ಸಡನ್​ ಆಗಿ ‘ಕಿಚ್ಚು’ ಹೊತ್ತಿಸಿದ ಹೊಂಬಾಳೆ ಫಿಲ್ಮ್ಸ್​; 11ನೇ ಸಿನಿಮಾ ಬಗ್ಗೆ ಕೆಜಿಎಫ್​ ನಿರ್ಮಾಪಕರ ಬ್ರೇಕಿಂಗ್​ ನ್ಯೂಸ್

ಕೆಜಿಎಫ್: ಚಾಪ್ಟರ್​ 2​, ಸಲಾರ್​ ರೀತಿಯ ದೈತ್ಯ ಸಿನಿಮಾಗಳನ್ನು ನಿರ್ಮಿಸುತ್ತಿರುವ ನಿರ್ಮಾಪಕ ವಿಜಯ್​​ ಕಿರಗಂದೂರು ಅವರು ಈಗ 11ನೇ ಸಿನಿಮಾ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ. ಈ ಬಗ್ಗೆ ಸಡನ್​ ಆಗಿ ಸುದ್ದಿ ನೀಡಲಾಗಿದೆ.

ಸಡನ್​ ಆಗಿ ‘ಕಿಚ್ಚು’ ಹೊತ್ತಿಸಿದ ಹೊಂಬಾಳೆ ಫಿಲ್ಮ್ಸ್​; 11ನೇ ಸಿನಿಮಾ ಬಗ್ಗೆ ಕೆಜಿಎಫ್​ ನಿರ್ಮಾಪಕರ ಬ್ರೇಕಿಂಗ್​ ನ್ಯೂಸ್
ಸಡನ್​ ಆಗಿ ‘ಕಿಚ್ಚು’ ಹೊತ್ತಿಸಿದ ಹೊಂಬಾಳೆ ಫಿಲ್ಮ್ಸ್​; 11ನೇ ಸಿನಿಮಾ ಬಗ್ಗೆ ಕೆಜಿಎಫ್​ ನಿರ್ಮಾಪಕರ ಬ್ರೇಕಿಂಗ್​ ನ್ಯೂಸ್
Follow us
| Updated By: ಮದನ್​ ಕುಮಾರ್​

Updated on:Aug 05, 2021 | 12:53 PM

ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್’ (Hombale Films) ಮೂಲಕ ಶುಕ್ರವಾರ (ಆ.6) ಹೊಸ ಸಿನಿಮಾ ಘೋಷಣೆ ಆಗಲಿದೆ. ಈಗಾಗಲೇ ಕೆಜಿಎಫ್: ಚಾಪ್ಟರ್​ 2​, (KGF Chapter 2) ಸಲಾರ್​ ರೀತಿಯ ದೈತ್ಯ ಸಿನಿಮಾಗಳನ್ನು ನಿರ್ಮಿಸುತ್ತಿರುವ ನಿರ್ಮಾಪಕ ವಿಜಯ್​ ಕಿರಗಂದೂರು (Vijay Kiraganduru) ಅವರು ಈಗ 11ನೇ ಸಿನಿಮಾ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಸಡನ್​ ಆಗಿ ಸುದ್ದಿ ನೀಡಲಾಗಿದೆ. ಅದರಲ್ಲಿ ಬರೆದಿರುವ ‘ನಿನ್ನೊಳಗಿನ ಕಿಚ್ಚು ನಿಮ್ಮನ್ನು ಸುಡದಿರಲಿ’ ಎಂಬ ಒಂದು ಸಾಲು ಗಮನ ಸೆಳೆಯುತ್ತಿದೆ.

‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಯಾವುದೇ ಹೊಸ ಸುದ್ದಿ ಬರುವುದಿದ್ದರೂ ಒಂದು ದಿನ ಮುಂಚಿತವಾಗಿ ತಿಳಿಸಲಾಗುತ್ತದೆ. ಆದರೆ ಆ ಸಂಪ್ರದಾಯವನ್ನು ಈಗ ನಿರ್ಮಾಪಕರು ಮುರಿದಿದ್ದಾರೆ. ಯಾವುದೇ ಸೂಚನೆ ನೀಡದೇ ಸೋಶಿಯಲ್​ ಮೀಡಿಯಾ ಮೂಲಕ ಬ್ರೇಕಿಂಗ್​ ನ್ಯೂಸ್​ ಕೊಟ್ಟಿದ್ದಾರೆ. ಇದು ಸಿನಿಪ್ರಿಯರಿಗೆ ಅಚ್ಚರಿ ಮೂಡಿಸಿದೆ. ‘ಕಿಚ್ಚು’ ಎಂಬ ಪದ ಈ ಪೋಸ್ಟರ್​ನಲ್ಲಿ ಹೈಲೈಟ್​ ಆಗಿರುವುದರಿಂದ ಕಿಚ್ಚ ಸುದೀಪ್​ ಜೊತೆ ‘ಹೊಂಬಾಳೆ ಫಿಲ್ಮ್ಸ್’ ಕೈ ಜೋಡಿಸಲಿದೆಯಾ ಎಂಬ ಅನುಮಾನ ಬಲವಾಗಿದೆ. ಈ ಬಗ್ಗೆ ಶುಕ್ರವಾರ ಬೆಳಗ್ಗೆ 11.43ಕ್ಕೆ ಉತ್ತರ ಸಿಗಲಿದೆ.

ಪ್ರಸ್ತುತ ಈ ಸಂಸ್ಥೆಯ ಅಡಿಯಲ್ಲಿ ಬಹುನಿರೀಕ್ಷಿತ ಸಿನಿಮಾಗಳು ಮೂಡಿಬರುತ್ತಿವೆ. ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ಪ್ರಭಾಸ್​ ನಟನೆಯ ‘ಸಲಾರ್​’ ಸಿನಿಮಾ ಕೆಲಸಗಳು ಬಿರುಸಿನಿಂದ ಸಾಗಿವೆ. ಈ ಎರಡೂ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶಕರು. ಶ್ರೀಮುರಳಿ ನಟನೆಯ ‘ಭಗೀರ’ ಸೆಟ್ಟೇರಬೇಕಿದೆ. ಕೆಲವೇ ದಿನಗಳ ಹಿಂದೆ ಪುನೀತ್ ರಾಜ್​ಕುಮಾರ್​ ಮತ್ತು ಪವನ್​ ಕುಮಾರ್​ ಕಾಂಬಿನೇಷನ್​ನ ‘ದ್ವಿತ್ವ’ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್​ಲುಕ್​ ಲಾಂಚ್​ ಮಾಡಲಾಗಿತ್ತು. ಈ ನಿರ್ಮಾಣ ಸಂಸ್ಥೆಯ 10ನೇ ಚಿತ್ರವಾಗಿ ರಕ್ಷಿತ್​ ಶೆಟ್ಟಿ ನಾಯಕತ್ವದ ‘ರಿಚರ್ಡ್​ ಆ್ಯಂಟೊನಿ’ ಘೋಷಣೆ ಆಗಿತ್ತು. ಈಗ ಇದ್ದಕ್ಕಿದಂತೆಯೇ 11ನೇ ಸಿನಿಮಾ ಕುರಿತು ​‘ಹೊಂಬಾಳೆ ಫಿಲ್ಮ್ಸ್’ ಕೌತುಕ ಮೂಡಿಸಿದೆ.

ಕೊರೊನಾ ವೈರಸ್​ ಕಾರಣದಿಂದ ‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿದೆ. ಹೊಸ ರಿಲೀಸ್​ ಡೇಟ್​ ಯಾವಾಗ ಘೋಷಣೆ ಆಗಲಿದೆ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಆ ಬಗ್ಗೆ ಏನಾದರೂ ಹೊಸ ನ್ಯೂಸ್​ ಸಿಗಬಹುದೇ ಎಂದು ಕಾದಿದ್ದ ಎಲ್ಲರಿಗೂ 11ನೇ ಸಿನಿಮಾದ ಸುದ್ದಿ ನಿಜಕ್ಕೂ ಅಚ್ಚರಿ ಮೂಡಿಸಿದೆ. ಈ ಸಿನಿಮಾದ ಹೀರೋ ಯಾರು? ಫಸ್ಟ್​ಲುಕ್​ ಹೇಗಿರಲಿದೆ? ಯಾರು ನಿರ್ದೇಶನ ಮಾಡಲಿದ್ದಾರೆ? ಶೀರ್ಷಿಕೆ ಏನು ಎಂಬಿತ್ಯಾದಿ ಪ್ರಶ್ನೆಗಳು ಈಗ ಎಲ್ಲ ಮನದಲ್ಲಿ ಕೊರೆಯುತ್ತಿವೆ.

ಇದನ್ನೂ ಓದಿ:

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್

‘ಕೆಜಿಎಫ್​’ ನಿರ್ಮಾಪಕ ವಿಜಯ್​ ಕಿರಗಂದೂರು ಹೇಳಿದ ಮಾತಿನಿಂದ ಮುಗಿಯಿತು ‘ಕಿರಿಕ್​ ಪಾರ್ಟಿ’ ವಿವಾದ

Published On - 12:10 pm, Thu, 5 August 21

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ