AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಮ್​ ಹಕೀಮ್​ ಸಲೂನ್​ನಲ್ಲಿ ಯಶ್​; ಕೆರಳಿದ ಸಿಂಹದಂತಿರುವ ಹೇರ್​ ಸ್ಟೈಲ್​ ವಿಡಿಯೋ ವೈರಲ್​

ಯಶ್​ಗೆ ಕೇಶ ವಿನ್ಯಾಸ ಮಾಡಿರುವ ವಿಡಿಯೋವನ್ನು ಆಲಿಮ್​ ಹಕೀಮ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅದು ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಅಭಿಮಾನಿಗಳು ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಆಲಿಮ್​ ಹಕೀಮ್​ ಸಲೂನ್​ನಲ್ಲಿ ಯಶ್​; ಕೆರಳಿದ ಸಿಂಹದಂತಿರುವ ಹೇರ್​ ಸ್ಟೈಲ್​ ವಿಡಿಯೋ ವೈರಲ್​
ಯಶ್​
TV9 Web
| Edited By: |

Updated on:Oct 11, 2021 | 2:15 PM

Share

‘ಕೆಜಿಎಫ್​’ ಸಿನಿಮಾ ಸೆಟ್ಟೇರಿದ ದಿನದಿಂದಲೇ ನಟ ಯಶ್​ ಹೇರ್​ ಸ್ಟೈಲ್​ ತುಂಬ ಫೇಮಸ್​ ಆಯಿತು. ಉದ್ದದ ಗಡ್ಡ, ಕೂದಲು ಬಿಟ್ಟುಕೊಂಡು ಅವರು ಎಲ್ಲರನ್ನೂ ಮೋಡಿ ಮಾಡಿದರು. ಆ ಗೆಟಪ್​ನಲ್ಲಿ ಅವರನ್ನು ಕಂಡ ಉತ್ತರ ಭಾರತದ ಅಭಿಮಾನಿಗಳು ಕೂಡ ಫಿದಾ ಆದರು. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರಕ್ಕಾಗಿ ಇಂದಿಗೂ ಯಶ್​ ಅದೇ ಹೇರ್​ ಸ್ಟೈಲ್ ನಿಭಾಯಿಸುತ್ತಿದ್ದಾರೆ. ಅದರ ಸಲುವಾಗಿ ಅವರು ಇತ್ತೀಚೆಗೆ ಮುಂಬೈಗೂ ತೆರಳಿದ್ದರು. ಜನಪ್ರಿಯ ಸೆಲೆಬ್ರಿಟಿ ಹೇರ್​ ಸ್ಟೈಲಿಸ್ಟ್​ ಆಲಿಮ್​ ಹಕೀಮ್​ ಸಲೂನ್​ಗೆ ತೆರಳಿ ಕೇಶ ವಿನ್ಯಾಸ ಮಾಡಿಸಿಕೊಂಡಿದ್ದಾರೆ.

ಬಾಲಿವುಡ್​ ವಲಯದಲ್ಲಿ ಆಲಿಮ್​ ಹಕೀಮ್​ ಖ್ಯಾತಿ ದೊಡ್ಡದು. ಘಟಾನುಘಟಿ ಸೆಲೆಬ್ರಿಟಿಗಳಿಗೆಲ್ಲ ಅವರು ಕೇಶ ವಿನ್ಯಾಸ ಮಾಡಿದ್ದಾರೆ. ಅಮಿತಾಭ್​ ಬಚ್ಚನ್, ಸಂಜತ್​ ದತ್​, ಅರ್ಜುನ್​ ರಾಮ್​ಪಾಲ್​, ಹೃತಿಕ್​ ರೋಷನ್​, ಹಾರ್ದಿಕ್​ ಪಾಂಡ್ಯ ಮುಂತಾದ ಸೆಲೆಬ್ರಿಟಿಗಳಿಗೆ​ ಹೇರ್​ ಸ್ಟೈಲ್​ ಮಾಡಿದ ಖ್ಯಾತಿ ಅವರಿಗೆ ಸಲ್ಲುತ್ತಿದೆ. ಈ ಹಿಂದೆ ಕೂಡ ಯಶ್​ ಅವರು ಆಲಿಮ್​ ಹಕೀಮ್​ ಸಲೂನ್​ಗೆ ಭೇಟಿ ನೀಡಿದ್ದರು. ಈ ಬಾರಿ ಅವರಿಗೆ ಕೇಶ ವಿನ್ಯಾಸ ಮಾಡಿರುವ ಒಂದು ವಿಡಿಯೋವನ್ನು ಆಲಿಮ್​ ಹಕೀಮ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದು, ಅದು ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಸಾವಿರಾರು ಅಭಿಮಾನಿಗಳು ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

View this post on Instagram

A post shared by Aalim Hakim (@aalimhakim)

‘ಕೆಜಿಎಫ್​: ಚಾಪ್ಟರ್​ 2’ ಚಿತ್ರಕ್ಕೆ ಇನ್ನೂ ಪ್ಯಾಚ್​ವರ್ಕ್ ಶೂಟಿಂಗ್​​ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಹಾಗಾಗಿ ಅವರು ಹೇರ್​ ಸ್ಟೈಲ್​ಗೆ ಹೆಚ್ಚು ಮಹತ್ವ ನೀಡಿದ್ದಾರೆ. ಮೊದಲಿಗಿಂತಲೂ ಹೆಚ್ಚು ಉದ್ದದ ಕೂದಲಿನೊಂದಿಗೆ ಯಶ್​ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕೆಲಸದ ಸಲುವಾಗಿ ಅವರು ಇತ್ತೀಚೆಗೆ ಮುಂಬೈಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಅಭಿಮಾನಿಗಳು ಮುತ್ತಿಗೆ ಹಾಕಿಕೊಂಡರು. ಚಿಕ್ಕ ಮಕ್ಕಳು, ಯುವಕ-ಯುವತಿಯರೆಲ್ಲ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಆ ವಿಡಿಯೋ ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಎಲ್ಲವೂ ಪ್ಲ್ಯಾನ್​ ಪ್ರಕಾರ ನಡೆದಿದ್ದರೆ ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಇಷ್ಟು ಹೊತ್ತಿಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕೊವಿಡ್​ ಕಾರಣದಿಂದ ಕೆಲಸಗಳು ವಿಳಂಬ ಆಯಿತು. 2022ರ ಏಪ್ರಿಲ್​ 14ರಂದು ಈ ಸಿನಿಮಾ ತೆರೆಕಾಣಲಿದೆ.  ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ಶೂಟಿಂಗ್​ ಸೆಟ್​ ಫೋಟೋಗಳು ವೈರಲ್​ ಆಗಿದ್ದವು.

ಇದನ್ನೂ ಓದಿ:

ಯಶ್​ಗೆ ಭೀಮನ ಪಾತ್ರ, ಪ್ರಶಾಂತ್​ ನೀಲ್​ ನಿರ್ದೇಶನ; ಹೀಗೊಂದು ನಕಲಿ ಸಿನಿಮಾದ ಟ್ರೇಲರ್​ಗೆ ಲಕ್ಷಾಂತರ ವೀವ್ಸ್​

KGF Chapter 2: ‘ಕೆಜಿಎಫ್​​ 2’ ಚಿತ್ರೀಕರಣದ​ ಫೋಟೋ ವೈರಲ್; ಅಪ್​ಡೇಟ್​ಗಾಗಿ ಕಾದು ಕುಳಿತ ಯಶ್​ ಫ್ಯಾನ್ಸ್​

Published On - 2:15 pm, Mon, 11 October 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!