AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ. ಎನ್​ಟಿಆರ್​ ತಾಯಿ ಜತೆ ಇರುವ ವಿಶೇಷ ಬಾಂಧವ್ಯದ ಬಗ್ಗೆ ಮಾತಾಡಿದ ಯಶ್​; ಇದು ಕನ್ನಡದ ನಂಟು

ಜ್ಯೂ. ಎನ್​ಟಿಆರ್ ಕುಟುಂಬದ ಜೊತೆಗೆ ಯಶ್​ ಅವರಿಗೆ ಉತ್ತಮ ಒಡನಾಟ ಇದೆ. ಆ ಕುರಿತು ಅವರು ಮಾತನಾಡಿದ್ದಾರೆ.

ಜ್ಯೂ. ಎನ್​ಟಿಆರ್​ ತಾಯಿ ಜತೆ ಇರುವ ವಿಶೇಷ ಬಾಂಧವ್ಯದ ಬಗ್ಗೆ ಮಾತಾಡಿದ ಯಶ್​; ಇದು ಕನ್ನಡದ ನಂಟು
ಯಶ್​, ಜ್ಯೂ. ಎನ್​ಟಿಆರ್​
TV9 Web
| Edited By: |

Updated on: Apr 14, 2022 | 1:28 PM

Share

ನಟ ಯಶ್​ (Yash) ಈಗ ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿಲ್ಲ. ಪ್ಯಾನ್​ ಇಂಡಿಯಾ ಸಿನಿಮಾ ಮೂಲಕ ಅವರು ದೇಶವ್ಯಾಪ್ತಿ ಪ್ರಸಿದ್ಧಿ ಪಡೆದಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಅದೇ ರೀತಿ ಎಲ್ಲ ಭಾಷೆಯ ಚಿತ್ರರಂಗದವರ ಜೊತೆಗೂ ಯಶ್​ ಉತ್ತಮ ನಂಟು ಹೊಂದಿದ್ದಾರೆ. ಅದರಲ್ಲೂ ಪಕ್ಕದ ಟಾಲಿವುಡ್​ನಲ್ಲಿ ಅವರಿಗೆ ಅನೇಕ ಸೆಲೆಬ್ರಿಟಿಗಳು ಸ್ನೇಹಿತರಾಗಿದ್ದಾರೆ. ರಾಮ್​ ಚರಣ್, ಜ್ಯೂ, ಎನ್​ಟಿಆರ್​ (Jr NTR) ಸೇರಿದಂತೆ ಹಲವರ ಜೊತೆ ಅವರಿಗೆ ಬಾಂಧವ್ಯ ಇದೆ. ಯಶ್​ ಪ್ರತಿ ಬಾರಿ ಸಿನಿಮಾ ಕೆಲಸಗಳ ಸಲವಾಗಿ ಹೈದರಾಬಾದ್​ಗೆ ಹೋದಾಗ ರಾಮ್​ ಚರಣ್​ ಅವರು ಮನೆಯಲ್ಲಿ ತಯಾರಿಸಿದ ಅಡುಗೆಯಲ್ಲಿ ಕಳಿಸಿಕೊಡುತ್ತಾರಂತೆ. ಇಂಥ ಹಲವು ಸಂಗತಿಗಳ ಬಗ್ಗೆ ‘ರಾಕಿಂಗ್​ ಸ್ಟಾರ್​’ ಮಾತನಾಡಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಪ್ರಮೋಷನ್​ ಸಲುವಾಗಿ ಹೈದರಾಬಾದ್​ನಲ್ಲಿ ಮಾಧ್ಯಮಗಳಿಗೆ ಸಂದರ್ಶನ ನೀಡಿದಾಗ ಈ ವಿಚಾರಗಳ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಆಯಾ ಊರುಗಳಿಗೆ ತೆರಳಿದಾಗ ಅಲ್ಲಿನ ಭಾಷೆಯಲ್ಲಿ ಮಾತನಾಡಲು ಯಶ್​ ಪ್ರಯತ್ನಿಸುತ್ತಾರೆ. ಅದರಿಂದ ಅವರಿಗೆ ಅಭಿಮಾನಿಗಳು ಹೆಚ್ಚು ಗೌರವ ನೀಡುತ್ತಾರೆ. ಟಾಲಿವುಡ್​ನ ‘ಆರ್​ಆರ್​ಆರ್​’ ಸಿನಿಮಾ ಬಗ್ಗೆ ಯಶ್​ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಆ ಚಿತ್ರದಲ್ಲಿ ನಟಿಸಿದ ಸ್ಟಾರ್​ ಕಲಾವಿದರಾದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಜೊತೆ ತಮಗೆ ಇರುವ ಸ್ನೇಹ-ಸಂಬಂಧ ಯಾವ ರೀತಿಯದ್ದು ಎಂಬುದನ್ನು ಕೂಡ ತಿಳಿಸಿದ್ದಾರೆ.

ಜ್ಯೂ. ಎನ್​ಟಿಆರ್​ ಅವರ ಮನೆಗೆ ಯಶ್​ ಒಂದೆರಡು ಬಾರಿ ಭೇಟಿ ನೀಡಿದ್ದಾರೆ. ಜ್ಯೂ. ಎನ್​ಟಿಆರ್ ಅವರು ಊಟಕ್ಕೆ ಆಹ್ವಾನಿಸಿದ್ದರು. ಅವರ ಕುಟುಂಬದವರು ನೀಡಿದ ಆತಿಥ್ಯ ಕಂಡು ಯಶ್​ ಖುಷಿಪಟ್ಟಿದ್ದಾರೆ. ಜ್ಯೂ. ಎನ್​​ಟಿಆರ್​ ಅವರ ತಾಯಿ ಶಾಲಿನಿ ಸ್ವಾಗತಿಸಿ, ಅತಿಥಿ ಸತ್ಕಾರ ಮಾಡಿದ ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎನ್ನುತ್ತಾರೆ ಯಶ್​. ಜ್ಯೂ. ಎನ್​ಟಿಆರ್​ ತಾಯಿ ಕನ್ನಡದವರಾದ ಕಾರಣ ಇಷ್ಟೊಂದು ಬಾಂಧವ್ಯ ಬೆಳೆಯಲು ಸಾಧ್ಯವಾಯ್ತು ಎಂಬುದು ಅವರ ಭಾವನೆ. ‘ಅವರು ಕನ್ನಡದವರಾದ್ದರಿಂದ ಅವರ ಜೊತೆ ನಾವು ಸುಲಭವಾಗಿ ಮಾತನಾಡಬಹುದು’ ಎಂದು ಯಶ್​ ಹೇಳಿದ್ದಾರೆ. ಅದೇ ರೀತಿ ಜ್ಯೂ. ಎನ್​ಟಿಆರ್ ಅವರಿಗೂ ಕನ್ನಡದ ಮೇಲೆ ಅಭಿಮಾನ ಇದೆ. ಅವಕಾಶ ಸಿಕ್ಕಾಗಲೆಲ್ಲ ಅವರು ಕನ್ನಡದಲ್ಲಿ ಮಾತನಾಡುತ್ತಾರೆ.

ಕನ್ನಡದಲ್ಲಿ ಮೂಡಿಬಂದಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಿಗೂ ಡಬ್​ ಆಗಿ ಬಿಡುಗಡೆ ಆಗಿದೆ. ಆಯಾ ಭಾಷೆಯಲ್ಲಿ ಜನರು ಈ ಚಿತ್ರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲೂ ಹಿಂದಿ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಹಿಂದಿ ವರ್ಷನ್​ನಿಂದ ಈ ಸಿನಿಮಾಗೆ ಅತಿ ಹೆಚ್ಚು ಕಲೆಕ್ಷನ್​ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಬಾಲಿವುಡ್​ ಬಾಕ್ಸ್​ ಆಫೀಸ್​ ತಜ್ಞ ತರಣ್​ ಆದರ್ಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಒಂದೇ ಪದದಲ್ಲಿ ಇದನ್ನು ‘ಬ್ಲಾಕ್​ ಬಸ್ಟರ್​’ ಎಂದು ಹೊಗಳಿದ್ದಾರೆ. 5ಕ್ಕೆ 4.5 ರೇಟಿಂಗ್​ ನೀಡಿದ್ದಾರೆ. ಹಾಗಾಗಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಈ ಚಿತ್ರದ ಮೇಲೆ ಇನ್ನಷ್ಟು ಕ್ರೇಜ್​ ಹೆಚ್ಚಾಗಿದೆ.

ಇದನ್ನೂ ಓದಿ:

Yash Boss: ‘ಬಾಸ್’​ ಸ್ಥಾನ ಪಡೆದುಕೊಂಡ ಯಶ್​; ದೇಶಾದ್ಯಂತ ಟ್ರೆಂಡ್​ ಆಗಿದೆ ಈ ಹೆಸರು

‘ಕೆಜಿಎಫ್​ 3ನೇ ಪಾರ್ಟ್​ ಬರಲಿದೆ’: ಭವಿಷ್ಯ ನುಡಿದ ಪ್ರೇಕ್ಷಕರು; ಯಶ್​ ಫ್ಯಾನ್ಸ್​ ಹೀಗೆ ಹೇಳ್ತಿರೋದು ಏಕೆ?

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ