AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​-2ನಲ್ಲಿ ಅನಂತ್​ ನಾಗ್​-ಪ್ರಕಾಶ್​ ರೈ​​ ಪಾತ್ರಕ್ಕೂ ಇರುವ ಸಂಬಂಧವೇನು? ಪ್ರಶಾಂತ್​ ನೀಲ್​ ಬಿಚ್ಚಿಟ್ರು ಅಸಲಿ ವಿಚಾರ

ಅನಂತ್​ ನಾಗ್​ ಪಾತ್ರ ಸಿನಿಮಾದಲ್ಲಿ ಇಲ್ಲ ಎಂಬುದನ್ನು ಚಿತ್ರತಂಡ ಒಪ್ಪಿಕೊಂಡಿಲ್ಲ. ಆದರೆ, ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಪ್ರಕಾಶ್​ ರೈ ಅವರ ಪಾತ್ರವೇ ಸಿನಿಮಾದ ಕಥೆಯ ವಿವರಣೆ ನೀಡಲಿದೆಯಂತೆ.

ಕೆಜಿಎಫ್​-2ನಲ್ಲಿ ಅನಂತ್​ ನಾಗ್​-ಪ್ರಕಾಶ್​ ರೈ​​ ಪಾತ್ರಕ್ಕೂ ಇರುವ ಸಂಬಂಧವೇನು? ಪ್ರಶಾಂತ್​ ನೀಲ್​ ಬಿಚ್ಚಿಟ್ರು ಅಸಲಿ ವಿಚಾರ
ಅನಂತ್​ ನಾಗ್​-ಪ್ರಕಾಶ್​ ರೈ
Follow us
ರಾಜೇಶ್ ದುಗ್ಗುಮನೆ
|

Updated on: Mar 26, 2021 | 5:56 PM

ಕೆಜಿಎಫ್​-2 ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಜನವರಿಯಲ್ಲಿ ರಿಲೀಸ್​ ಆಗಿದ್ದ ಸಿನಿಮಾದ ಟೀಸರ್​ ಈಗಾಗಲೇ ಹೊಸ ದಾಖಲೆ ಸೃಷ್ಟಿ ಮಾಡಿದೆ. ಸಿನಿಮಾ ಬಗ್ಗೆ ನಿರೀಕ್ಷೆ ಅಷ್ಟೇ ಅಲ್ಲ, ಕೆಲ ಗೊಂದಲ ಕೂಡ ಸೃಷ್ಟಿ ಆಗಿತ್ತು. ಈ ಗೊಂದಲವನ್ನು ನಿರ್ದೇಶಕ ಪ್ರಶಾಂತ್​ ನೀಲ್​ ಬಗೆಹರಿಸುವ ಕೆಲಸ ಮಾಡಿದ್ದಾರೆ. ಕೆಜಿಎಫ್​-1ರಲ್ಲಿ ಆನಂದ್​ ಇಂಗಳಗಿ ಪಾತ್ರದಲ್ಲಿ ಅನಂತ್​ ನಾಗ್​ ಕಾಣಿಸಿಕೊಂಡಿದ್ದರು. ಹಿರಿಯ ಪತ್ರಕರ್ತರಾಗಿ ಸಿನಿಮಾದ ಕಥೆಯನ್ನು ಅಚ್ಚುಕಟ್ಟಾಗಿ ವಿವರಿಸಿದ್ದರು. ಈ ಮಧ್ಯೆ ಅನಂತ್​ ನಾಗ್​ ಚಿತ್ರತಂಡದಿಂದ ಹೊರ ನಡೆದಿದ್ದರು ಎನ್ನುವ ಮಾತು ಕೇಳಿ ಬಂದಿದ್ದರೂ, ಚಿತ್ರತಂಡ ಇದನ್ನು ಅಲ್ಲಗಳೆದಿತ್ತು. ಇದಾದ ಬೆನ್ನಲ್ಲೇ ಪ್ರಕಾಶ್​ ರೈ ಅವರ ಪಾತ್ರವನ್ನು ಚಿತ್ರತಂಡ ಪರಿಚಯಿಸಿತ್ತು. ಇದರಿಂದ, ಅನಂತ್​ ನಾಗ್​ ಪಾತ್ರವನ್ನು ಪ್ರಕಾಶ್​ ರೈ ಮುಂದುವರಿಸುತ್ತಿದ್ದಾರಾ ಎನ್ನುವ ಅನುಮಾನ ಕಾಣಿಸಿಕೊಂಡಿತ್ತು. ಈ ಅನುಮಾನಕ್ಕೆ ಪ್ರಶಾಂತ್​ ನೀಲ್​ ಇಂದು ತೆರೆ ಎಳೆದಿದ್ದಾರೆ.

ಇಂದು (ಮಾ.26) ಪ್ರಕಾಶ್ ರೈ ಜನ್ಮದಿನ. ಹೀಗಾಗಿ, ಕೆಜಿಎಫ್​-2 ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಗಿಫ್ಟ್​ ಆಗಿ ಹೊಸ ಪೋಸ್ಟರ್​ ಒಂದನ್ನು ರಿಲೀಸ್ ಮಾಡಿದ್ದಾರೆ. ಇದರಲ್ಲಿ ಪ್ರಕಾಶ್ ಪಾತ್ರದ ಸಂಪೂರ್ಣ ಪರಿಚಯ ಸಿಕ್ಕಿದೆ. ಕೆಜಿಎಫ್​-2ನಲ್ಲಿ ವಿಜಯೇಂದ್ರ  ಇಂಗಳಗಿಯಾಗಿ ಪ್ರಕಾಶ್​ ರೈ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಅನಂತ್​ ನಾಗ್​ ಪಾತ್ರವೇ ಬೇರೆ ಇವರ ಪಾತ್ರವೇ ಬೇರೆ ಎಂಬುದನ್ನು ಚಿತ್ರತಂಡ ಸ್ಪಷ್ಟಪಡಿಸಿದಂತಾಗಿದೆ.

ಅನಂತ್​ ನಾಗ್​ ಪಾತ್ರ ಸಿನಿಮಾದಲ್ಲಿ ಇಲ್ಲ ಎಂಬುದನ್ನು ಚಿತ್ರತಂಡ ಒಪ್ಪಿಕೊಂಡಿಲ್ಲ. ಆದರೆ, ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಪ್ರಕಾಶ್​ ರೈ ಅವರ ಪಾತ್ರವೇ ಸಿನಿಮಾದ ಕಥೆಯ ವಿವರಣೆ ನೀಡಲಿದೆಯಂತೆ. ಇಂದು ರಿಲೀಸ್​ ಆಗಿರುವ ಪೋಸ್ಟರ್​ನಲ್ಲಿ ಒಂದಷ್ಟು ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿದೆ. ಸಿನಿಮಾ ರಿಲೀಸ್​ ಆದ ನಂತರ ಎಲ್ಲ ಪ್ರಶ್ನೆಗೆ ಉತ್ತರ ಸಿಗಲಿದೆ.

ಕೆಜಿಎಫ್​-2 ಸಿನಿಮಾ ಜುಲೈ 16ರಂದು ತೆರೆಗೆ ಬರುತ್ತಿದೆ. ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಈ ಸಿನಿಮಾ ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: KGF Chapter 2: ಹಾಲಿವುಡ್​ ಸಿನಿಮಾದಲ್ಲಿ ಕೆಜಿಎಫ್​-2 ಡೈಲಾಗ್? ಏನಿದರ ಹಿಂದಿನ ರಹಸ್ಯ

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ