AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಯಶ್​ ನಟನೆಯ ‘ಕೆಜಿಎಫ್ ಚಾಪ್ಟರ್ 2’ ರಿಲೀಸ್​ ಬಗ್ಗೆ ಮಹತ್ವದ ಘೋಷಣೆ ಮಾಡಿದ ಪ್ರಶಾಂತ್ ನೀಲ್

KGF Chapter 2 Release Date: ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ ಎನ್ನಲಾಗಿತ್ತು. ಈಗ ಹಾಗೆಯೇ ಆಗಿದೆ.

KGF Chapter 2: ಯಶ್​ ನಟನೆಯ ‘ಕೆಜಿಎಫ್ ಚಾಪ್ಟರ್ 2’ ರಿಲೀಸ್​ ಬಗ್ಗೆ ಮಹತ್ವದ ಘೋಷಣೆ ಮಾಡಿದ ಪ್ರಶಾಂತ್ ನೀಲ್
ವಿಜಯ್​ ಕಿರಗಂದೂರು- ಯಶ್​- ಪ್ರಶಾಂತ್​ ನೀಲ್​
ರಾಜೇಶ್ ದುಗ್ಗುಮನೆ
|

Updated on:Jul 06, 2021 | 5:42 PM

Share

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇನ್ನು ಕೇವಲ 10 ದಿನಗಳಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ತೆರೆಕಾಣಬೇಕಿತ್ತು. ಆದರೆ, ಈಗ ಚಿತ್ರಮಂದಿರಗಳು ತೆರೆಯದ ಕಾರಣ ಅದು ಸಾಧ್ಯವಾಗುತ್ತಿಲ್ಲ. ಪ್ರಶಾಂತ್​ ನೀಲ್​ ನಿರ್ದೇಶನ ಇರುವ, ಯಶ್​ ಮುಖ್ಯಭೂಮಿಕೆ ನಿರ್ವಹಿಸರುವ ಈ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದನ್ನು ಪ್ರಶಾಂತ್​ ನೀಲ್​ ನೀಡಿದ್ದಾರೆ. ಈ ಘೋಷಣೆಯಿಂದ ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರ ಉಂಟಾಗಿದೆ.

ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ ಎನ್ನಲಾಗಿತ್ತು. ಈಗ ಹಾಗೆಯೇ ಆಗಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಪ್ರಶಾಂತ್ ನೀಲ್​, ಕೆಜಿಎಫ್​ 2 ರಿಲೀಸ್​ ದಿನಾಂಕ ಮುಂದೂಡುತ್ತಿರುವುದನ್ನು ಖಚಿತಪಡಿಸಿದ್ದಾರೆ.

‘ಸಿನಿಮಾ ಹಾಲ್​ನಲ್ಲಿ ಗ್ಯಾಂಗ್​ಸ್ಟರ್​ಗಳು ತುಂಬಿರುವಾಗ ಮಾತ್ರ ಮಾನ್​ಸ್ಟರ್​ ಬರುತ್ತಾನೆ. ಅವನು ಬರೋ ಹೊಸ ಡೇಟ್​ ಶೀಘ್ರದಲ್ಲೇ ಘೋಷಣೆ ಮಾಡಲಿದ್ದೇವೆ’ ಎಂದಿದ್ದಾರೆ ಪ್ರಶಾಂತ್​ ನೀಲ್​. ಕೊವಿಡ್​ ಕಾರಣದಿಂದ ಸಿನಿಮಾ ಹಾಲ್​ಗಳನ್ನು ಕರ್ನಾಟಕದಲ್ಲಿ ಮುಚ್ಚಲಾಗಿದೆ. ಸಿನಿಮಾ ಹಾಲ್​ ತೆರೆಯೋಕೆ ಸಂಪೂರ್ಣ ಅವಕಾಶ ಸಿಕ್ಕ ನಂತರವೇ ಕೆಜಿಎಫ್​ 2 ರಿಲೀಸ್​ ಆಗಲಿದೆ.

ಇನ್ನು, ಕೆಜಿಎಫ್​ 2 ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ ಎನ್ನುವ ಮಾತು ಹರಿದಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಇಂದು ಕೂಡ ಪ್ರಶಾಂತ್​ಆ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಕೆಜಿಎಫ್​ 2ನಲ್ಲಿ ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ. ಸದ್ಯ, ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ ನಡೆಯುತ್ತಿದೆ.

ಇದನ್ನೂ ಓದಿ: ‘ಕೆಜಿಎಫ್​’ ನಿರ್ಮಾಪಕ ವಿಜಯ್​ ಕಿರಗಂದೂರು ಹೇಳಿದ ಮಾತಿನಿಂದ ಮುಗಿಯಿತು ‘ಕಿರಿಕ್​ ಪಾರ್ಟಿ’ ವಿವಾದ

Published On - 5:35 pm, Tue, 6 July 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ