AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಬಿಡುಗಡೆಗೂ ಮುನ್ನ ಹುಟ್ಟೂರಿಗೆ ಭೇಟಿ; ಒಂದೇ ಫ್ರೇಮ್​ನಲ್ಲಿ ವಿಜಯ್ ಕಿರಗಂದೂರು, ಯಶ್, ಪ್ರಶಾಂತ್ ನೀಲ್

ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಯಶ್ ಹಾಗೂ ಪ್ರಶಾಂತ್​ ನೀಲ್​ ಅವರು ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ.

‘ಕೆಜಿಎಫ್​ 2’ ಬಿಡುಗಡೆಗೂ ಮುನ್ನ ಹುಟ್ಟೂರಿಗೆ ಭೇಟಿ; ಒಂದೇ ಫ್ರೇಮ್​ನಲ್ಲಿ ವಿಜಯ್ ಕಿರಗಂದೂರು, ಯಶ್, ಪ್ರಶಾಂತ್ ನೀಲ್
ವಿಜಯ್-ಪ್ರಶಾಂತ್ ನೀಲ್-ಪ್ರಶಾಂತ್ ನೀಲ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 13, 2022 | 2:16 PM

Share

‘ಕೆಜಿಎಫ್ ಚಾಪ್ಟರ್​ 2’ ಸಿನಿಮಾ (KGF Chapter 2) ತೆರೆಗೆ ಬರೋಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಚಿತ್ರವನ್ನು ಸ್ವಾಗತಿಸೋಕೆ ಭರ್ಜರಿ ಸಿದ್ಧತೆ ನಡೆದಿದೆ. ಕರ್ನಾಟಕ ಸೇರಿ ಇಡೀ ವಿಶ್ವಾದ್ಯಂತ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಳ್ಳುತ್ತಿದೆ. ಜನರು ಈ ಸಿನಿಮಾ ಕಣ್ತುಂಬಿಕೊಳ್ಳಲು ಕಾದು ಕೂತಿದ್ದಾರೆ. ಮಧ್ಯರಾತ್ರಿಯುಂದಲೇ ಶೋಗಳು ಪ್ರದರ್ಶನ ಕಾಣುತ್ತಿವೆ. ಇನ್ನು, ಇಷ್ಟು ದಿನ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದ ಇಡೀ ಟೀಂ ಈಗ ಸ್ವಲ್ಪ ರಿಲ್ಯಾಕ್ಸ್​ ಆಗಿದೆ. ನಿರ್ಮಾಪಕ ವಿಜಯ್ ಅವರ (Vijay Kiragandur) ಊರು ಕಿರಗಂದೂರು. ಕಿರಗಂದೂರಿನ ಮನೆಗೆ ಯಶ್ (Yash), ಪ್ರಶಾಂತ್ ನೀಲ್ ಹಾಗೂ ವಿಜಯ್ ಅವರು ಭೇಟಿ ನೀಡಿದ್ದಾರೆ. ಈ ಸಮಯದಲ್ಲಿ ತೆಗೆದ ಫೋಟೋ ವೈರಲ್ ಆಗುತ್ತಿದೆ.

ಅನೇಕರಿಗೆ ಹುಟ್ಟೂರಿನ ಮೇಲೆ ಪ್ರೀತಿ ಇರುತ್ತದೆ. ಎಷ್ಟೇ ಎತ್ತರಕ್ಕೆ ಬೆಳೆದರೂ ಹುಟ್ಟೂರನ್ನು ಮರೆಯೋಕೆ ಆಗುವುದಿಲ್ಲ. ವಿಜಯ್ ಕಿರಗಂದೂರು ಕೂಡ ಇದೇ ಸಾಲಿಗೆ ಸೇರುತ್ತಾರೆ. ಅವರಿಗೆ ಹುಟ್ಟೂರಿನ ಮೇಲೆ ಅಪಾರ ಪ್ರೀತಿ ಇದೆ. ಹೀಗಾಗಿ, ಅವರು ಸಿನಿಮಾ ರಿಲೀಸ್​ಗೂ ಮುನ್ನ ಕಿರಗಂದೂರಿಗೆ ತೆರಳಿದ್ದಾರೆ.   ಅಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಯಶ್ ಹಾಗೂ ಪ್ರಶಾಂತ್​ ನೀಲ್​ ಅವರು ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ. ಕಿರಗಂದೂರು ಮಂಡ್ಯ ಸಮೀಪದಲ್ಲಿದೆ.

ಕಲೆಕ್ಷನ್ ಬಗ್ಗೆ ಜೋರಾಗಿದೆ ಚರ್ಚೆ

ಉತ್ತರ ಭಾರತದಲ್ಲಿ ಈ ಚಿತ್ರಕ್ಕೆ ಸಖತ್​ ಹೈಪ್​ ಸೃಷ್ಟಿ ಆಗಿದೆ. ಅದಕ್ಕೆ ತಕ್ಕಂತೆಯೇ ಚಿತ್ರತಂಡ ಭರ್ಜರಿಯಾಗಿ ಪ್ರಚಾರ ಮಾಡಿದೆ. ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ವಿಚಾರದಲ್ಲಿ ‘ಆರ್​ಆರ್​ಆರ್​’ ಸಿನಿಮಾವನ್ನೂ ಕೂಡ ‘ಕೆಜಿಎಫ್​ 2’ ಚಿತ್ರ ಮೀರಿಸಿದೆ. ಇನ್ನೂ ಕೂಡ ಟಿಕೆಟ್​ ಬುಕಿಂಗ್ ಜೋರಾಗಿ ನಡೆಯುತ್ತಿದೆ. ಅದರ ಆಧಾರದಲ್ಲಿ ಹೇಳುವುದಾದರೆ ಮೊದಲ ದಿನ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಗಳಿಕೆಯನ್ನು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಲಿದೆ.

ದಳಪತಿ ವಿಜಯ್ ನಟನೆಯ ‘ಬೀಸ್ಟ್​’ ಸಿನಿಮಾದಿಂದ ‘ಕೆಜಿಎಫ್​ 2’ ಚಿತ್ರದ ಕಲೆಕ್ಷನ್​ಗೆ ಹೊಡೆತ ಬೀಳಬಹುದು ಎಂದು ಈ ಮೊದಲು ಊಹಿಸಲಾಗಿತ್ತು. ಆದರೆ ‘ಬೀಸ್ಟ್​’ ಚಿತ್ರದ ಬಗ್ಗೆ ನೆಗೆಟಿವ್​ ವಿಮರ್ಶೆ ಕೇಳಿಬಂದಿರುವುದರಿಂದ ಜನರು ಆ ಸಿನಿಮಾ ನೋಡಲು ಹಿಂದೇಟು ಹಾಕುವ ಸಾಧ್ಯತೆ ಇದೆ. ಇದರಿಂದ ‘ಕೆಜಿಎಫ್​ 2’ಗೆ ಪ್ಲಸ್​ ಪಾಯಿಂಟ್​ ಆಗಲಿದೆ. ಅತ್ತ ಬಾಲಿವುಡ್​ನಲ್ಲಿ ಶಾಹಿದ್​ ಕಪೂರ್​ ನಟನೆಯ ‘ಜೆರ್ಸಿ’ ಸಿನಿಮಾ ಕೊನೇ ಗಳಿಗೆಯಲ್ಲಿ ರಿಲೀಸ್​ ದಿನಾಂಕ ಮುಂದೂಡಿಕೊಂಡಿದೆ. ಇದರಿಂದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗೆ ಹೆಚ್ಚು ಚಿತ್ರಮಂದಿರಗಳು ಸಿಗಲಿವೆ. ಈ ಕಾರಣದಿಂದ ಚಿತ್ರದ ಕಲೆಕ್ಷನ್​ ಹೆಚ್ಚಲಿದೆ. ಒಟ್ಟಿನಲ್ಲಿ ಈ ಸಿನಿಮಾ ಮೊದಲ ದಿನವೇ ರೆಕಾರ್ಡ್​ ಸೃಷ್ಟಿ ಮಾಡುವುದು ಖಚಿತ.

ಇದನ್ನೂ ಓದಿ: ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ

Sulthana lyrical video: ಅಬ್ಬರಿಸಲು ಬಂದ ‘ಸುಲ್ತಾನ’: ಹೊಸ ಹಾಡು​ ಬಿಡುಗಡೆ ಮಾಡಿದ ‘ಕೆಜಿಎಫ್​: ಚಾಪ್ಟರ್​ 2’ ತಂಡ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!