AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Yash: ಜುಲೈ 16. ಈ ದಿನಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿದೆ. ಈ ದಿನದಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು
ಯಶ್
TV9 Web
| Edited By: |

Updated on:Jun 23, 2021 | 7:45 PM

Share

 ಜುಲೈ 16ಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿತ್ತು. ಆ ದಿನ ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ಕಾಂಬಿನೇಷನ್​ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತವಾಗಿದೆ. ಹೀಗಿರುವಾಗಲ ಸಿನಿಮಾದ ಹೊಸ ರಿಲೀಸ್​ ದಿನಾಂಕದ ಬಗ್ಗೆ ಊಹಾಪೋಹಗಳು ಹರಿದಾಡಿವೆ.  

ಜುಲೈ 16ರಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ. ಚಿತ್ರತಂಡ ಈಗಾಗಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಆದರೆ, ಇನ್ನು, ಕೆಲವೇ ದಿನಗಳು ಬಾಕಿ ಇದ್ದು, ಚಿತ್ರಮಂದಿರಗಳು ಓಪನ್​ ಆಗಿಲ್ಲ.

ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ. ನೇರವಾಗಿ ಒಟಿಟಿಯಲ್ಲಿ ಚಿತ್ರ ರಿಲೀಸ್​ ಮಾಡುವ ಸಾಧ್ಯತೆ ಕೂಡ ಕಡಿಮೆಯೇ. ಕೊನೆಯದಾಗಿ ಉಳಿದುಕೊಂಡಿರುವ ಆಯ್ಕೆ ಎಂದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದು. ಈಗ ಚಿತ್ರತಂಡ ಅದನ್ನೇ ಮಾಡಿದ್ದು, ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ ಎನ್ನುವ ಮಾತು ಹರಿದಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಕೆಜಿಎಫ್​ 2ನಲ್ಲಿ ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 6:14 pm, Wed, 23 June 21

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ