AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ದಿನಕ್ಕೆ ಬಾಲಿವುಡ್​ನಲ್ಲಿ 143 ಕೋಟಿ ರೂಪಾಯಿ ಬಾಚಿಕೊಂಡ ‘ಕೆಜಿಎಫ್: ಚಾಪ್ಟರ್ 2’

ಮೊದಲ ದಿನ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 53.95 ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ‘ವಾರ್’ ಹಾಗೂ ‘ಥಗ್ಸ್​ ಆಫ್ ಹಿಂದುಸ್ತಾನ್’ ಚಿತ್ರಗಳ ದಾಖಲೆಯನ್ನು ಈ ಸಿನಿಮಾ ಮುರಿದು ಹಾಕಿತ್ತು.

ಮೂರೇ ದಿನಕ್ಕೆ ಬಾಲಿವುಡ್​ನಲ್ಲಿ 143 ಕೋಟಿ ರೂಪಾಯಿ ಬಾಚಿಕೊಂಡ ‘ಕೆಜಿಎಫ್: ಚಾಪ್ಟರ್ 2’
ಯಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Apr 17, 2022 | 1:15 PM

Share

ಯಶ್ (Yash) ನಟನೆಯ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ (KGF Chapter 2) ಬಾಲಿವುಡ್​ ಅಂಗಳದಲ್ಲಿ ಎಬ್ಬಿಸಿದ ತೂಫಾನ್ ಸದ್ಯಕ್ಕೆ ತಣ್ಣಗಾಗುವ ಸೂಚನೆ ಸಿಗುತ್ತಿಲ್ಲ. ಈ ಚಿತ್ರ ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈಗ ಮೂರನೇ ದಿನದ (ಏಪ್ರಿಲ್ 16) ಕಲೆಕ್ಷನ್ ಲೆಕ್ಕಾಚಾರ ಹೊರಬಿದ್ದಿದೆ. ಮೂರನೇ ದಿನ ಈ ಸಿನಿಮಾ 42.95 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಈ ಸಿನಿಮಾದ ಕಲೆಕ್ಷನ್ 143 ಕೋಟಿ ರೂಪಾಯಿ ಆಗಿದೆ. ನಾಲ್ಕೇ ದಿನಕ್ಕೆ ಚಿತ್ರದ ಕಲೆಕ್ಷನ್​ 200 ಕೋಟಿ ರೂಪಾಯಿ ಗಡಿ ಸಮೀಪಿಸಲಿದೆ ಅನ್ನೋದು ಚಿತ್ರದ ಹೆಚ್ಚುಗಾರಿಕೆ.

ಮೊದಲ ದಿನ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 53.95 ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ‘ವಾರ್’ ಹಾಗೂ ‘ಥಗ್ಸ್​ ಆಫ್ ಹಿಂದುಸ್ತಾನ್’ ಚಿತ್ರಗಳ ದಾಖಲೆಯನ್ನು ಈ ಸಿನಿಮಾ ಮುರಿದು ಹಾಕಿತ್ತು. ಮೂರನೇ ದಿನದ ಕಲೆಕ್ಷನ್ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದರು. ಶುಕ್ರವಾರ (ಏಪ್ರಿಲ್ 15) ಈ ಸಿನಿಮಾದ ಗಳಿಕೆ 46.79 ಕೋಟಿ ರೂಪಾಯಿ ಆಗಿತ್ತು. ಈ ಮೂಲಕ ಎರಡೇ ದಿನಕ್ಕೆ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಮೂರನೇ ದಿನವೂ ಚಿತ್ರದ ಅಬ್ಬರ ಜೋರಾಗಿದೆ.

ಸಿನಿಮಾಗೆ ಮೆಚ್ಚುಗೆ ವ್ಯಕ್ತವಾದರೆ ವೀಕೆಂಡ್​ನಲ್ಲಿ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಣೆ ಮಾಡುತ್ತಾರೆ. ಇದರಿಂದ ಸಹಜವಾಗಿಯೇ ಸಿನಿಮಾದ ಕಲೆಕ್ಷನ್ ಹೆಚ್ಚುತ್ತದೆ. ಆದರೆ, ಸೋಮವಾರ ಸಿನಿಮಾ ಯಾವ ರೀತಿಯ ಕಲೆಕ್ಷನ್ ಮಾಡುತ್ತದೆ ಎಂಬುದರ ಮೇಲೆ ಮುಂದಿನ ದಿನಗಳಲ್ಲಿ ಚಿತ್ರ ಹೇಗೆ ಪರ್ಫಾರ್ಮೆನ್ಸ್ ಮಾಡಲಿದೆ ಎಂಬುದು ನಿರ್ಧಾರ ಆಗಲಿದೆ. ‘ಕೆಜಿಎಫ್ 2’ ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆದರೆ ಸುಲಭವಾಗಿ 300 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

ಕನ್ನಡದ ಸಿನಿಮಾವೊಂದು ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ಈ ಮಟ್ಟಿಗೆ ಗಳಿಕೆ ಮಾಡಿದ್ದು ಇದೇ ಮೊದಲು. ಬಾಲಿವುಡ್​ನಲ್ಲಿ ‘ಆರ್​ಆರ್​ಆರ್’ ಸಿನಿಮಾ ಗಳಿಕೆ 250 ಕೋಟಿ ರೂಪಾಯಿ ಸಮೀಪಿಸಿದೆ. ಈ ಗಳಿಕೆಯನ್ನು ‘ಕೆಜಿಎಫ್​ 2’ ಮುರಿಯಲಿದೆಯೇ ಎಂಬುದು ಸದ್ಯದ ಪ್ರಶ್ನೆ. ಇನ್ನು, ತಮಿಳುನಾಡಿನಲ್ಲಿ ‘ಬೀಸ್ಟ್’ ಸಿನಿಮಾಗೆ ‘ಕೆಜಿಎಫ್ 2’ನಿಂದ ಹಿನ್ನಡೆ ಆಗಿದೆ. ತಮಿಳುನಾಡಿನ ಗಳಿಕೆ ವಿಚಾರದಲ್ಲಿ ದಳಪತಿ ವಿಜಯ್ ಚಿತ್ರವನ್ನು ಯಶ್ ಸಿನಿಮಾ ಹಿಂದಿಕ್ಕಿದೆ.

ಇದನ್ನೂ ಓದಿ:  Sanjay Dutt: ಸತತ 2-3 ಗಂಟೆ ಕಣ್ಣೀರು ಹಾಕಿದ್ದ ‘ಕೆಜಿಎಫ್ 2’ ಅಧೀರ; ಕಾರಣವೇನು?

‘ಕೆಜಿಎಫ್​ 2’ ಎದುರು ಸೋತ ‘ಬೀಸ್ಟ್​’ ಚಿತ್ರಕ್ಕೆ ಈಗ ಉಳಿದಿದ್ದು ಒಟಿಟಿ ಆಯ್ಕೆ ಮಾತ್ರ; ಯಾವಾಗ ರಿಲೀಸ್​?

Published On - 1:12 pm, Sun, 17 April 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ