AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’: ಯುವ ರಾಜ್​ಕುಮಾರ್​ ಜತೆ ಹೊಸ ಸಿನಿಮಾ ಘೋಷಣೆ

Hombale Films | Yuva Rajkumar: ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಈಗ ಇನ್ನೊಂದು ಹೊಸ ಚಿತ್ರ ಅನೌನ್ಸ್​ ಮಾಡಿದೆ. ಈ ಬಾರಿ ಯುವ ರಾಜ್​ಕುಮಾರ್​ ಜತೆ ಕೈ ಜೋಡಿಸಿದೆ.

ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’: ಯುವ ರಾಜ್​ಕುಮಾರ್​ ಜತೆ ಹೊಸ ಸಿನಿಮಾ ಘೋಷಣೆ
ಯುವ ರಾಜ್​ಕುಮಾರ್
TV9 Web
| Edited By: |

Updated on:Apr 27, 2022 | 1:30 PM

Share

ಸಿನಿಮಾ ನಿರ್ಮಾಣದಲ್ಲಿ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಹಲವು ಸಾಧನೆಗಳನ್ನು ಮಾಡುತ್ತಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಜಗತ್ತಿನಾದ್ಯಂತ ಖ್ಯಾತಿ ಪಡೆದಿರುವ ಈ ಸಂಸ್ಥೆಯಿಂದ ಈಗ ಹೊಸ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ. ರಾಘವೇಂದ್ರ ರಾಜ್​ಕುಮಾರ್​ ಅವರ ಎರಡನೇ ಪುತ್ರನಾದ ಯುವ ರಾಜ್​ಕುಮಾರ್ (Yuva Rajkumar)​ ಮತ್ತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಜೊತೆ ಸಿನಿಮಾ ಮಾಡಲು ನಿರ್ಮಾಪಕ ವಿಜಯ್​ ಕಿರಗಂದೂರು ಸಜ್ಜಾಗಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಬೆಳ್ಳಿ ಪರದೆಗೆ ಹೊಸದೊಂದು ಪರ್ವ’ ಎಂಬ ಸ್ಲೋಗನ್​ ಮೂಲಕ ದೊಡ್ಡ ಸುದ್ದಿ ನೀಡುವುದಾಗಿ ಮಂಗಳವಾರವೇ (ಏ.26) ಸೂಚನೆ ನೀಡಲಾಗಿತ್ತು. ಅದೇನು ಎಂಬ ಕೌತುಕ ಅಭಿಮಾನಿಗಳಲ್ಲಿ ನಿರ್ಮಾಣ ಆಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ನಿರ್ಮಾಪಕ ವಿಜಯ್​ ಕಿರಗಂದೂರು, ನಟ ಯುವ ರಾಜ್​ಕುಮಾರ್​ ಹಾಗೂ ನಿರ್ದೇಶಕ ಸಂತೋಷ್​ ಆನಂದ್​ ರಾಮ್ (Santhosh Ananddram)​ ಕಾಂಬಿನೇಷನ್​ ಬಗ್ಗೆ ಕೆಲವು ದಿನಗಳ ಹಿಂದೆಯೇ ಗುಸುಗುಸು ಕೇಳಿಬಂದಿತ್ತು. ಅದೀಗ ಅಧಿಕೃತ ಆಗಿದೆ.

ಪುನೀತ್ ರಾಜ್​ಕುಮಾರ್​ ಮತ್ತು ಸಂತೋಷ್​ ಆನಂದ್ ರಾಮ್​ ಅವರು ಕಾಂಬಿನೇಷನ್​ನಲ್ಲಿ ‘ರಾಜಕುಮಾರ’ ಮತ್ತು ‘ಯುವರತ್ನ’ ಸಿನಿಮಾ ಮೂಡಿಬಂದಿದ್ದವು. ಆ ಎರಡೂ ಸಿನಿಮಾಗಳಿಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿತ್ತು. ಅದೇ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಬೇಕಿತ್ತು. ಅದು ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ ಆಗಿರಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿತ್ತು. ಇನ್ನೇನು ಆ ಚಿತ್ರ ಸೆಟ್ಟೇರಬೇಕು ಅನ್ನೋದಕ್ಕೂ ಮುನ್ನವೇ ಪುನೀತ್ ರಾಜ್​ಕುಮಾರ್​ ನಿಧನರಾದರು. ಈಗ ಅದೇ ಕಥೆಗೆ ಯುವ ರಾಜ್​ಕುಮಾರ್​ ಹೀರೋ ಆಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

‘ಅಭಿಮಾನದಿಂದ ಅಭಿಮಾನಕ್ಕಾಗಿ ಈ ನಮ್ಮ ಪಯಣ. ಇರಲಿ ನಿಮ್ಮ ಅಪ್ಪುಗೆ. ಲೆಗೆಸಿ ಮುಂದುವರಿಯುತ್ತದೆ. ಯುವ ರಾಜ್​ಕುಮಾರ್​ ಅವರನ್ನು ಹೊಂಬಾಳೆ ಫಿಲ್ಮ್ಸ್​ ಹೆಮ್ಮೆಯಿಂದ ಪರಿಚಯಿಸುತ್ತಿದೆ’ ಎಂದು ಪೋಸ್ಟ್​ ಮಾಡಲಾಗಿದೆ. ಯುವ ರಾಜ್​ಕುಮಾರ್ ಅವರ ಹೊಸ ಪೋಸ್ಟರ್​ಗಳನ್ನು ಕೂಡ ಹಂಚಿಕೊಳ್ಳಲಾಗಿದೆ. ಈ ಸುದ್ದಿ ಕೇಳಿ ಡಾ. ರಾಜ್​ಕುಮಾರ್​ ಕುಟುಂಬದ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ.

ಯುವ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾ ‘ಯುವ ರಣಧೀರ ಕಂಠೀರವ’ ಚಿತ್ರ ಈ ಹಿಂದೆ ಅನೌನ್ಸ್​ ಆಗಿತ್ತು. ಟೀಸರ್​ ಮೂಲಕ ಭಾರಿ ಕೌತುಕವನ್ನೂ ಮೂಡಿಸಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆ ಚಿತ್ರ ಸಿದ್ಧವಾಗಿರಬೇಕಿತ್ತು. ಕಾರಣಾಂತರಗಳಿಂದ ಆ ಸಿನಿಮಾ ಕೆಲಸಗಳು ವಿಳಂಬ ಆಗಿವೆ. ಹಾಗಾಗಿ ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣ ಮಾಡುವ ಚಿತ್ರವೇ ಯುವ ರಾಜ್​ಕುಮಾರ್​ ಅವರ ಮೊದಲ ಸಿನಿಮಾ ಆಗಿರಲಿದೆ.

ಇನ್ನು, ಸಂತೋಷ್​ ಆನಂದ್​ ರಾಮ್​ ಅವರು ‘ರಾಜಕುಮಾರ’, ‘ಯುವರತ್ನ’, ‘ರಾಘವೇಂದ್ರ ಸ್ಟೋರ್ಸ್​’ ಬಳಿಕ ನಾಲ್ಕನೇ ಬಾರಿಗೆ ‘ಹೊಂಬಾಳೆ ಫಿಲ್ಮ್ಸ್​’ ಜೊತೆ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ:

‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ

ಟೀಸರ್​ ಮೂಲಕ ಗಮನ ಸೆಳೆದ ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’; ಹೊಂಬಾಳೆ ಫಿಲ್ಮ್ಸ್​ ಪ್ರಯತ್ನಕ್ಕೆ ಸಿಕ್ತು ಮೆಚ್ಚುಗೆ

Published On - 9:57 am, Wed, 27 April 22

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ