AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ಐ ಲವ್​ ಯೂ ಪೆಪ್ಸಿ’: ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ

ಸೋಶಿಯಲ್ ಮೀಡಿಯಾದಲ್ಲಿ ಯಶ್ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಪೆಪ್ಸಿ ಕುಡಿಯುತ್ತಿರುವ ವಿಡಿಯೋನ ಅವರು ಹಂಚಿಕೊಂಡಿದ್ದಾರೆ.

Yash: ‘ಐ ಲವ್​ ಯೂ ಪೆಪ್ಸಿ’: ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ
ರಾಜೇಶ್ ದುಗ್ಗುಮನೆ
|

Updated on: Jan 24, 2023 | 1:23 PM

Share

ನಟ ಯಶ್ (Yash) ಅವರು ‘ಕೆಜಿಎಫ್ 2’ ಸಿನಿಮಾ ತೆರೆಕಂಡ ಬಳಿಕ ಬೇಡಿಕೆಯ ನಟ ಆಗಿದ್ದಾರೆ. ವಿಶ್ವಮಟ್ಟದಲ್ಲಿ ಅವರನ್ನು ಗುರುತಿಸಲಾಗುತ್ತಿದೆ. ವಿದೇಶಕ್ಕೆ ತೆರಳಿದಾಗ ಅನೇಕರು ಅವರ ಜತೆ ಸೆಲ್ಫಿ ತೆಗೆದುಕೊಂಡಿದ್ದು ಇದಕ್ಕೆ ಸಾಕ್ಷಿ. ಯಶ್ ಖ್ಯಾತಿ ಹೆಚ್ಚಿದಂತೆ ಅವರಿಗೆ ಹೊಸ ಹೊಸ ಜಾಹೀರಾತು ಆಫರ್​ಗಳು ಬರುತ್ತಿವೆ. ಅನೇಕ ಬ್ರ್ಯಾಂಡ್​ಗಳಿಗೆ ಅವರು ಅಂಬಾಸಿಡರ್ ಆಗುತ್ತಿದ್ದಾರೆ. ಈಗ ರಾಕಿಂಗ್ ಸ್ಟಾರ್ ಪೆಪ್ಸಿ ಇಂಡಿಯಾಗೆ (Pepsi India) ರಾಯಭಾರಿ ಆಗಿದ್ದಾರೆ. ಇದರ ಪ್ರೋಮೋವನ್ನು ಯಶ್ ಹಂಚಿಕೊಂಡಿದ್ದಾರೆ.

‘ಕೆಜಿಎಫ್ 2’ ಕಳೆದ ವರ್ಷ ತೆರೆಗೆ ಬಂತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ಕಲೆಕ್ಷನ್ ಮಾಡಿದೆ. 2022ರಲ್ಲಿ ತೆರೆಗೆ ಬಂದು ಅತಿ ಹೆಚ್ಚು ಬಿಸ್ನೆಸ್ ಮಾಡಿದ ಭಾರತೀಯ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಯಶ್ ಅವರ ಖ್ಯಾತಿ ಕೂಡ ಹೆಚ್ಚಿದೆ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಹೀಗಿರುವಾಗಲೇ ಅವರು ಪೆಪ್ಸಿ ಕಂಪನಿಯ ಪ್ರಚಾರ ರಾಯಭಾರಿ ಆಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಯಶ್ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಪೆಪ್ಸಿ ಕುಡಿಯುತ್ತಿರುವ ವಿಡಿಯೋ ಹಂಚಿಕೊಂಡಿರುವ ಯಶ್​, ‘ಅಭಿನಂದನೆಗಳು ಪೆಪ್ಸಿ. ಐ ಲವ್​ ಯೂ’ ಎಂದು ಹೇಳಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ‘ಇನ್ಮುಂದೆ ಪೆಪ್ಸಿಗೆ ತೂಕ ಬರುತ್ತದೆ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಯಶ್ ಅವರಿಗೆ ಈ ಮೊದಲು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲು ಆಫರ್ ಬಂದಿತ್ತು ಎನ್ನಲಾಗಿದೆ. ಆದರೆ, ಇದನ್ನು ಅವರು ರಿಜೆಕ್ಟ್ ಮಾಡಿದ್ದರು. ಪಾನ್ ಮಸಾಲ ಸೇವನೆ ಆರೋಗ್ಯಕ್ಕೆ ಹಾನಿಕರ. ಹೀಗಾಗಿ ಯಶ್ ಅವರು ಇದನ್ನು ಪ್ರೋತ್ಸಾಹಿಸಿರಲಿಲ್ಲ.

ಯಶ್ 19ನೇ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಈ ಮೊದಲಿನಿಂದಲೂ ಕುತೂಹಲ ಇದೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಯಶ್ ಮುಂದಿನ ಚಿತ್ರವನ್ನು ‘ಕೆವಿಎನ್​ ಪ್ರೊಡಕ್ಷನ್ಸ್​​’ ನಿರ್ಮಾಣ ಮಾಡಲಿದೆ ಎಂಬ ಮಾತು ಕೇಳಿ ಬಂದಿದೆ. ಈ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ, ಯಾರೆಲ್ಲ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬುದು ಇನ್ನೂ ಗುಟ್ಟಾಗಿಯೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!