AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Yash: ಜುಲೈ 16. ಈ ದಿನಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿದೆ. ಈ ದಿನದಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು
ಯಶ್
TV9 Web
| Edited By: |

Updated on:Jun 23, 2021 | 7:45 PM

Share

 ಜುಲೈ 16ಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿತ್ತು. ಆ ದಿನ ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ಕಾಂಬಿನೇಷನ್​ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತವಾಗಿದೆ. ಹೀಗಿರುವಾಗಲ ಸಿನಿಮಾದ ಹೊಸ ರಿಲೀಸ್​ ದಿನಾಂಕದ ಬಗ್ಗೆ ಊಹಾಪೋಹಗಳು ಹರಿದಾಡಿವೆ.  

ಜುಲೈ 16ರಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ. ಚಿತ್ರತಂಡ ಈಗಾಗಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಆದರೆ, ಇನ್ನು, ಕೆಲವೇ ದಿನಗಳು ಬಾಕಿ ಇದ್ದು, ಚಿತ್ರಮಂದಿರಗಳು ಓಪನ್​ ಆಗಿಲ್ಲ.

ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ. ನೇರವಾಗಿ ಒಟಿಟಿಯಲ್ಲಿ ಚಿತ್ರ ರಿಲೀಸ್​ ಮಾಡುವ ಸಾಧ್ಯತೆ ಕೂಡ ಕಡಿಮೆಯೇ. ಕೊನೆಯದಾಗಿ ಉಳಿದುಕೊಂಡಿರುವ ಆಯ್ಕೆ ಎಂದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದು. ಈಗ ಚಿತ್ರತಂಡ ಅದನ್ನೇ ಮಾಡಿದ್ದು, ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ ಎನ್ನುವ ಮಾತು ಹರಿದಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಕೆಜಿಎಫ್​ 2ನಲ್ಲಿ ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 6:14 pm, Wed, 23 June 21

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್