AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಡನ್​ ಆಗಿ ‘ಕಿಚ್ಚು’ ಹೊತ್ತಿಸಿದ ಹೊಂಬಾಳೆ ಫಿಲ್ಮ್ಸ್​; 11ನೇ ಸಿನಿಮಾ ಬಗ್ಗೆ ಕೆಜಿಎಫ್​ ನಿರ್ಮಾಪಕರ ಬ್ರೇಕಿಂಗ್​ ನ್ಯೂಸ್

ಕೆಜಿಎಫ್: ಚಾಪ್ಟರ್​ 2​, ಸಲಾರ್​ ರೀತಿಯ ದೈತ್ಯ ಸಿನಿಮಾಗಳನ್ನು ನಿರ್ಮಿಸುತ್ತಿರುವ ನಿರ್ಮಾಪಕ ವಿಜಯ್​​ ಕಿರಗಂದೂರು ಅವರು ಈಗ 11ನೇ ಸಿನಿಮಾ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ. ಈ ಬಗ್ಗೆ ಸಡನ್​ ಆಗಿ ಸುದ್ದಿ ನೀಡಲಾಗಿದೆ.

ಸಡನ್​ ಆಗಿ ‘ಕಿಚ್ಚು’ ಹೊತ್ತಿಸಿದ ಹೊಂಬಾಳೆ ಫಿಲ್ಮ್ಸ್​; 11ನೇ ಸಿನಿಮಾ ಬಗ್ಗೆ ಕೆಜಿಎಫ್​ ನಿರ್ಮಾಪಕರ ಬ್ರೇಕಿಂಗ್​ ನ್ಯೂಸ್
ಸಡನ್​ ಆಗಿ ‘ಕಿಚ್ಚು’ ಹೊತ್ತಿಸಿದ ಹೊಂಬಾಳೆ ಫಿಲ್ಮ್ಸ್​; 11ನೇ ಸಿನಿಮಾ ಬಗ್ಗೆ ಕೆಜಿಎಫ್​ ನಿರ್ಮಾಪಕರ ಬ್ರೇಕಿಂಗ್​ ನ್ಯೂಸ್
TV9 Web
| Edited By: |

Updated on:Aug 05, 2021 | 12:53 PM

Share

ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್’ (Hombale Films) ಮೂಲಕ ಶುಕ್ರವಾರ (ಆ.6) ಹೊಸ ಸಿನಿಮಾ ಘೋಷಣೆ ಆಗಲಿದೆ. ಈಗಾಗಲೇ ಕೆಜಿಎಫ್: ಚಾಪ್ಟರ್​ 2​, (KGF Chapter 2) ಸಲಾರ್​ ರೀತಿಯ ದೈತ್ಯ ಸಿನಿಮಾಗಳನ್ನು ನಿರ್ಮಿಸುತ್ತಿರುವ ನಿರ್ಮಾಪಕ ವಿಜಯ್​ ಕಿರಗಂದೂರು (Vijay Kiraganduru) ಅವರು ಈಗ 11ನೇ ಸಿನಿಮಾ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಸಡನ್​ ಆಗಿ ಸುದ್ದಿ ನೀಡಲಾಗಿದೆ. ಅದರಲ್ಲಿ ಬರೆದಿರುವ ‘ನಿನ್ನೊಳಗಿನ ಕಿಚ್ಚು ನಿಮ್ಮನ್ನು ಸುಡದಿರಲಿ’ ಎಂಬ ಒಂದು ಸಾಲು ಗಮನ ಸೆಳೆಯುತ್ತಿದೆ.

‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಯಾವುದೇ ಹೊಸ ಸುದ್ದಿ ಬರುವುದಿದ್ದರೂ ಒಂದು ದಿನ ಮುಂಚಿತವಾಗಿ ತಿಳಿಸಲಾಗುತ್ತದೆ. ಆದರೆ ಆ ಸಂಪ್ರದಾಯವನ್ನು ಈಗ ನಿರ್ಮಾಪಕರು ಮುರಿದಿದ್ದಾರೆ. ಯಾವುದೇ ಸೂಚನೆ ನೀಡದೇ ಸೋಶಿಯಲ್​ ಮೀಡಿಯಾ ಮೂಲಕ ಬ್ರೇಕಿಂಗ್​ ನ್ಯೂಸ್​ ಕೊಟ್ಟಿದ್ದಾರೆ. ಇದು ಸಿನಿಪ್ರಿಯರಿಗೆ ಅಚ್ಚರಿ ಮೂಡಿಸಿದೆ. ‘ಕಿಚ್ಚು’ ಎಂಬ ಪದ ಈ ಪೋಸ್ಟರ್​ನಲ್ಲಿ ಹೈಲೈಟ್​ ಆಗಿರುವುದರಿಂದ ಕಿಚ್ಚ ಸುದೀಪ್​ ಜೊತೆ ‘ಹೊಂಬಾಳೆ ಫಿಲ್ಮ್ಸ್’ ಕೈ ಜೋಡಿಸಲಿದೆಯಾ ಎಂಬ ಅನುಮಾನ ಬಲವಾಗಿದೆ. ಈ ಬಗ್ಗೆ ಶುಕ್ರವಾರ ಬೆಳಗ್ಗೆ 11.43ಕ್ಕೆ ಉತ್ತರ ಸಿಗಲಿದೆ.

ಪ್ರಸ್ತುತ ಈ ಸಂಸ್ಥೆಯ ಅಡಿಯಲ್ಲಿ ಬಹುನಿರೀಕ್ಷಿತ ಸಿನಿಮಾಗಳು ಮೂಡಿಬರುತ್ತಿವೆ. ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ಪ್ರಭಾಸ್​ ನಟನೆಯ ‘ಸಲಾರ್​’ ಸಿನಿಮಾ ಕೆಲಸಗಳು ಬಿರುಸಿನಿಂದ ಸಾಗಿವೆ. ಈ ಎರಡೂ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶಕರು. ಶ್ರೀಮುರಳಿ ನಟನೆಯ ‘ಭಗೀರ’ ಸೆಟ್ಟೇರಬೇಕಿದೆ. ಕೆಲವೇ ದಿನಗಳ ಹಿಂದೆ ಪುನೀತ್ ರಾಜ್​ಕುಮಾರ್​ ಮತ್ತು ಪವನ್​ ಕುಮಾರ್​ ಕಾಂಬಿನೇಷನ್​ನ ‘ದ್ವಿತ್ವ’ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್​ಲುಕ್​ ಲಾಂಚ್​ ಮಾಡಲಾಗಿತ್ತು. ಈ ನಿರ್ಮಾಣ ಸಂಸ್ಥೆಯ 10ನೇ ಚಿತ್ರವಾಗಿ ರಕ್ಷಿತ್​ ಶೆಟ್ಟಿ ನಾಯಕತ್ವದ ‘ರಿಚರ್ಡ್​ ಆ್ಯಂಟೊನಿ’ ಘೋಷಣೆ ಆಗಿತ್ತು. ಈಗ ಇದ್ದಕ್ಕಿದಂತೆಯೇ 11ನೇ ಸಿನಿಮಾ ಕುರಿತು ​‘ಹೊಂಬಾಳೆ ಫಿಲ್ಮ್ಸ್’ ಕೌತುಕ ಮೂಡಿಸಿದೆ.

ಕೊರೊನಾ ವೈರಸ್​ ಕಾರಣದಿಂದ ‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿದೆ. ಹೊಸ ರಿಲೀಸ್​ ಡೇಟ್​ ಯಾವಾಗ ಘೋಷಣೆ ಆಗಲಿದೆ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಆ ಬಗ್ಗೆ ಏನಾದರೂ ಹೊಸ ನ್ಯೂಸ್​ ಸಿಗಬಹುದೇ ಎಂದು ಕಾದಿದ್ದ ಎಲ್ಲರಿಗೂ 11ನೇ ಸಿನಿಮಾದ ಸುದ್ದಿ ನಿಜಕ್ಕೂ ಅಚ್ಚರಿ ಮೂಡಿಸಿದೆ. ಈ ಸಿನಿಮಾದ ಹೀರೋ ಯಾರು? ಫಸ್ಟ್​ಲುಕ್​ ಹೇಗಿರಲಿದೆ? ಯಾರು ನಿರ್ದೇಶನ ಮಾಡಲಿದ್ದಾರೆ? ಶೀರ್ಷಿಕೆ ಏನು ಎಂಬಿತ್ಯಾದಿ ಪ್ರಶ್ನೆಗಳು ಈಗ ಎಲ್ಲ ಮನದಲ್ಲಿ ಕೊರೆಯುತ್ತಿವೆ.

ಇದನ್ನೂ ಓದಿ:

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್

‘ಕೆಜಿಎಫ್​’ ನಿರ್ಮಾಪಕ ವಿಜಯ್​ ಕಿರಗಂದೂರು ಹೇಳಿದ ಮಾತಿನಿಂದ ಮುಗಿಯಿತು ‘ಕಿರಿಕ್​ ಪಾರ್ಟಿ’ ವಿವಾದ

Published On - 12:10 pm, Thu, 5 August 21

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ