AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟು ಕೋಟಿಗೆ ಸೇಲ್​ ಆಯ್ತು ‘ಕೆಜಿಎಫ್​ 2’ ಆಡಿಯೋ? ಲಹರಿ ಮ್ಯೂಸಿಕ್​ ತೆಕ್ಕೆಗೆ ಎಲ್ಲ ಭಾಷೆಯ ಸಾಂಗ್ಸ್​

KGF Chapter 2 songs: ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹಾಡುಗಳಿಗೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೆ, ಹಲವು ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಎಲ್ಲ ಭಾಷೆಯ ಆಡಿಯೋ ರೈಟ್ಸ್​ ಲಹರಿ ಸಂಸ್ಥೆಯ ಪಾಲಾಗಿದೆ.

ಎಷ್ಟು ಕೋಟಿಗೆ ಸೇಲ್​ ಆಯ್ತು ‘ಕೆಜಿಎಫ್​ 2’ ಆಡಿಯೋ? ಲಹರಿ ಮ್ಯೂಸಿಕ್​ ತೆಕ್ಕೆಗೆ ಎಲ್ಲ ಭಾಷೆಯ ಸಾಂಗ್ಸ್​
ಲಹರಿ ಮ್ಯೂಸಿಕ್​ ತೆಕ್ಕೆಗೆ ‘ಕೆಜಿಎಫ್​ 2’ ಆಡಿಯೋ
Follow us
ಮದನ್​ ಕುಮಾರ್​
|

Updated on: Jul 01, 2021 | 2:21 PM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಕೆಜಿಎಫ್​ 2’ ಚಿತ್ರ ಹಲವು ಕಾರಣಗಳಿಗಾಗಿ ಸದ್ದು ಮಾಡುತ್ತಿದೆ. ಯಶ್​ ನಾಯಕತ್ವದ, ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾದ ಆಡಿಯೋ ಹಕ್ಕುಗಳು ಮಾರಾಟ ಆಗಿವೆ. ಪ್ರತಿಷ್ಠಿತ ‘ಲಹರಿ ಮ್ಯೂಸಿಕ್​’ ಕಂಪನಿಯು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಆಡಿಯೋ ರೈಟ್ಸ್​ ಖರೀದಿ ಮಾಡಿದೆ. ಭಾರಿ ಮೊತ್ತಕ್ಕೆ ಹಕ್ಕುಗಳು ಸೇಲ್​ ಆಗಿವೆ.

‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದ ಹಾಡಿನ ಹಕ್ಕುಗಳು ಕೂಡ ‘ಲಹರಿ ಮ್ಯೂಸಿಕ್​’ ಪಾಲಾಗಿದ್ದವು. ಮೂಲಗಳ ಪ್ರಕಾರ, ಆಗ 3.60 ಕೋಟಿಗೆ ವ್ಯವಹಾರ ಕುದುರಿತ್ತು. ಆದರೆ ಈಗ ಅದಕ್ಕಿಂತಲೂ ದುಪ್ಪಟ್ಟ ಹಣ ನೀಡಿ ‘ಕೆಜಿಎಫ್​: ಚಾಪ್ಟರ್​ 2’ ಆಡಿಯೋವನ್ನು ಲಹರಿ ಸಂಸ್ಥೆ ಖರೀದಿಸಿದೆ. ಕೇಳಿಬಂದಿರುವ ಮಾಹಿತಿ ಪ್ರಕಾರ 6 ಕೋಟಿ ರೂ.ಗಿಂತಲೂ ಹೆಚ್ಚಿನ ಮೊತ್ತಕ್ಕೆ ಆಡಿಯೋ ರೈಟ್ಸ್​ ಮಾರಾಟ ಆಗಿದೆ. ಜು.1ರ ರಾತ್ರಿ 9 ಗಂಟೆಗೆ ಅಧಿಕೃತವಾಗಿಯೇ ಈ ಬಗ್ಗೆ ಮಾಹಿತಿ ಬಹಿರಂಗ ಆಗಲಿದೆ. ಆಗ ಪಕ್ಕಾ ಲೆಕ್ಕ ಸಿಗಲಿದೆ.

ಈ ಸಿನಿಮಾದ ಹಾಡುಗಳಿಗೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೆ, ಹಲವು ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಎಲ್ಲ ಭಾಷೆಯ ಆಡಿಯೋ ರೈಟ್ಸ್​ ಲಹರಿ ಸಂಸ್ಥೆಯ ಪಾಲಾಗಿದೆ.

ಆಡಿಯೋ ಹಕ್ಕು ಮಾರಾಟಕ್ಕೆ ಸಂಬಂಧಿಸಿದಂತೆ ಇಂದು (ಜು.1) ಹೊಂಬಾಳೆ ಫಿಲ್ಮ್ಸ್​ ಜೊತೆ ಲಹರಿ ಸಂಸ್ಥೆ ಅಧಿಕೃತವಾಗಿ ಒಪ್ಪಂದ ಮಾಡಿಕೊಂಡಿದೆ. ಲಹರಿ ಸಂಸ್ಥೆ ಮಾಲೀಕರಾದ ಮನೋಹರ್​ ನಾಯ್ಡು ಅವರು ಇಂದು ಸಹಿ ಹಾಕಿದ್ದಾರೆ. ಆದಷ್ಟು ಬೇಗ ಆಡಿಯೋ ರಿಲೀಸ್​ ಆಗಲಿ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 1’ ರೀತಿಯೇ ‘ಕೆಜಿಎಫ್​: ಚಾಪ್ಟರ್​ 2’ ಹಾಡುಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

ಎಲ್ಲವೂ ಪ್ಲ್ಯಾನ್​ ಪ್ರಕಾರ ನಡೆದರೆ, ಜು.16ರಂದು ಚಿತ್ರವನ್ನು ತೆರೆಕಾಣಿಸಬೇಕು ಎಂಬುದು ನಿರ್ಮಾಪಕ ವಿಜಯ್​ ಕಿರಗಂದೂರು ಅವರ ಆಲೋಚನೆ ಆಗಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹಾವಳಿಯಿಂದಾಗಿ ಲಾಕ್​ಡೌನ್​ ಉಂಟಾದ ಪರಿಣಾಮ, ರಿಲೀಸ್​ ದಿನಾಂಕ ಮತ್ತೆ ಮಂದೂಡುವುದು ಅನಿವಾರ್ಯ ಆಯಿತು. ಹೊಸ ರಿಲೀಸ್​ ಡೇಟ್​ ತಿಳಿದುಕೊಳ್ಳಲು ಸಿನಿಪ್ರಿಯರು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.

ಇದನ್ನೂ ಓದಿ:

ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಪುಷ್ಪ, ಕೆಜಿಎಫ್​ 2; ಯಶ್​-ಅಲ್ಲು ಅರ್ಜುನ್​ ನಡುವೆ​ ಭಾರಿ ಪೈಪೋಟಿ

ಮುಗಿಯಿತು ರಕ್ಷಿತ್​ Vs​ ಲಹರಿ ಕಿರಿಕ್​; ಮತ್ತೆ ಸ್ನೇಹ ಚಿಗುರಿದ್ದಕ್ಕೆ ಹೊಸ ಸೆಲ್ಫೀ ಸಾಕ್ಷಿ

ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್