AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ನಾಗ್​ ಬಗ್ಗೆ ಯಶ್​ ವಿಶೇಷ ಮಾತು; ಪದ್ಮ ಪ್ರಶಸ್ತಿ ಒತ್ತಾಯಕ್ಕೆ ರಾಕಿಂಗ್​ ಸ್ಟಾರ್​ ಧ್ವನಿ

‘ಪೀಪಲ್ಸ್​ ಪದ್ಮ’ ಅಭಿಯಾನದಲ್ಲಿ ನಟ ಅನಂತ್​ ನಾಗ್​ ಅವರ ಹೆಸರನ್ನು ಅನೇಕರು ಸೂಚಿಸುತ್ತಿದ್ದಾರೆ. ಯಶ್​, ರಿಷಬ್​ ಶೆಟ್ಟಿ, ರಕ್ಷಿತ್​ ಶೆಟ್ಟಿ, ಪುನೀತ್​ ರಾಜ್​ಕುಮಾರ್​ ಸೇರಿದಂತೆ ಅನೇಕರು ಈ ಅಭಿಯಾನದಲ್ಲಿ ಭಾಗಿ ಆಗಿದ್ದಾರೆ.

ಅನಂತ್ ನಾಗ್​ ಬಗ್ಗೆ ಯಶ್​ ವಿಶೇಷ ಮಾತು; ಪದ್ಮ ಪ್ರಶಸ್ತಿ ಒತ್ತಾಯಕ್ಕೆ ರಾಕಿಂಗ್​ ಸ್ಟಾರ್​ ಧ್ವನಿ
ಯಶ್​, ಅನಂತ್​ ನಾಗ್​
TV9 Web
| Edited By: |

Updated on:Jul 21, 2021 | 12:29 PM

Share

ಚಂದನವನದ ಹಿರಿಯ ನಟ ಅನಂತ್​ ನಾಗ್ (Anant Nag)​ ಅವರಿಗೆ ಪದ್ಮ ಪ್ರಶಸ್ತಿ (Padma Award) ಸಿಗಬೇಕು ಎನ್ನುವ ಒತ್ತಾಯ ಜೋರಾಗಿ ಕೇಳಿಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಅನೇಕರು ಧ್ವನಿ ಎತ್ತುತ್ತಿದ್ದಾರೆ. ಅಪಾರ ಅಭಿಮಾನಿಗಳು, ಸೆಲೆಬ್ರಿಟಿಗಳು ಟ್ವೀಟ್​ ಮಾಡುವ ಮೂಲಕ ಅಭಿಯಾನ ಮಾಡುತ್ತಿದ್ದಾರೆ. ಈಗ ರಾಕಿಂಗ್​ ಸ್ಟಾರ್​ ಯಶ್​ (Yash) ಕೂಡ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅನಂತ್​ ನಾಗ್​ ಅವರಿಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂಬ ಕೂಗಿಗೆ ಯಶ್​ ದನಿ ಸೇರಿಸಿದ್ದಾರೆ.

‘ನಟನೆ ಎಂದರೆ ವರ್ತಿಸುವುದು. ಒಮ್ಮೆ ಅನಂತ್​ ನಾಗ್​ ಇದನ್ನು ಹೇಳಿದ್ದರು. ಆ ಮಾತು ನನ್ನಲ್ಲಿ ಉಳಿದುಕೊಂಡಿದೆ. ನಾನು ಬೆಳೆಯುವಾಗ ಅವರ ಕಾಮಿಡಿ ಸಿನಿಮಾಗಳನ್ನು ನೋಡಿ ನಕ್ಕಿದ್ದೇನೆ. ಸಿನಿಮಾದಲ್ಲಿ ಅವರು ಅತ್ತಾಗ ನನ್ನ ಕಣ್ಣುಗಳು ತೇವ ಆಗಿವೆ. ಹಾರರ್​ ಸಿನಿಮಾಗಳಲ್ಲಿ ನಮ್ಮನ್ನು ಅವರು ಭಯಪಡಿಸಿದಾಗ ನಾನು ಬೆಚ್ಚಿ ಬಿದ್ದಿದ್ದೇನೆ’ ಎನ್ನುವ ಮೂಲಕ ಅನಂತ್​ ನಾಗ್​ ಬಗ್ಗೆ ಯಶ್​ ಬರಹ ಆರಂಭಿಸಿದ್ದಾರೆ.

‘ಯಾವ ಪಾತ್ರವನ್ನಾದರೂ ಜೀವಿಸಬಲ್ಲ ಇಂಥ ಮೋಡಿಗಾರನ ಜೊತೆ ನಟಿಸಬೇಕು ಎಂದು ನಾನು ಮೊದಲಿನಿಂದಲೂ ಬಯಸುತ್ತಿದ್ದೆ. ಎವರ್​ಗ್ರೀನ್​ ಎಂಬ ಪದವೇ ಅವರಾಗಿದ್ದಾರೆ. ಯಾಕೆಂದರೆ, ಅವರ ಹಳೇ ಸಿನಿಮಾಗಳನ್ನು ಇಂದು ನೋಡಿದಾಗ ಯಾವುದೂ ಔಟ್​ಡೇಟೆಡ್​ ಎನಿಸಿಲ್ಲ. ಅವರ ನಟನೆ ಮತ್ತು ಸೃಜನಶೀಲತೆ ಕೂಡ ಹಾಗೆಯೇ ಇದೆ. ನನ್ನ ವೃತ್ತಿಜೀವನದ ಆರಂಭದಿಂದಲೂ ಇಂಥ ಅದ್ಭುತ ನಟನ ಜೊತೆ ಅಭಿನಯಿಸುವ ಅವಕಾಶ ನನಗೆ ಸಿಕ್ಕಿತ್ತು. ಯಾವುದೇ ವಿಷಯದ ಬಗ್ಗೆ ಅವರ ಜ್ಞಾನ ಅಪಾರ. ನನಗೆ ಅವರು ಸದಾ ಸ್ಫೂರ್ತಿ’ ಎಂದು ಯಶ್​ ಹೇಳಿದ್ದಾರೆ.

‘ಅನಂತ್ ನಾಗ್​ ಅವರು ಕರ್ನಾಟಕದ ಹೆಮ್ಮೆ. ಅವರು ಕೇವಲ ನಟರಲ್ಲ. ಭಾರತೀಯ ಸಿನಿಮಾರಂಗದ ದೊಡ್ಡ ಮೇಧಾವಿ. ಪದ್ಮ ಪ್ರಶಸ್ತಿಗೆ ಅವರಿಗಿಂತ ಇನ್ಯಾರು ಉತ್ತಮರು?’ ಎಂದು ಯಶ್​ ಪೋಸ್ಟ್​ ಮಾಡಿದ್ದಾರೆ. ಕನ್ನಡ ಚಿತ್ರರಂಗದ ನಟ/ನಿರ್ದೇಶಕರಾದ ರಿಷಬ್​ ಶೆಟ್ಟಿ, ರಕ್ಷಿತ್​ ಶೆಟ್ಟಿ, ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಅನೇಕರು ಈ ಅಭಿಯಾನದಲ್ಲಿ ಭಾಗಿ ಆಗಿದ್ದಾರೆ.

‘ಕೆಜಿಎಫ್​ ಚಾಪ್ಟರ್​ 1’ ಸಿನಿಮಾದಲ್ಲಿ ಅನಂತ್​ ನಾಗ್​ ಪಾತ್ರ ಗಮನ ಸೆಳೆದಿತ್ತು. ಆದರೆ ಎರಡನೇ ಚಾಪ್ಟರ್​ನಲ್ಲಿ ಅವರ ಪಾತ್ರದ ಬಗ್ಗೆ ಕೆಲವು ಗುಸುಗುಸು ಕೇಳಿಬಂದಿದೆ. ಅನಂತ್​ ನಾಗ್​ ನಿಭಾಯಿಸಿದ್ದ ಪಾತ್ರದ ಗೆಟಪ್​ ಧರಿಸಿಯೇ ಪ್ರಕಾಶ್​ ರಾಜ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರತಂಡಕ್ಕೆ ಎಂಟ್ರಿ ನೀಡಿರುವುದರಿಂದ ಅಭಿಮಾನಿಗಳಲ್ಲಿ ತೀವ್ರ ಕೌತುಕ ಮೂಡಿದೆ. ಚಿತ್ರ ಬಿಡುಗಡೆ ಆದ ನಂತರವೇ ಈ ಕುತೂಹಲಕ್ಕೆ ತೆರೆ ಬೀಳಬೇಕಿದೆ.

ಇದನ್ನೂ ಓದಿ:

‘ಪ್ರಶಸ್ತಿಗಿಂತ ಜನರ ಪ್ರೀತಿ ದೊಡ್ಡದು’; AnanthnagForPadma ಆಂದೋಲನದ ಬಗ್ಗೆ ಅನಂತ್​ನಾಗ್​ ಪ್ರತಿಕ್ರಿಯೆ

ರವಿಚಂದ್ರನ್​ ‘ದೃಶ್ಯ 2’ ಶೂಟಿಂಗ್​ ಶುರು; ಚಿತ್ರತಂಡಕ್ಕೆ ಹೊಸ ಎಂಟ್ರಿ ಅನಂತ್​ ನಾಗ್​​

Published On - 12:22 pm, Wed, 21 July 21

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!