AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುನಾಮಿ ಸೃಷ್ಟಿ ಮಾಡಲಿದೆ ‘ಕೆಜಿಎಫ್​: ಚಾಪ್ಟರ್ 2’ ಚಿತ್ರ: ಮೊದಲ ದಿನ ಆಗುವ ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು?

KGF Chapter 2 Box Office Prediction: ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ವಿಚಾರದಲ್ಲಿ ‘ಆರ್​ಆರ್​ಆರ್​’ ಸಿನಿಮಾವನ್ನೂ ಕೂಡ ‘ಕೆಜಿಎಫ್​ 2’ ಚಿತ್ರ ಮೀರಿಸಿದೆ. ಹಾಗಾಗಿ ಮೊದಲ ದಿನ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಗಳಿಕೆಯನ್ನು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಲಿದೆ.

ಸುನಾಮಿ ಸೃಷ್ಟಿ ಮಾಡಲಿದೆ ‘ಕೆಜಿಎಫ್​: ಚಾಪ್ಟರ್ 2’ ಚಿತ್ರ: ಮೊದಲ ದಿನ ಆಗುವ ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು?
ಯಶ್
Follow us
TV9 Web
| Updated By: ಮದನ್​ ಕುಮಾರ್​

Updated on: Apr 13, 2022 | 9:53 AM

ಕೊರೊನಾದಿಂದಾಗಿ ಕಂಗೆಟ್ಟಿದ್ದ ಚಿತ್ರರಂಗ ಈಗ ಚೇತರಿಸಿಕೊಂಡಿದೆ. ಬಣ್ಣದ ಲೋಕದ ವಹಿವಾಟಿಗೆ ಚೇತರಿಕೆ ನೀಡುವಲ್ಲಿ ಈಗಾಗಲೇ ಕೆಲವು ಚಿತ್ರಗಳು ಯಶಸ್ವಿ ಆಗಿವೆ. ‘ದಿ ಕಾಶ್ಮೀರ್​ ಫೈಲ್ಸ್​’, ‘ಆರ್​ಆರ್​ಆರ್​’ ಮುಂತಾದ ಸಿನಿಮಾಗಳು ಭರ್ಜರಿ ಕಲೆಕ್ಷನ್​ ಮಾಡುವ ಮೂಲಕ ಚಿತ್ರರಂಗಕ್ಕೆ ಬೂಸ್ಟ್​ ನೀಡಿವೆ. ಈಗ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಹೊಸ ಭರವಸೆ ಮೂಡಿಸಿದೆ.​ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ಮೊದಲ ದಿನವೇ ಹಲವು ದಾಖಲೆಗಳನ್ನು ಬರೆಯುವ ಸೂಚನೆ ನೀಡುತ್ತಿದೆ. ‘ಕೆಜಿಎಫ್​ 2’ ಬಾಕ್ಸ್​ ಆಫೀಸ್​ ಕಲೆಕ್ಷನ್​ (KGF Chapter 2 Collection) ಬಗ್ಗೆ ಜನರಲ್ಲಿ ಈಗಾಗಲೇ ಭಾರಿ ಕುತೂಹಲ ನಿರ್ಮಾಣ ಆಗಿದೆ. ದೇಶಾದ್ಯಂತ ಸಾವಿರಾರು ಚಿತ್ರಮಂದಿಗಳು ಈ ಸಿನಿಮಾಗಾಗಿ ಮೀಸಲಾಗಿವೆ. ಯಶ್​ (Yash) ನಟನೆಯ, ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಮೊದಲ ದಿನ ಎಷ್ಟು ಗಳಿಕೆ ಮಾಡಬಹುದು ಎಂಬ ಬಗ್ಗೆ ಚರ್ಚೆ ಶುರುವಾಗಿದೆ. ವ್ಯವಹಾರ ಬಲ್ಲವರ ಅಂದಾಜಿನ ಪ್ರಕಾರ ಈ ಚಿತ್ರವು ಬಾಕ್ಸ್​ ಆಫೀಸ್​ನಲ್ಲಿ ಸುನಾಮಿಯನ್ನೇ ಸೃಷ್ಟಿ ಮಾಡಲಿದೆ. ಕೊರೊನಾ ಬಳಿಕ ಯಾವ ಚಿತ್ರವೂ ಮಾಡಿರದ ದಾಖಲೆಯನ್ನು ‘ಕೆಜಿಎಫ್ 2’ ಮಾಡಲಿದೆ ಎಂದು ಅಂದಾಜಿಸಲಾಗುತ್ತಿದೆ.

ಉತ್ತರ ಭಾರತದಲ್ಲಿ ಈ ಚಿತ್ರಕ್ಕೆ ಸಖತ್​ ಹೈಪ್​ ಸೃಷ್ಟಿ ಆಗಿದೆ. ಅದಕ್ಕೆ ತಕ್ಕಂತೆಯೇ ಚಿತ್ರತಂಡ ಭರ್ಜರಿಯಾಗಿ ಪ್ರಚಾರ ಮಾಡಿದೆ. ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ವಿಚಾರದಲ್ಲಿ ‘ಆರ್​ಆರ್​ಆರ್​’ ಸಿನಿಮಾವನ್ನೂ ಕೂಡ ‘ಕೆಜಿಎಫ್​ 2’ ಚಿತ್ರ ಮೀರಿಸಿದೆ. ಇನ್ನೂ ಕೂಡ ಟಿಕೆಟ್​ ಬುಕಿಂಗ್ ಜೋರಾಗಿ ನಡೆಯುತ್ತಿದೆ. ಅದರ ಆಧಾರದಲ್ಲಿ ಹೇಳುವುದಾದರೆ ಮೊದಲ ದಿನ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಗಳಿಕೆಯನ್ನು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಲಿದೆ.

ದಳಪತಿ ವಿಜಯ್ ನಟನೆಯ ‘ಬೀಸ್ಟ್​’ ಸಿನಿಮಾದಿಂದ ‘ಕೆಜಿಎಫ್​ 2’ ಚಿತ್ರದ ಕಲೆಕ್ಷನ್​ಗೆ ಹೊಡೆತ ಬೀಳಬಹುದು ಎಂದು ಈ ಮೊದಲು ಊಹಿಸಲಾಗಿತ್ತು. ಆದರೆ ‘ಬೀಸ್ಟ್​’ ಚಿತ್ರದ ಬಗ್ಗೆ ನೆಗೆಟಿವ್​ ವಿಮರ್ಶೆ ಕೇಳಿಬಂದಿರುವುದರಿಂದ ಜನರು ಆ ಸಿನಿಮಾ ನೋಡಲು ಹಿಂದೇಟು ಹಾಕುವ ಸಾಧ್ಯತೆ ಇದೆ. ಇದರಿಂದ ‘ಕೆಜಿಎಫ್​ 2’ಗೆ ಪ್ಲಸ್​ ಪಾಯಿಂಟ್​ ಆಗಲಿದೆ. ಅತ್ತ ಬಾಲಿವುಡ್​ನಲ್ಲಿ ಶಾಹಿದ್​ ಕಪೂರ್​ ನಟನೆಯ ‘ಜೆರ್ಸಿ’ ಸಿನಿಮಾ ಕೊನೇ ಗಳಿಗೆಯಲ್ಲಿ ರಿಲೀಸ್​ ದಿನಾಂಕ ಮುಂದೂಡಿಕೊಂಡಿದೆ. ಇದರಿಂದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗೆ ಹೆಚ್ಚು ಚಿತ್ರಮಂದಿರಗಳು ಸಿಗಲಿವೆ. ಈ ಕಾರಣದಿಂದ ಚಿತ್ರದ ಕಲೆಕ್ಷನ್​ ಹೆಚ್ಚಲಿದೆ. ಒಟ್ಟಿನಲ್ಲಿ ಈ ಸಿನಿಮಾ ಮೊದಲ ದಿನವೇ ರೆಕಾರ್ಡ್​ ಸೃಷ್ಟಿ ಮಾಡುವುದು ಖಚಿತ.

ಕೊರೊನಾ ಹಾವಳಿ ಕಡಿಮೆ ಆಗಿರುವುದರಿಂದ ಜನರು ಯಾವುದೇ ಭಯವಿಲ್ಲದೇ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿದ್ದಾರೆ. ಒಟಿಟಿ ಮತ್ತು ಕಿರುತೆರೆಯಲ್ಲಿ ನಾನಾ ಬಗೆಯ ಮನರಂಜನಾ ಕಾರ್ಯಕ್ರಮಗಳು ಪ್ರಸಾರವಾಗುತ್ತಿದ್ದರೂ ಕೂಡ ಥಿಯೇಟರ್​ಗೆ ಬಂದು ಸಿನಿಮಾ ನೋಡಿ ಎಂಜಾಯ್​ ಮಾಡುವವಲ್ಲಿ ಪ್ರೇಕ್ಷಕರು ಹಿಂದೆ ಬೀಳುತ್ತಿಲ್ಲ. ಒಳ್ಳೆಯ ಸಿನಿಮಾ ತೆರೆಕಂಡರೆ ಜನರು ಖಂಡಿತವಾಗಿಯೂ ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದು ಈಗಾಗಲೇ ಸಾಬೀತಾಗಿದೆ. ‘ದಿ ಕಾಶ್ಮೀರ್​ ಫೈಲ್ಸ್​’, ‘ಆರ್​ಆರ್​ಆರ್​’, ‘ಪುಷ್ಪ’, ‘ಸೂರ್ಯವಂಶಿ’ ಸಿನಿಮಾಗಳಿಗಿಂತಲೂ ಹೆಚ್ಚಾಗಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಕಲೆಕ್ಷನ್​ ಮಾಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ವಿಜಯ್​ ಕಿರಗಂದೂರು ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸಂಜಯ್​ ದತ್​, ರವೀನಾ ಟಂಡನ್​ ಕೂಡ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ

ಆನ್​ಲೈನ್ ಟಿಕೆಟ್​ ಬುಕಿಂಗ್​ನಲ್ಲಿ ಧೂಳೆಬ್ಬಿಸಿದ ‘ಕೆಜಿಎಫ್​: ಚಾಪ್ಟರ್​ 2’; ಹಲವು ಶೋಗಳು ಸೋಲ್ಡ್​ಔಟ್​

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು