AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟು ಕೋಟಿಗೆ ಸೇಲ್​ ಆಯ್ತು ‘ಕೆಜಿಎಫ್​ 2’ ಆಡಿಯೋ? ಲಹರಿ ಮ್ಯೂಸಿಕ್​ ತೆಕ್ಕೆಗೆ ಎಲ್ಲ ಭಾಷೆಯ ಸಾಂಗ್ಸ್​

KGF Chapter 2 songs: ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹಾಡುಗಳಿಗೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೆ, ಹಲವು ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಎಲ್ಲ ಭಾಷೆಯ ಆಡಿಯೋ ರೈಟ್ಸ್​ ಲಹರಿ ಸಂಸ್ಥೆಯ ಪಾಲಾಗಿದೆ.

ಎಷ್ಟು ಕೋಟಿಗೆ ಸೇಲ್​ ಆಯ್ತು ‘ಕೆಜಿಎಫ್​ 2’ ಆಡಿಯೋ? ಲಹರಿ ಮ್ಯೂಸಿಕ್​ ತೆಕ್ಕೆಗೆ ಎಲ್ಲ ಭಾಷೆಯ ಸಾಂಗ್ಸ್​
ಲಹರಿ ಮ್ಯೂಸಿಕ್​ ತೆಕ್ಕೆಗೆ ‘ಕೆಜಿಎಫ್​ 2’ ಆಡಿಯೋ
ಮದನ್​ ಕುಮಾರ್​
|

Updated on: Jul 01, 2021 | 2:21 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಕೆಜಿಎಫ್​ 2’ ಚಿತ್ರ ಹಲವು ಕಾರಣಗಳಿಗಾಗಿ ಸದ್ದು ಮಾಡುತ್ತಿದೆ. ಯಶ್​ ನಾಯಕತ್ವದ, ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾದ ಆಡಿಯೋ ಹಕ್ಕುಗಳು ಮಾರಾಟ ಆಗಿವೆ. ಪ್ರತಿಷ್ಠಿತ ‘ಲಹರಿ ಮ್ಯೂಸಿಕ್​’ ಕಂಪನಿಯು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಆಡಿಯೋ ರೈಟ್ಸ್​ ಖರೀದಿ ಮಾಡಿದೆ. ಭಾರಿ ಮೊತ್ತಕ್ಕೆ ಹಕ್ಕುಗಳು ಸೇಲ್​ ಆಗಿವೆ.

‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದ ಹಾಡಿನ ಹಕ್ಕುಗಳು ಕೂಡ ‘ಲಹರಿ ಮ್ಯೂಸಿಕ್​’ ಪಾಲಾಗಿದ್ದವು. ಮೂಲಗಳ ಪ್ರಕಾರ, ಆಗ 3.60 ಕೋಟಿಗೆ ವ್ಯವಹಾರ ಕುದುರಿತ್ತು. ಆದರೆ ಈಗ ಅದಕ್ಕಿಂತಲೂ ದುಪ್ಪಟ್ಟ ಹಣ ನೀಡಿ ‘ಕೆಜಿಎಫ್​: ಚಾಪ್ಟರ್​ 2’ ಆಡಿಯೋವನ್ನು ಲಹರಿ ಸಂಸ್ಥೆ ಖರೀದಿಸಿದೆ. ಕೇಳಿಬಂದಿರುವ ಮಾಹಿತಿ ಪ್ರಕಾರ 6 ಕೋಟಿ ರೂ.ಗಿಂತಲೂ ಹೆಚ್ಚಿನ ಮೊತ್ತಕ್ಕೆ ಆಡಿಯೋ ರೈಟ್ಸ್​ ಮಾರಾಟ ಆಗಿದೆ. ಜು.1ರ ರಾತ್ರಿ 9 ಗಂಟೆಗೆ ಅಧಿಕೃತವಾಗಿಯೇ ಈ ಬಗ್ಗೆ ಮಾಹಿತಿ ಬಹಿರಂಗ ಆಗಲಿದೆ. ಆಗ ಪಕ್ಕಾ ಲೆಕ್ಕ ಸಿಗಲಿದೆ.

ಈ ಸಿನಿಮಾದ ಹಾಡುಗಳಿಗೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೆ, ಹಲವು ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಎಲ್ಲ ಭಾಷೆಯ ಆಡಿಯೋ ರೈಟ್ಸ್​ ಲಹರಿ ಸಂಸ್ಥೆಯ ಪಾಲಾಗಿದೆ.

ಆಡಿಯೋ ಹಕ್ಕು ಮಾರಾಟಕ್ಕೆ ಸಂಬಂಧಿಸಿದಂತೆ ಇಂದು (ಜು.1) ಹೊಂಬಾಳೆ ಫಿಲ್ಮ್ಸ್​ ಜೊತೆ ಲಹರಿ ಸಂಸ್ಥೆ ಅಧಿಕೃತವಾಗಿ ಒಪ್ಪಂದ ಮಾಡಿಕೊಂಡಿದೆ. ಲಹರಿ ಸಂಸ್ಥೆ ಮಾಲೀಕರಾದ ಮನೋಹರ್​ ನಾಯ್ಡು ಅವರು ಇಂದು ಸಹಿ ಹಾಕಿದ್ದಾರೆ. ಆದಷ್ಟು ಬೇಗ ಆಡಿಯೋ ರಿಲೀಸ್​ ಆಗಲಿ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 1’ ರೀತಿಯೇ ‘ಕೆಜಿಎಫ್​: ಚಾಪ್ಟರ್​ 2’ ಹಾಡುಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

ಎಲ್ಲವೂ ಪ್ಲ್ಯಾನ್​ ಪ್ರಕಾರ ನಡೆದರೆ, ಜು.16ರಂದು ಚಿತ್ರವನ್ನು ತೆರೆಕಾಣಿಸಬೇಕು ಎಂಬುದು ನಿರ್ಮಾಪಕ ವಿಜಯ್​ ಕಿರಗಂದೂರು ಅವರ ಆಲೋಚನೆ ಆಗಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹಾವಳಿಯಿಂದಾಗಿ ಲಾಕ್​ಡೌನ್​ ಉಂಟಾದ ಪರಿಣಾಮ, ರಿಲೀಸ್​ ದಿನಾಂಕ ಮತ್ತೆ ಮಂದೂಡುವುದು ಅನಿವಾರ್ಯ ಆಯಿತು. ಹೊಸ ರಿಲೀಸ್​ ಡೇಟ್​ ತಿಳಿದುಕೊಳ್ಳಲು ಸಿನಿಪ್ರಿಯರು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.

ಇದನ್ನೂ ಓದಿ:

ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಪುಷ್ಪ, ಕೆಜಿಎಫ್​ 2; ಯಶ್​-ಅಲ್ಲು ಅರ್ಜುನ್​ ನಡುವೆ​ ಭಾರಿ ಪೈಪೋಟಿ

ಮುಗಿಯಿತು ರಕ್ಷಿತ್​ Vs​ ಲಹರಿ ಕಿರಿಕ್​; ಮತ್ತೆ ಸ್ನೇಹ ಚಿಗುರಿದ್ದಕ್ಕೆ ಹೊಸ ಸೆಲ್ಫೀ ಸಾಕ್ಷಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ