AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​-2ನಲ್ಲಿ ಅನಂತ್​ ನಾಗ್​-ಪ್ರಕಾಶ್​ ರೈ​​ ಪಾತ್ರಕ್ಕೂ ಇರುವ ಸಂಬಂಧವೇನು? ಪ್ರಶಾಂತ್​ ನೀಲ್​ ಬಿಚ್ಚಿಟ್ರು ಅಸಲಿ ವಿಚಾರ

ಅನಂತ್​ ನಾಗ್​ ಪಾತ್ರ ಸಿನಿಮಾದಲ್ಲಿ ಇಲ್ಲ ಎಂಬುದನ್ನು ಚಿತ್ರತಂಡ ಒಪ್ಪಿಕೊಂಡಿಲ್ಲ. ಆದರೆ, ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಪ್ರಕಾಶ್​ ರೈ ಅವರ ಪಾತ್ರವೇ ಸಿನಿಮಾದ ಕಥೆಯ ವಿವರಣೆ ನೀಡಲಿದೆಯಂತೆ.

ಕೆಜಿಎಫ್​-2ನಲ್ಲಿ ಅನಂತ್​ ನಾಗ್​-ಪ್ರಕಾಶ್​ ರೈ​​ ಪಾತ್ರಕ್ಕೂ ಇರುವ ಸಂಬಂಧವೇನು? ಪ್ರಶಾಂತ್​ ನೀಲ್​ ಬಿಚ್ಚಿಟ್ರು ಅಸಲಿ ವಿಚಾರ
ಅನಂತ್​ ನಾಗ್​-ಪ್ರಕಾಶ್​ ರೈ
ರಾಜೇಶ್ ದುಗ್ಗುಮನೆ
|

Updated on: Mar 26, 2021 | 5:56 PM

Share

ಕೆಜಿಎಫ್​-2 ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಜನವರಿಯಲ್ಲಿ ರಿಲೀಸ್​ ಆಗಿದ್ದ ಸಿನಿಮಾದ ಟೀಸರ್​ ಈಗಾಗಲೇ ಹೊಸ ದಾಖಲೆ ಸೃಷ್ಟಿ ಮಾಡಿದೆ. ಸಿನಿಮಾ ಬಗ್ಗೆ ನಿರೀಕ್ಷೆ ಅಷ್ಟೇ ಅಲ್ಲ, ಕೆಲ ಗೊಂದಲ ಕೂಡ ಸೃಷ್ಟಿ ಆಗಿತ್ತು. ಈ ಗೊಂದಲವನ್ನು ನಿರ್ದೇಶಕ ಪ್ರಶಾಂತ್​ ನೀಲ್​ ಬಗೆಹರಿಸುವ ಕೆಲಸ ಮಾಡಿದ್ದಾರೆ. ಕೆಜಿಎಫ್​-1ರಲ್ಲಿ ಆನಂದ್​ ಇಂಗಳಗಿ ಪಾತ್ರದಲ್ಲಿ ಅನಂತ್​ ನಾಗ್​ ಕಾಣಿಸಿಕೊಂಡಿದ್ದರು. ಹಿರಿಯ ಪತ್ರಕರ್ತರಾಗಿ ಸಿನಿಮಾದ ಕಥೆಯನ್ನು ಅಚ್ಚುಕಟ್ಟಾಗಿ ವಿವರಿಸಿದ್ದರು. ಈ ಮಧ್ಯೆ ಅನಂತ್​ ನಾಗ್​ ಚಿತ್ರತಂಡದಿಂದ ಹೊರ ನಡೆದಿದ್ದರು ಎನ್ನುವ ಮಾತು ಕೇಳಿ ಬಂದಿದ್ದರೂ, ಚಿತ್ರತಂಡ ಇದನ್ನು ಅಲ್ಲಗಳೆದಿತ್ತು. ಇದಾದ ಬೆನ್ನಲ್ಲೇ ಪ್ರಕಾಶ್​ ರೈ ಅವರ ಪಾತ್ರವನ್ನು ಚಿತ್ರತಂಡ ಪರಿಚಯಿಸಿತ್ತು. ಇದರಿಂದ, ಅನಂತ್​ ನಾಗ್​ ಪಾತ್ರವನ್ನು ಪ್ರಕಾಶ್​ ರೈ ಮುಂದುವರಿಸುತ್ತಿದ್ದಾರಾ ಎನ್ನುವ ಅನುಮಾನ ಕಾಣಿಸಿಕೊಂಡಿತ್ತು. ಈ ಅನುಮಾನಕ್ಕೆ ಪ್ರಶಾಂತ್​ ನೀಲ್​ ಇಂದು ತೆರೆ ಎಳೆದಿದ್ದಾರೆ.

ಇಂದು (ಮಾ.26) ಪ್ರಕಾಶ್ ರೈ ಜನ್ಮದಿನ. ಹೀಗಾಗಿ, ಕೆಜಿಎಫ್​-2 ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಗಿಫ್ಟ್​ ಆಗಿ ಹೊಸ ಪೋಸ್ಟರ್​ ಒಂದನ್ನು ರಿಲೀಸ್ ಮಾಡಿದ್ದಾರೆ. ಇದರಲ್ಲಿ ಪ್ರಕಾಶ್ ಪಾತ್ರದ ಸಂಪೂರ್ಣ ಪರಿಚಯ ಸಿಕ್ಕಿದೆ. ಕೆಜಿಎಫ್​-2ನಲ್ಲಿ ವಿಜಯೇಂದ್ರ  ಇಂಗಳಗಿಯಾಗಿ ಪ್ರಕಾಶ್​ ರೈ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಅನಂತ್​ ನಾಗ್​ ಪಾತ್ರವೇ ಬೇರೆ ಇವರ ಪಾತ್ರವೇ ಬೇರೆ ಎಂಬುದನ್ನು ಚಿತ್ರತಂಡ ಸ್ಪಷ್ಟಪಡಿಸಿದಂತಾಗಿದೆ.

ಅನಂತ್​ ನಾಗ್​ ಪಾತ್ರ ಸಿನಿಮಾದಲ್ಲಿ ಇಲ್ಲ ಎಂಬುದನ್ನು ಚಿತ್ರತಂಡ ಒಪ್ಪಿಕೊಂಡಿಲ್ಲ. ಆದರೆ, ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಪ್ರಕಾಶ್​ ರೈ ಅವರ ಪಾತ್ರವೇ ಸಿನಿಮಾದ ಕಥೆಯ ವಿವರಣೆ ನೀಡಲಿದೆಯಂತೆ. ಇಂದು ರಿಲೀಸ್​ ಆಗಿರುವ ಪೋಸ್ಟರ್​ನಲ್ಲಿ ಒಂದಷ್ಟು ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿದೆ. ಸಿನಿಮಾ ರಿಲೀಸ್​ ಆದ ನಂತರ ಎಲ್ಲ ಪ್ರಶ್ನೆಗೆ ಉತ್ತರ ಸಿಗಲಿದೆ.

ಕೆಜಿಎಫ್​-2 ಸಿನಿಮಾ ಜುಲೈ 16ರಂದು ತೆರೆಗೆ ಬರುತ್ತಿದೆ. ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಈ ಸಿನಿಮಾ ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: KGF Chapter 2: ಹಾಲಿವುಡ್​ ಸಿನಿಮಾದಲ್ಲಿ ಕೆಜಿಎಫ್​-2 ಡೈಲಾಗ್? ಏನಿದರ ಹಿಂದಿನ ರಹಸ್ಯ

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು