Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ದಿನಕ್ಕೆ ಬಾಲಿವುಡ್​ನಲ್ಲಿ 143 ಕೋಟಿ ರೂಪಾಯಿ ಬಾಚಿಕೊಂಡ ‘ಕೆಜಿಎಫ್: ಚಾಪ್ಟರ್ 2’

ಮೊದಲ ದಿನ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 53.95 ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ‘ವಾರ್’ ಹಾಗೂ ‘ಥಗ್ಸ್​ ಆಫ್ ಹಿಂದುಸ್ತಾನ್’ ಚಿತ್ರಗಳ ದಾಖಲೆಯನ್ನು ಈ ಸಿನಿಮಾ ಮುರಿದು ಹಾಕಿತ್ತು.

ಮೂರೇ ದಿನಕ್ಕೆ ಬಾಲಿವುಡ್​ನಲ್ಲಿ 143 ಕೋಟಿ ರೂಪಾಯಿ ಬಾಚಿಕೊಂಡ ‘ಕೆಜಿಎಫ್: ಚಾಪ್ಟರ್ 2’
ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Apr 17, 2022 | 1:15 PM

ಯಶ್ (Yash) ನಟನೆಯ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ (KGF Chapter 2) ಬಾಲಿವುಡ್​ ಅಂಗಳದಲ್ಲಿ ಎಬ್ಬಿಸಿದ ತೂಫಾನ್ ಸದ್ಯಕ್ಕೆ ತಣ್ಣಗಾಗುವ ಸೂಚನೆ ಸಿಗುತ್ತಿಲ್ಲ. ಈ ಚಿತ್ರ ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈಗ ಮೂರನೇ ದಿನದ (ಏಪ್ರಿಲ್ 16) ಕಲೆಕ್ಷನ್ ಲೆಕ್ಕಾಚಾರ ಹೊರಬಿದ್ದಿದೆ. ಮೂರನೇ ದಿನ ಈ ಸಿನಿಮಾ 42.95 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಈ ಸಿನಿಮಾದ ಕಲೆಕ್ಷನ್ 143 ಕೋಟಿ ರೂಪಾಯಿ ಆಗಿದೆ. ನಾಲ್ಕೇ ದಿನಕ್ಕೆ ಚಿತ್ರದ ಕಲೆಕ್ಷನ್​ 200 ಕೋಟಿ ರೂಪಾಯಿ ಗಡಿ ಸಮೀಪಿಸಲಿದೆ ಅನ್ನೋದು ಚಿತ್ರದ ಹೆಚ್ಚುಗಾರಿಕೆ.

ಮೊದಲ ದಿನ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 53.95 ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ‘ವಾರ್’ ಹಾಗೂ ‘ಥಗ್ಸ್​ ಆಫ್ ಹಿಂದುಸ್ತಾನ್’ ಚಿತ್ರಗಳ ದಾಖಲೆಯನ್ನು ಈ ಸಿನಿಮಾ ಮುರಿದು ಹಾಕಿತ್ತು. ಮೂರನೇ ದಿನದ ಕಲೆಕ್ಷನ್ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದರು. ಶುಕ್ರವಾರ (ಏಪ್ರಿಲ್ 15) ಈ ಸಿನಿಮಾದ ಗಳಿಕೆ 46.79 ಕೋಟಿ ರೂಪಾಯಿ ಆಗಿತ್ತು. ಈ ಮೂಲಕ ಎರಡೇ ದಿನಕ್ಕೆ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಮೂರನೇ ದಿನವೂ ಚಿತ್ರದ ಅಬ್ಬರ ಜೋರಾಗಿದೆ.

ಸಿನಿಮಾಗೆ ಮೆಚ್ಚುಗೆ ವ್ಯಕ್ತವಾದರೆ ವೀಕೆಂಡ್​ನಲ್ಲಿ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಣೆ ಮಾಡುತ್ತಾರೆ. ಇದರಿಂದ ಸಹಜವಾಗಿಯೇ ಸಿನಿಮಾದ ಕಲೆಕ್ಷನ್ ಹೆಚ್ಚುತ್ತದೆ. ಆದರೆ, ಸೋಮವಾರ ಸಿನಿಮಾ ಯಾವ ರೀತಿಯ ಕಲೆಕ್ಷನ್ ಮಾಡುತ್ತದೆ ಎಂಬುದರ ಮೇಲೆ ಮುಂದಿನ ದಿನಗಳಲ್ಲಿ ಚಿತ್ರ ಹೇಗೆ ಪರ್ಫಾರ್ಮೆನ್ಸ್ ಮಾಡಲಿದೆ ಎಂಬುದು ನಿರ್ಧಾರ ಆಗಲಿದೆ. ‘ಕೆಜಿಎಫ್ 2’ ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆದರೆ ಸುಲಭವಾಗಿ 300 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

ಕನ್ನಡದ ಸಿನಿಮಾವೊಂದು ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ಈ ಮಟ್ಟಿಗೆ ಗಳಿಕೆ ಮಾಡಿದ್ದು ಇದೇ ಮೊದಲು. ಬಾಲಿವುಡ್​ನಲ್ಲಿ ‘ಆರ್​ಆರ್​ಆರ್’ ಸಿನಿಮಾ ಗಳಿಕೆ 250 ಕೋಟಿ ರೂಪಾಯಿ ಸಮೀಪಿಸಿದೆ. ಈ ಗಳಿಕೆಯನ್ನು ‘ಕೆಜಿಎಫ್​ 2’ ಮುರಿಯಲಿದೆಯೇ ಎಂಬುದು ಸದ್ಯದ ಪ್ರಶ್ನೆ. ಇನ್ನು, ತಮಿಳುನಾಡಿನಲ್ಲಿ ‘ಬೀಸ್ಟ್’ ಸಿನಿಮಾಗೆ ‘ಕೆಜಿಎಫ್ 2’ನಿಂದ ಹಿನ್ನಡೆ ಆಗಿದೆ. ತಮಿಳುನಾಡಿನ ಗಳಿಕೆ ವಿಚಾರದಲ್ಲಿ ದಳಪತಿ ವಿಜಯ್ ಚಿತ್ರವನ್ನು ಯಶ್ ಸಿನಿಮಾ ಹಿಂದಿಕ್ಕಿದೆ.

ಇದನ್ನೂ ಓದಿ:  Sanjay Dutt: ಸತತ 2-3 ಗಂಟೆ ಕಣ್ಣೀರು ಹಾಕಿದ್ದ ‘ಕೆಜಿಎಫ್ 2’ ಅಧೀರ; ಕಾರಣವೇನು?

‘ಕೆಜಿಎಫ್​ 2’ ಎದುರು ಸೋತ ‘ಬೀಸ್ಟ್​’ ಚಿತ್ರಕ್ಕೆ ಈಗ ಉಳಿದಿದ್ದು ಒಟಿಟಿ ಆಯ್ಕೆ ಮಾತ್ರ; ಯಾವಾಗ ರಿಲೀಸ್​?

Published On - 1:12 pm, Sun, 17 April 22

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್