AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’: ಯುವ ರಾಜ್​ಕುಮಾರ್​ ಜತೆ ಹೊಸ ಸಿನಿಮಾ ಘೋಷಣೆ

Hombale Films | Yuva Rajkumar: ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಈಗ ಇನ್ನೊಂದು ಹೊಸ ಚಿತ್ರ ಅನೌನ್ಸ್​ ಮಾಡಿದೆ. ಈ ಬಾರಿ ಯುವ ರಾಜ್​ಕುಮಾರ್​ ಜತೆ ಕೈ ಜೋಡಿಸಿದೆ.

ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’: ಯುವ ರಾಜ್​ಕುಮಾರ್​ ಜತೆ ಹೊಸ ಸಿನಿಮಾ ಘೋಷಣೆ
ಯುವ ರಾಜ್​ಕುಮಾರ್
TV9 Web
| Edited By: |

Updated on:Apr 27, 2022 | 1:30 PM

Share

ಸಿನಿಮಾ ನಿರ್ಮಾಣದಲ್ಲಿ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಹಲವು ಸಾಧನೆಗಳನ್ನು ಮಾಡುತ್ತಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಜಗತ್ತಿನಾದ್ಯಂತ ಖ್ಯಾತಿ ಪಡೆದಿರುವ ಈ ಸಂಸ್ಥೆಯಿಂದ ಈಗ ಹೊಸ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ. ರಾಘವೇಂದ್ರ ರಾಜ್​ಕುಮಾರ್​ ಅವರ ಎರಡನೇ ಪುತ್ರನಾದ ಯುವ ರಾಜ್​ಕುಮಾರ್ (Yuva Rajkumar)​ ಮತ್ತು ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಜೊತೆ ಸಿನಿಮಾ ಮಾಡಲು ನಿರ್ಮಾಪಕ ವಿಜಯ್​ ಕಿರಗಂದೂರು ಸಜ್ಜಾಗಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಬೆಳ್ಳಿ ಪರದೆಗೆ ಹೊಸದೊಂದು ಪರ್ವ’ ಎಂಬ ಸ್ಲೋಗನ್​ ಮೂಲಕ ದೊಡ್ಡ ಸುದ್ದಿ ನೀಡುವುದಾಗಿ ಮಂಗಳವಾರವೇ (ಏ.26) ಸೂಚನೆ ನೀಡಲಾಗಿತ್ತು. ಅದೇನು ಎಂಬ ಕೌತುಕ ಅಭಿಮಾನಿಗಳಲ್ಲಿ ನಿರ್ಮಾಣ ಆಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ನಿರ್ಮಾಪಕ ವಿಜಯ್​ ಕಿರಗಂದೂರು, ನಟ ಯುವ ರಾಜ್​ಕುಮಾರ್​ ಹಾಗೂ ನಿರ್ದೇಶಕ ಸಂತೋಷ್​ ಆನಂದ್​ ರಾಮ್ (Santhosh Ananddram)​ ಕಾಂಬಿನೇಷನ್​ ಬಗ್ಗೆ ಕೆಲವು ದಿನಗಳ ಹಿಂದೆಯೇ ಗುಸುಗುಸು ಕೇಳಿಬಂದಿತ್ತು. ಅದೀಗ ಅಧಿಕೃತ ಆಗಿದೆ.

ಪುನೀತ್ ರಾಜ್​ಕುಮಾರ್​ ಮತ್ತು ಸಂತೋಷ್​ ಆನಂದ್ ರಾಮ್​ ಅವರು ಕಾಂಬಿನೇಷನ್​ನಲ್ಲಿ ‘ರಾಜಕುಮಾರ’ ಮತ್ತು ‘ಯುವರತ್ನ’ ಸಿನಿಮಾ ಮೂಡಿಬಂದಿದ್ದವು. ಆ ಎರಡೂ ಸಿನಿಮಾಗಳಿಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿತ್ತು. ಅದೇ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಬೇಕಿತ್ತು. ಅದು ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ ಆಗಿರಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿತ್ತು. ಇನ್ನೇನು ಆ ಚಿತ್ರ ಸೆಟ್ಟೇರಬೇಕು ಅನ್ನೋದಕ್ಕೂ ಮುನ್ನವೇ ಪುನೀತ್ ರಾಜ್​ಕುಮಾರ್​ ನಿಧನರಾದರು. ಈಗ ಅದೇ ಕಥೆಗೆ ಯುವ ರಾಜ್​ಕುಮಾರ್​ ಹೀರೋ ಆಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

‘ಅಭಿಮಾನದಿಂದ ಅಭಿಮಾನಕ್ಕಾಗಿ ಈ ನಮ್ಮ ಪಯಣ. ಇರಲಿ ನಿಮ್ಮ ಅಪ್ಪುಗೆ. ಲೆಗೆಸಿ ಮುಂದುವರಿಯುತ್ತದೆ. ಯುವ ರಾಜ್​ಕುಮಾರ್​ ಅವರನ್ನು ಹೊಂಬಾಳೆ ಫಿಲ್ಮ್ಸ್​ ಹೆಮ್ಮೆಯಿಂದ ಪರಿಚಯಿಸುತ್ತಿದೆ’ ಎಂದು ಪೋಸ್ಟ್​ ಮಾಡಲಾಗಿದೆ. ಯುವ ರಾಜ್​ಕುಮಾರ್ ಅವರ ಹೊಸ ಪೋಸ್ಟರ್​ಗಳನ್ನು ಕೂಡ ಹಂಚಿಕೊಳ್ಳಲಾಗಿದೆ. ಈ ಸುದ್ದಿ ಕೇಳಿ ಡಾ. ರಾಜ್​ಕುಮಾರ್​ ಕುಟುಂಬದ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ.

ಯುವ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾ ‘ಯುವ ರಣಧೀರ ಕಂಠೀರವ’ ಚಿತ್ರ ಈ ಹಿಂದೆ ಅನೌನ್ಸ್​ ಆಗಿತ್ತು. ಟೀಸರ್​ ಮೂಲಕ ಭಾರಿ ಕೌತುಕವನ್ನೂ ಮೂಡಿಸಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆ ಚಿತ್ರ ಸಿದ್ಧವಾಗಿರಬೇಕಿತ್ತು. ಕಾರಣಾಂತರಗಳಿಂದ ಆ ಸಿನಿಮಾ ಕೆಲಸಗಳು ವಿಳಂಬ ಆಗಿವೆ. ಹಾಗಾಗಿ ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣ ಮಾಡುವ ಚಿತ್ರವೇ ಯುವ ರಾಜ್​ಕುಮಾರ್​ ಅವರ ಮೊದಲ ಸಿನಿಮಾ ಆಗಿರಲಿದೆ.

ಇನ್ನು, ಸಂತೋಷ್​ ಆನಂದ್​ ರಾಮ್​ ಅವರು ‘ರಾಜಕುಮಾರ’, ‘ಯುವರತ್ನ’, ‘ರಾಘವೇಂದ್ರ ಸ್ಟೋರ್ಸ್​’ ಬಳಿಕ ನಾಲ್ಕನೇ ಬಾರಿಗೆ ‘ಹೊಂಬಾಳೆ ಫಿಲ್ಮ್ಸ್​’ ಜೊತೆ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ:

‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ

ಟೀಸರ್​ ಮೂಲಕ ಗಮನ ಸೆಳೆದ ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’; ಹೊಂಬಾಳೆ ಫಿಲ್ಮ್ಸ್​ ಪ್ರಯತ್ನಕ್ಕೆ ಸಿಕ್ತು ಮೆಚ್ಚುಗೆ

Published On - 9:57 am, Wed, 27 April 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು