AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ಐ ಲವ್​ ಯೂ ಪೆಪ್ಸಿ’: ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ

ಸೋಶಿಯಲ್ ಮೀಡಿಯಾದಲ್ಲಿ ಯಶ್ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಪೆಪ್ಸಿ ಕುಡಿಯುತ್ತಿರುವ ವಿಡಿಯೋನ ಅವರು ಹಂಚಿಕೊಂಡಿದ್ದಾರೆ.

Yash: ‘ಐ ಲವ್​ ಯೂ ಪೆಪ್ಸಿ’: ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ
ರಾಜೇಶ್ ದುಗ್ಗುಮನೆ
|

Updated on: Jan 24, 2023 | 1:23 PM

Share

ನಟ ಯಶ್ (Yash) ಅವರು ‘ಕೆಜಿಎಫ್ 2’ ಸಿನಿಮಾ ತೆರೆಕಂಡ ಬಳಿಕ ಬೇಡಿಕೆಯ ನಟ ಆಗಿದ್ದಾರೆ. ವಿಶ್ವಮಟ್ಟದಲ್ಲಿ ಅವರನ್ನು ಗುರುತಿಸಲಾಗುತ್ತಿದೆ. ವಿದೇಶಕ್ಕೆ ತೆರಳಿದಾಗ ಅನೇಕರು ಅವರ ಜತೆ ಸೆಲ್ಫಿ ತೆಗೆದುಕೊಂಡಿದ್ದು ಇದಕ್ಕೆ ಸಾಕ್ಷಿ. ಯಶ್ ಖ್ಯಾತಿ ಹೆಚ್ಚಿದಂತೆ ಅವರಿಗೆ ಹೊಸ ಹೊಸ ಜಾಹೀರಾತು ಆಫರ್​ಗಳು ಬರುತ್ತಿವೆ. ಅನೇಕ ಬ್ರ್ಯಾಂಡ್​ಗಳಿಗೆ ಅವರು ಅಂಬಾಸಿಡರ್ ಆಗುತ್ತಿದ್ದಾರೆ. ಈಗ ರಾಕಿಂಗ್ ಸ್ಟಾರ್ ಪೆಪ್ಸಿ ಇಂಡಿಯಾಗೆ (Pepsi India) ರಾಯಭಾರಿ ಆಗಿದ್ದಾರೆ. ಇದರ ಪ್ರೋಮೋವನ್ನು ಯಶ್ ಹಂಚಿಕೊಂಡಿದ್ದಾರೆ.

‘ಕೆಜಿಎಫ್ 2’ ಕಳೆದ ವರ್ಷ ತೆರೆಗೆ ಬಂತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ಕಲೆಕ್ಷನ್ ಮಾಡಿದೆ. 2022ರಲ್ಲಿ ತೆರೆಗೆ ಬಂದು ಅತಿ ಹೆಚ್ಚು ಬಿಸ್ನೆಸ್ ಮಾಡಿದ ಭಾರತೀಯ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಯಶ್ ಅವರ ಖ್ಯಾತಿ ಕೂಡ ಹೆಚ್ಚಿದೆ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಹೀಗಿರುವಾಗಲೇ ಅವರು ಪೆಪ್ಸಿ ಕಂಪನಿಯ ಪ್ರಚಾರ ರಾಯಭಾರಿ ಆಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಯಶ್ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಪೆಪ್ಸಿ ಕುಡಿಯುತ್ತಿರುವ ವಿಡಿಯೋ ಹಂಚಿಕೊಂಡಿರುವ ಯಶ್​, ‘ಅಭಿನಂದನೆಗಳು ಪೆಪ್ಸಿ. ಐ ಲವ್​ ಯೂ’ ಎಂದು ಹೇಳಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ‘ಇನ್ಮುಂದೆ ಪೆಪ್ಸಿಗೆ ತೂಕ ಬರುತ್ತದೆ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಯಶ್ ಅವರಿಗೆ ಈ ಮೊದಲು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲು ಆಫರ್ ಬಂದಿತ್ತು ಎನ್ನಲಾಗಿದೆ. ಆದರೆ, ಇದನ್ನು ಅವರು ರಿಜೆಕ್ಟ್ ಮಾಡಿದ್ದರು. ಪಾನ್ ಮಸಾಲ ಸೇವನೆ ಆರೋಗ್ಯಕ್ಕೆ ಹಾನಿಕರ. ಹೀಗಾಗಿ ಯಶ್ ಅವರು ಇದನ್ನು ಪ್ರೋತ್ಸಾಹಿಸಿರಲಿಲ್ಲ.

ಯಶ್ 19ನೇ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಈ ಮೊದಲಿನಿಂದಲೂ ಕುತೂಹಲ ಇದೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಯಶ್ ಮುಂದಿನ ಚಿತ್ರವನ್ನು ‘ಕೆವಿಎನ್​ ಪ್ರೊಡಕ್ಷನ್ಸ್​​’ ನಿರ್ಮಾಣ ಮಾಡಲಿದೆ ಎಂಬ ಮಾತು ಕೇಳಿ ಬಂದಿದೆ. ಈ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ, ಯಾರೆಲ್ಲ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬುದು ಇನ್ನೂ ಗುಟ್ಟಾಗಿಯೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ