AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Yash: ಜುಲೈ 16. ಈ ದಿನಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿದೆ. ಈ ದಿನದಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು
ಯಶ್
TV9 Web
| Edited By: |

Updated on:Jun 23, 2021 | 7:45 PM

Share

 ಜುಲೈ 16ಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿತ್ತು. ಆ ದಿನ ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ಕಾಂಬಿನೇಷನ್​ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತವಾಗಿದೆ. ಹೀಗಿರುವಾಗಲ ಸಿನಿಮಾದ ಹೊಸ ರಿಲೀಸ್​ ದಿನಾಂಕದ ಬಗ್ಗೆ ಊಹಾಪೋಹಗಳು ಹರಿದಾಡಿವೆ.  

ಜುಲೈ 16ರಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ. ಚಿತ್ರತಂಡ ಈಗಾಗಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಆದರೆ, ಇನ್ನು, ಕೆಲವೇ ದಿನಗಳು ಬಾಕಿ ಇದ್ದು, ಚಿತ್ರಮಂದಿರಗಳು ಓಪನ್​ ಆಗಿಲ್ಲ.

ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ. ನೇರವಾಗಿ ಒಟಿಟಿಯಲ್ಲಿ ಚಿತ್ರ ರಿಲೀಸ್​ ಮಾಡುವ ಸಾಧ್ಯತೆ ಕೂಡ ಕಡಿಮೆಯೇ. ಕೊನೆಯದಾಗಿ ಉಳಿದುಕೊಂಡಿರುವ ಆಯ್ಕೆ ಎಂದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದು. ಈಗ ಚಿತ್ರತಂಡ ಅದನ್ನೇ ಮಾಡಿದ್ದು, ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ ಎನ್ನುವ ಮಾತು ಹರಿದಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಕೆಜಿಎಫ್​ 2ನಲ್ಲಿ ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 6:14 pm, Wed, 23 June 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ