AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Yash: ಜುಲೈ 16. ಈ ದಿನಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿದೆ. ಈ ದಿನದಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು
ಯಶ್
TV9 Web
| Edited By: |

Updated on:Jun 23, 2021 | 7:45 PM

Share

 ಜುಲೈ 16ಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿತ್ತು. ಆ ದಿನ ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ಕಾಂಬಿನೇಷನ್​ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತವಾಗಿದೆ. ಹೀಗಿರುವಾಗಲ ಸಿನಿಮಾದ ಹೊಸ ರಿಲೀಸ್​ ದಿನಾಂಕದ ಬಗ್ಗೆ ಊಹಾಪೋಹಗಳು ಹರಿದಾಡಿವೆ.  

ಜುಲೈ 16ರಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ. ಚಿತ್ರತಂಡ ಈಗಾಗಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಆದರೆ, ಇನ್ನು, ಕೆಲವೇ ದಿನಗಳು ಬಾಕಿ ಇದ್ದು, ಚಿತ್ರಮಂದಿರಗಳು ಓಪನ್​ ಆಗಿಲ್ಲ.

ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ. ನೇರವಾಗಿ ಒಟಿಟಿಯಲ್ಲಿ ಚಿತ್ರ ರಿಲೀಸ್​ ಮಾಡುವ ಸಾಧ್ಯತೆ ಕೂಡ ಕಡಿಮೆಯೇ. ಕೊನೆಯದಾಗಿ ಉಳಿದುಕೊಂಡಿರುವ ಆಯ್ಕೆ ಎಂದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದು. ಈಗ ಚಿತ್ರತಂಡ ಅದನ್ನೇ ಮಾಡಿದ್ದು, ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ ಎನ್ನುವ ಮಾತು ಹರಿದಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಕೆಜಿಎಫ್​ 2ನಲ್ಲಿ ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 6:14 pm, Wed, 23 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್