AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ಐ ಲವ್​ ಯೂ ಪೆಪ್ಸಿ’: ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ

ಸೋಶಿಯಲ್ ಮೀಡಿಯಾದಲ್ಲಿ ಯಶ್ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಪೆಪ್ಸಿ ಕುಡಿಯುತ್ತಿರುವ ವಿಡಿಯೋನ ಅವರು ಹಂಚಿಕೊಂಡಿದ್ದಾರೆ.

Yash: ‘ಐ ಲವ್​ ಯೂ ಪೆಪ್ಸಿ’: ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ
ರಾಜೇಶ್ ದುಗ್ಗುಮನೆ
|

Updated on: Jan 24, 2023 | 1:23 PM

Share

ನಟ ಯಶ್ (Yash) ಅವರು ‘ಕೆಜಿಎಫ್ 2’ ಸಿನಿಮಾ ತೆರೆಕಂಡ ಬಳಿಕ ಬೇಡಿಕೆಯ ನಟ ಆಗಿದ್ದಾರೆ. ವಿಶ್ವಮಟ್ಟದಲ್ಲಿ ಅವರನ್ನು ಗುರುತಿಸಲಾಗುತ್ತಿದೆ. ವಿದೇಶಕ್ಕೆ ತೆರಳಿದಾಗ ಅನೇಕರು ಅವರ ಜತೆ ಸೆಲ್ಫಿ ತೆಗೆದುಕೊಂಡಿದ್ದು ಇದಕ್ಕೆ ಸಾಕ್ಷಿ. ಯಶ್ ಖ್ಯಾತಿ ಹೆಚ್ಚಿದಂತೆ ಅವರಿಗೆ ಹೊಸ ಹೊಸ ಜಾಹೀರಾತು ಆಫರ್​ಗಳು ಬರುತ್ತಿವೆ. ಅನೇಕ ಬ್ರ್ಯಾಂಡ್​ಗಳಿಗೆ ಅವರು ಅಂಬಾಸಿಡರ್ ಆಗುತ್ತಿದ್ದಾರೆ. ಈಗ ರಾಕಿಂಗ್ ಸ್ಟಾರ್ ಪೆಪ್ಸಿ ಇಂಡಿಯಾಗೆ (Pepsi India) ರಾಯಭಾರಿ ಆಗಿದ್ದಾರೆ. ಇದರ ಪ್ರೋಮೋವನ್ನು ಯಶ್ ಹಂಚಿಕೊಂಡಿದ್ದಾರೆ.

‘ಕೆಜಿಎಫ್ 2’ ಕಳೆದ ವರ್ಷ ತೆರೆಗೆ ಬಂತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ಕಲೆಕ್ಷನ್ ಮಾಡಿದೆ. 2022ರಲ್ಲಿ ತೆರೆಗೆ ಬಂದು ಅತಿ ಹೆಚ್ಚು ಬಿಸ್ನೆಸ್ ಮಾಡಿದ ಭಾರತೀಯ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಯಶ್ ಅವರ ಖ್ಯಾತಿ ಕೂಡ ಹೆಚ್ಚಿದೆ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಹೀಗಿರುವಾಗಲೇ ಅವರು ಪೆಪ್ಸಿ ಕಂಪನಿಯ ಪ್ರಚಾರ ರಾಯಭಾರಿ ಆಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಯಶ್ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಪೆಪ್ಸಿ ಕುಡಿಯುತ್ತಿರುವ ವಿಡಿಯೋ ಹಂಚಿಕೊಂಡಿರುವ ಯಶ್​, ‘ಅಭಿನಂದನೆಗಳು ಪೆಪ್ಸಿ. ಐ ಲವ್​ ಯೂ’ ಎಂದು ಹೇಳಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ‘ಇನ್ಮುಂದೆ ಪೆಪ್ಸಿಗೆ ತೂಕ ಬರುತ್ತದೆ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಯಶ್ ಅವರಿಗೆ ಈ ಮೊದಲು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲು ಆಫರ್ ಬಂದಿತ್ತು ಎನ್ನಲಾಗಿದೆ. ಆದರೆ, ಇದನ್ನು ಅವರು ರಿಜೆಕ್ಟ್ ಮಾಡಿದ್ದರು. ಪಾನ್ ಮಸಾಲ ಸೇವನೆ ಆರೋಗ್ಯಕ್ಕೆ ಹಾನಿಕರ. ಹೀಗಾಗಿ ಯಶ್ ಅವರು ಇದನ್ನು ಪ್ರೋತ್ಸಾಹಿಸಿರಲಿಲ್ಲ.

ಯಶ್ 19ನೇ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಈ ಮೊದಲಿನಿಂದಲೂ ಕುತೂಹಲ ಇದೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಯಶ್ ಮುಂದಿನ ಚಿತ್ರವನ್ನು ‘ಕೆವಿಎನ್​ ಪ್ರೊಡಕ್ಷನ್ಸ್​​’ ನಿರ್ಮಾಣ ಮಾಡಲಿದೆ ಎಂಬ ಮಾತು ಕೇಳಿ ಬಂದಿದೆ. ಈ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ, ಯಾರೆಲ್ಲ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬುದು ಇನ್ನೂ ಗುಟ್ಟಾಗಿಯೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ