AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Yash: ಜುಲೈ 16. ಈ ದಿನಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿದೆ. ಈ ದಿನದಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು
ಯಶ್
TV9 Web
| Edited By: |

Updated on:Jun 23, 2021 | 7:45 PM

Share

 ಜುಲೈ 16ಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿತ್ತು. ಆ ದಿನ ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ಕಾಂಬಿನೇಷನ್​ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತವಾಗಿದೆ. ಹೀಗಿರುವಾಗಲ ಸಿನಿಮಾದ ಹೊಸ ರಿಲೀಸ್​ ದಿನಾಂಕದ ಬಗ್ಗೆ ಊಹಾಪೋಹಗಳು ಹರಿದಾಡಿವೆ.  

ಜುಲೈ 16ರಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ. ಚಿತ್ರತಂಡ ಈಗಾಗಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಆದರೆ, ಇನ್ನು, ಕೆಲವೇ ದಿನಗಳು ಬಾಕಿ ಇದ್ದು, ಚಿತ್ರಮಂದಿರಗಳು ಓಪನ್​ ಆಗಿಲ್ಲ.

ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ. ನೇರವಾಗಿ ಒಟಿಟಿಯಲ್ಲಿ ಚಿತ್ರ ರಿಲೀಸ್​ ಮಾಡುವ ಸಾಧ್ಯತೆ ಕೂಡ ಕಡಿಮೆಯೇ. ಕೊನೆಯದಾಗಿ ಉಳಿದುಕೊಂಡಿರುವ ಆಯ್ಕೆ ಎಂದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದು. ಈಗ ಚಿತ್ರತಂಡ ಅದನ್ನೇ ಮಾಡಿದ್ದು, ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ ಎನ್ನುವ ಮಾತು ಹರಿದಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಕೆಜಿಎಫ್​ 2ನಲ್ಲಿ ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 6:14 pm, Wed, 23 June 21

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!