ಜ್ಯೂ. ಎನ್​ಟಿಆರ್​ ತಾಯಿ ಜತೆ ಇರುವ ವಿಶೇಷ ಬಾಂಧವ್ಯದ ಬಗ್ಗೆ ಮಾತಾಡಿದ ಯಶ್​; ಇದು ಕನ್ನಡದ ನಂಟು

ಜ್ಯೂ. ಎನ್​ಟಿಆರ್ ಕುಟುಂಬದ ಜೊತೆಗೆ ಯಶ್​ ಅವರಿಗೆ ಉತ್ತಮ ಒಡನಾಟ ಇದೆ. ಆ ಕುರಿತು ಅವರು ಮಾತನಾಡಿದ್ದಾರೆ.

ಜ್ಯೂ. ಎನ್​ಟಿಆರ್​ ತಾಯಿ ಜತೆ ಇರುವ ವಿಶೇಷ ಬಾಂಧವ್ಯದ ಬಗ್ಗೆ ಮಾತಾಡಿದ ಯಶ್​; ಇದು ಕನ್ನಡದ ನಂಟು
ಯಶ್​, ಜ್ಯೂ. ಎನ್​ಟಿಆರ್​
Follow us
| Updated By: ಮದನ್​ ಕುಮಾರ್​

Updated on: Apr 14, 2022 | 1:28 PM

ನಟ ಯಶ್​ (Yash) ಈಗ ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿಲ್ಲ. ಪ್ಯಾನ್​ ಇಂಡಿಯಾ ಸಿನಿಮಾ ಮೂಲಕ ಅವರು ದೇಶವ್ಯಾಪ್ತಿ ಪ್ರಸಿದ್ಧಿ ಪಡೆದಿದ್ದಾರೆ. ಎಲ್ಲ ರಾಜ್ಯಗಳಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಅದೇ ರೀತಿ ಎಲ್ಲ ಭಾಷೆಯ ಚಿತ್ರರಂಗದವರ ಜೊತೆಗೂ ಯಶ್​ ಉತ್ತಮ ನಂಟು ಹೊಂದಿದ್ದಾರೆ. ಅದರಲ್ಲೂ ಪಕ್ಕದ ಟಾಲಿವುಡ್​ನಲ್ಲಿ ಅವರಿಗೆ ಅನೇಕ ಸೆಲೆಬ್ರಿಟಿಗಳು ಸ್ನೇಹಿತರಾಗಿದ್ದಾರೆ. ರಾಮ್​ ಚರಣ್, ಜ್ಯೂ, ಎನ್​ಟಿಆರ್​ (Jr NTR) ಸೇರಿದಂತೆ ಹಲವರ ಜೊತೆ ಅವರಿಗೆ ಬಾಂಧವ್ಯ ಇದೆ. ಯಶ್​ ಪ್ರತಿ ಬಾರಿ ಸಿನಿಮಾ ಕೆಲಸಗಳ ಸಲವಾಗಿ ಹೈದರಾಬಾದ್​ಗೆ ಹೋದಾಗ ರಾಮ್​ ಚರಣ್​ ಅವರು ಮನೆಯಲ್ಲಿ ತಯಾರಿಸಿದ ಅಡುಗೆಯಲ್ಲಿ ಕಳಿಸಿಕೊಡುತ್ತಾರಂತೆ. ಇಂಥ ಹಲವು ಸಂಗತಿಗಳ ಬಗ್ಗೆ ‘ರಾಕಿಂಗ್​ ಸ್ಟಾರ್​’ ಮಾತನಾಡಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಪ್ರಮೋಷನ್​ ಸಲುವಾಗಿ ಹೈದರಾಬಾದ್​ನಲ್ಲಿ ಮಾಧ್ಯಮಗಳಿಗೆ ಸಂದರ್ಶನ ನೀಡಿದಾಗ ಈ ವಿಚಾರಗಳ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಆಯಾ ಊರುಗಳಿಗೆ ತೆರಳಿದಾಗ ಅಲ್ಲಿನ ಭಾಷೆಯಲ್ಲಿ ಮಾತನಾಡಲು ಯಶ್​ ಪ್ರಯತ್ನಿಸುತ್ತಾರೆ. ಅದರಿಂದ ಅವರಿಗೆ ಅಭಿಮಾನಿಗಳು ಹೆಚ್ಚು ಗೌರವ ನೀಡುತ್ತಾರೆ. ಟಾಲಿವುಡ್​ನ ‘ಆರ್​ಆರ್​ಆರ್​’ ಸಿನಿಮಾ ಬಗ್ಗೆ ಯಶ್​ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಆ ಚಿತ್ರದಲ್ಲಿ ನಟಿಸಿದ ಸ್ಟಾರ್​ ಕಲಾವಿದರಾದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಜೊತೆ ತಮಗೆ ಇರುವ ಸ್ನೇಹ-ಸಂಬಂಧ ಯಾವ ರೀತಿಯದ್ದು ಎಂಬುದನ್ನು ಕೂಡ ತಿಳಿಸಿದ್ದಾರೆ.

ಜ್ಯೂ. ಎನ್​ಟಿಆರ್​ ಅವರ ಮನೆಗೆ ಯಶ್​ ಒಂದೆರಡು ಬಾರಿ ಭೇಟಿ ನೀಡಿದ್ದಾರೆ. ಜ್ಯೂ. ಎನ್​ಟಿಆರ್ ಅವರು ಊಟಕ್ಕೆ ಆಹ್ವಾನಿಸಿದ್ದರು. ಅವರ ಕುಟುಂಬದವರು ನೀಡಿದ ಆತಿಥ್ಯ ಕಂಡು ಯಶ್​ ಖುಷಿಪಟ್ಟಿದ್ದಾರೆ. ಜ್ಯೂ. ಎನ್​​ಟಿಆರ್​ ಅವರ ತಾಯಿ ಶಾಲಿನಿ ಸ್ವಾಗತಿಸಿ, ಅತಿಥಿ ಸತ್ಕಾರ ಮಾಡಿದ ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎನ್ನುತ್ತಾರೆ ಯಶ್​. ಜ್ಯೂ. ಎನ್​ಟಿಆರ್​ ತಾಯಿ ಕನ್ನಡದವರಾದ ಕಾರಣ ಇಷ್ಟೊಂದು ಬಾಂಧವ್ಯ ಬೆಳೆಯಲು ಸಾಧ್ಯವಾಯ್ತು ಎಂಬುದು ಅವರ ಭಾವನೆ. ‘ಅವರು ಕನ್ನಡದವರಾದ್ದರಿಂದ ಅವರ ಜೊತೆ ನಾವು ಸುಲಭವಾಗಿ ಮಾತನಾಡಬಹುದು’ ಎಂದು ಯಶ್​ ಹೇಳಿದ್ದಾರೆ. ಅದೇ ರೀತಿ ಜ್ಯೂ. ಎನ್​ಟಿಆರ್ ಅವರಿಗೂ ಕನ್ನಡದ ಮೇಲೆ ಅಭಿಮಾನ ಇದೆ. ಅವಕಾಶ ಸಿಕ್ಕಾಗಲೆಲ್ಲ ಅವರು ಕನ್ನಡದಲ್ಲಿ ಮಾತನಾಡುತ್ತಾರೆ.

ಕನ್ನಡದಲ್ಲಿ ಮೂಡಿಬಂದಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಿಗೂ ಡಬ್​ ಆಗಿ ಬಿಡುಗಡೆ ಆಗಿದೆ. ಆಯಾ ಭಾಷೆಯಲ್ಲಿ ಜನರು ಈ ಚಿತ್ರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲೂ ಹಿಂದಿ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಹಿಂದಿ ವರ್ಷನ್​ನಿಂದ ಈ ಸಿನಿಮಾಗೆ ಅತಿ ಹೆಚ್ಚು ಕಲೆಕ್ಷನ್​ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಬಾಲಿವುಡ್​ ಬಾಕ್ಸ್​ ಆಫೀಸ್​ ತಜ್ಞ ತರಣ್​ ಆದರ್ಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಒಂದೇ ಪದದಲ್ಲಿ ಇದನ್ನು ‘ಬ್ಲಾಕ್​ ಬಸ್ಟರ್​’ ಎಂದು ಹೊಗಳಿದ್ದಾರೆ. 5ಕ್ಕೆ 4.5 ರೇಟಿಂಗ್​ ನೀಡಿದ್ದಾರೆ. ಹಾಗಾಗಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಈ ಚಿತ್ರದ ಮೇಲೆ ಇನ್ನಷ್ಟು ಕ್ರೇಜ್​ ಹೆಚ್ಚಾಗಿದೆ.

ಇದನ್ನೂ ಓದಿ:

Yash Boss: ‘ಬಾಸ್’​ ಸ್ಥಾನ ಪಡೆದುಕೊಂಡ ಯಶ್​; ದೇಶಾದ್ಯಂತ ಟ್ರೆಂಡ್​ ಆಗಿದೆ ಈ ಹೆಸರು

‘ಕೆಜಿಎಫ್​ 3ನೇ ಪಾರ್ಟ್​ ಬರಲಿದೆ’: ಭವಿಷ್ಯ ನುಡಿದ ಪ್ರೇಕ್ಷಕರು; ಯಶ್​ ಫ್ಯಾನ್ಸ್​ ಹೀಗೆ ಹೇಳ್ತಿರೋದು ಏಕೆ?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ