AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Yash: ಜುಲೈ 16. ಈ ದಿನಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿದೆ. ಈ ದಿನದಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು
ಯಶ್
TV9 Web
| Edited By: |

Updated on:Jun 23, 2021 | 7:45 PM

Share

 ಜುಲೈ 16ಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿತ್ತು. ಆ ದಿನ ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ಕಾಂಬಿನೇಷನ್​ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತವಾಗಿದೆ. ಹೀಗಿರುವಾಗಲ ಸಿನಿಮಾದ ಹೊಸ ರಿಲೀಸ್​ ದಿನಾಂಕದ ಬಗ್ಗೆ ಊಹಾಪೋಹಗಳು ಹರಿದಾಡಿವೆ.  

ಜುಲೈ 16ರಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ. ಚಿತ್ರತಂಡ ಈಗಾಗಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಆದರೆ, ಇನ್ನು, ಕೆಲವೇ ದಿನಗಳು ಬಾಕಿ ಇದ್ದು, ಚಿತ್ರಮಂದಿರಗಳು ಓಪನ್​ ಆಗಿಲ್ಲ.

ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ. ನೇರವಾಗಿ ಒಟಿಟಿಯಲ್ಲಿ ಚಿತ್ರ ರಿಲೀಸ್​ ಮಾಡುವ ಸಾಧ್ಯತೆ ಕೂಡ ಕಡಿಮೆಯೇ. ಕೊನೆಯದಾಗಿ ಉಳಿದುಕೊಂಡಿರುವ ಆಯ್ಕೆ ಎಂದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದು. ಈಗ ಚಿತ್ರತಂಡ ಅದನ್ನೇ ಮಾಡಿದ್ದು, ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ ಎನ್ನುವ ಮಾತು ಹರಿದಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಕೆಜಿಎಫ್​ 2ನಲ್ಲಿ ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 6:14 pm, Wed, 23 June 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ