಯಕ್ಕೆ ರಾಕಿಂಗ್​ ಸ್ಟಾರ್​ ಧ್ವನಿ

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ