AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಕೋಟಿ ಗಳಿಸಿದರೂ ಆ ತಪ್ಪು ಮಾಡಲಿಲ್ಲ ಹೊಂಬಾಳೆ ಫಿಲ್ಮ್ಸ್​; ನಿರ್ಮಾಪಕರ​ ಜಾಣತನದ ನಡೆ

100 ಕೋಟಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಹಲವು ಪಟ್ಟು ಹೆಚ್ಚು ಹಣವನ್ನು ಗಳಿಕೆ ಮಾಡಿದೆ. ಇದು ವಿಜಯ್​ ಖುಷಿಗೆ ಕಾರಣವಾಗಿದೆ. ಈ ಹಣವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಲು ನಿರ್ಮಾಪಕರು ಯೋಚಿಸಿದಂತಿದೆ.

ನೂರಾರು ಕೋಟಿ ಗಳಿಸಿದರೂ ಆ ತಪ್ಪು ಮಾಡಲಿಲ್ಲ ಹೊಂಬಾಳೆ ಫಿಲ್ಮ್ಸ್​; ನಿರ್ಮಾಪಕರ​ ಜಾಣತನದ ನಡೆ
ವಿಜಯ್ -ಯಶ್
TV9 Web
| Edited By: |

Updated on: Jun 13, 2022 | 1:16 PM

Share

ನೂರಾರು ಕೋಟಿ ರೂಪಾಯಿ ಹಾಕಿ ಮಾಡಿದ ಸಿನಿಮಾ ಹಿಟ್ ಆಯಿತು ಎಂದಾಕ್ಷಣ ನಿರ್ಮಾಪಕರಿಗೆ ಹೊಸ ಹುಮ್ಮಸ್ಸು ಬರುತ್ತದೆ. ಮುಂದಿನ ಪ್ರಾಜೆಕ್ಟ್​​ಗೆ ಬೇಕಾಬಿಟ್ಟಿ ದುಡ್ಡು ಸುರಿಯಲಾಗುತ್ತದೆ. ಇಂತಹ ಸಂದರ್ಭದಲ್ಲಿ ಕೈ ಸುಟ್ಟುಕೊಳ್ಳುವ ಸಾಧ್ಯತೆಯೇ ಹೆಚ್ಚು. ಈ ರೀತಿ ಆದ ಸಾಕಷ್ಟು ಉದಾಹರಣೆ ಇದೆ. ಇನ್ನೂ ಕೆಲವರು ಒಂದು ಸಿನಿಮಾ ಹಿಟ್ ಆದ ಬಳಿಕ ಮತ್ತೆ ಸಿನಿಮಾ ಮಾಡುವ ಸಾಹಸಕ್ಕೆ ಹೋಗುವುದೇ ಇಲ್ಲ. ‘ಕೆಜಿಎಫ್ 2’ ಚಾಪ್ಟರ್​ ಸಿನಿಮಾ (KGF Chapter 2) ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರು ಈ ವಿಚಾರದಲ್ಲಿ ಜಾಣತನದ ನಡೆ ತೋರಿದ್ದಾರೆ. ತೆಲುಗು, ಮಲಯಾಳಂ, ತಮಿಳು ಹಾಗೂ ಕನ್ನಡ ಚಿತ್ರರಂಗದಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿರುವ ಅವರು ಎಲ್ಲರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದ್ದಾರೆ.

‘ಕೆಜಿಎಫ್ 2’ ಸಿನಿಮಾ ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಚಿತ್ರದಿಂದ ನಿರ್ಮಾಣ ಸಂಸ್ಥೆಗೆ ನೂರಾರು ಕೋಟಿ ಹರಿದು ಬಂದಿದೆ. 100 ಕೋಟಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಹಲವು ಪಟ್ಟು ಹೆಚ್ಚು ಹಣವನ್ನು ಗಳಿಕೆ ಮಾಡಿದೆ. ಇದು ವಿಜಯ್​ ಖುಷಿಗೆ ಕಾರಣವಾಗಿದೆ. ಈ ಹಣವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಲು ನಿರ್ಮಾಪಕರು ಯೋಚಿಸಿದಂತಿದೆ.

ಕನ್ನಡದ ‘ಕಾಂತಾರಾ’, ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾಗಳು ಕಡಿಮೆ ಬಜೆಟ್​ನಲ್ಲಿ ಸಿದ್ಧಗೊಂಡ ಸಿನಿಮಾಗಳು. ಈ ಎರಡೂ ಚಿತ್ರಗಳ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ‘ಬಘೀರ’ ಹಾಗೂ ‘ರಿಚರ್ಡ್​ ಆ್ಯಂಟನಿ’ ಸಿನಿಮಾಗಳು ಸ್ವಲ್ಪ ದೊಡ್ಡ ಬಜೆಟ್​ನಲ್ಲಿ ಸಿದ್ದಗೊಳ್ಳುತ್ತಿವೆ. ಈ ಚಿತ್ರಗಳ ಬಗ್ಗೆಯೂ ನಿರೀಕ್ಷೆ ಇದೆ.

ಇದನ್ನೂ ಓದಿ
Image
Yash: ಅಬ್ಬಬ್ಬಾ.. ರಾಕಿಂಗ್ ಸ್ಟಾರ್ ಯಶ್ ತೊಟ್ಟ ಈ ಕ್ಯಾಪ್​ ಇಷ್ಟೊಂದು ದುಬಾರಿಯಾ?
Image
ಸಂಡೇ ಸ್ಪೆಷಲ್​; ಯಶ್ ಜತೆಗಿನ ವಿಶೇಷ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
Image
Radhika Pandit: ಪತ್ನಿ ರಾಧಿಕಾ ಪಂಡಿತ್ ಕೆನ್ನೆಗೆ ಮುತ್ತಿಟ್ಟ ಯಶ್; ಫೋಟೋ ವೈರಲ್
Image
Radhika Pandit: ಕುಟುಂಬದೊಂದಿಗೆ ಜನ್ಮದಿನ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿವೆ ಮುದ್ದಾದ ಫೋಟೋಗಳು

ಇದಲ್ಲದೆ, ತೆಲುಗಿನಲ್ಲಿ ‘ಸಲಾರ್​’, ಮಲಯಾಳಂನಲ್ಲಿ ‘ಟೈಸನ್​’, ತಮಿಳಿನಲ್ಲಿ ಸುಧಾ ಕೊಂಗರ ನಿರ್ದೇಶನದ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಈ ಮೂಲಕ ವಿಜಯ್​ ಕಿರಗಂದೂರು ಅವರು ದಕ್ಷಿಣ ಭಾರತದಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗಳಲ್ಲಿ ಕೆಲವು ಹಿಂದಿಗೂ ಡಬ್​ ಆಗಿ ತೆರೆ ಕಾಣುತ್ತಿದೆ.

ಇದನ್ನೂ ಓದಿ: KGF Chapter 2: ಓಟಿಟಿಯಲ್ಲಿ ರಿಲೀಸ್ ಆಯ್ತು ‘ಕೆಜಿಎಫ್ ಚಾಪ್ಟರ್ 2’; ರಾಕಿ ಭಾಯ್ ಬಾಕ್ಸಾಫೀಸ್​ನಲ್ಲಿ ಇದುವರೆಗೆ ಮಾಡಿದ ಕಲೆಕ್ಷನ್ ಎಷ್ಟು?

ವಿಜಯ್​ ಕಿರಗಂದೂರು ಅವರಿಗೆ ಬಾಲಿವುಡ್​ನಿಂದಲೂ ಬೇಡಿಕೆ ಇದೆ. ಅಲ್ಲಿ ಹೋಗಿ ನೂರಾರು ಕೋಟಿ ಸುರಿದು ಸಿನಿಮಾ ಮಾಡುವ ಅವಕಾಶ ಅವರಿಗೆ ಇತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಸದ್ಯ ಬಾಲಿವುಡ್​ನಲ್ಲಿ ಎಲ್ಲಾ ಸಿನಿಮಾಗಳು ಮಕಾಡೆ ಮಲಗುತ್ತಿವೆ. ಅಲ್ಲಿ ಸಿನಿಮಾ ಮಾಡಿದರೆ ನಷ್ಟ ಕೂಡ ಆಗಬಹುದು. ಹೀಗಾಗಿ, ವಿಜಯ್ ಕಿರಗಂದೂರು ಅವರು ದಕ್ಷಿಣ ಭಾರತದಲ್ಲೇ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಅವರ ಈ ಜಾಣತನದ ನಡೆಗೆ ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು