AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Yash: ಜುಲೈ 16. ಈ ದಿನಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿದೆ. ಈ ದಿನದಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು
ಯಶ್
TV9 Web
| Edited By: |

Updated on:Jun 23, 2021 | 7:45 PM

Share

 ಜುಲೈ 16ಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿತ್ತು. ಆ ದಿನ ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ಕಾಂಬಿನೇಷನ್​ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತವಾಗಿದೆ. ಹೀಗಿರುವಾಗಲ ಸಿನಿಮಾದ ಹೊಸ ರಿಲೀಸ್​ ದಿನಾಂಕದ ಬಗ್ಗೆ ಊಹಾಪೋಹಗಳು ಹರಿದಾಡಿವೆ.  

ಜುಲೈ 16ರಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ. ಚಿತ್ರತಂಡ ಈಗಾಗಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಆದರೆ, ಇನ್ನು, ಕೆಲವೇ ದಿನಗಳು ಬಾಕಿ ಇದ್ದು, ಚಿತ್ರಮಂದಿರಗಳು ಓಪನ್​ ಆಗಿಲ್ಲ.

ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ. ನೇರವಾಗಿ ಒಟಿಟಿಯಲ್ಲಿ ಚಿತ್ರ ರಿಲೀಸ್​ ಮಾಡುವ ಸಾಧ್ಯತೆ ಕೂಡ ಕಡಿಮೆಯೇ. ಕೊನೆಯದಾಗಿ ಉಳಿದುಕೊಂಡಿರುವ ಆಯ್ಕೆ ಎಂದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದು. ಈಗ ಚಿತ್ರತಂಡ ಅದನ್ನೇ ಮಾಡಿದ್ದು, ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ ಎನ್ನುವ ಮಾತು ಹರಿದಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಕೆಜಿಎಫ್​ 2ನಲ್ಲಿ ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 6:14 pm, Wed, 23 June 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು