AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ

Sanjay Dutt | Adheera: ಕೆಜಿಎಪ್​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಡಬ್ಬಿಂಗ್​ ಮುಕ್ತಾಯಗೊಂಡಿದೆ ಎಂದು ಹಂಚಿಕೊಂಡಿದ್ದಾರೆ. ಅಧೀರನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿರುವ ಸಂಜಯ್​ದತ್​ ಜತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎನ್ನುವುದನ್ನು ತಿಳಿಸಿದ್ದಾರೆ.

KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ
ಪ್ರಶಾಂತ್​ನೀಲ್​ ಮತ್ತು ಸಂಜಯ್​ದತ್​
TV9 Web
| Edited By: |

Updated on:Dec 07, 2021 | 1:22 PM

Share

ಬೆಂಗಳೂರು : ಚಂದನವನದಲ್ಲಿ ಹೊಸ ಅಲೆ ಎಬ್ಬಿಸಲು ರೆಡಿಯಾಗುತ್ತಿರುವ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಚಿತ್ರದ ಡಬ್ಬಂಗ್ ಮುಕ್ತಾಯವಾಗಿದೆ. ಪ್ರಶಾಂತ್​ ನೀಲ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕೆಜಿಎಫ್​ ಚಾಪ್ಟರ್-2ನಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್​ ನಟ ಸಂಜಯ್​ದತ್​ ಅವರ ಡಬ್ಬಿಂಗ್ ಮುಕ್ತಾಯಗೊಳ್ಳುವ ಮೂಲಕ ಎಲ್ಲಾ ಭಾಷೆಗಳ ಡಬ್ಬಿಂಗ್ ಕೆಲಸ ಮುಕ್ತಾಯಗೊಂಡಿದೆ. ಈ ಕುರಿತು ಕೆಜಿಎಪ್​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಧೀರನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿರುವ ಸಂಜಯ್​ದತ್​ ಜತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎಂದು ನಿರ್ದೇಶಕ ಪ್ರಶಾಂತ್​ ನೀಲ್ ತಿಳಿಸಿದ್ದಾರೆ. ಕನ್ನಡ ಚಿತ್ರರಂಗ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್​ ಚಾಪ್ಟರ್-1 ಹೊಸ ಸಂಚಲನ ಮೂಡಿಸಿತ್ತು. ಇದೀಗ ಕೆಜಿಎಫ್​ ಚಾಪ್ಟರ್ -2 ಎಪ್ರಿಲ್​ 14 ಕ್ಕೆ ಬಿಡುಗಡೆಯಾಗುತ್ತಿದೆ. ಹೀಗಾಗಿ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ.

ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್​ರೊಂದಿಗೆ ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಸಂಜಯದತ್​ ಸೇರಿದಂತೆ ದೊಡ್ಡ ತಾರಾಗಣವೇ ಕಾಣಿಸಿಕೊಳ್ಳುತ್ತಿದೆ. ವಿಜಯ್​ ಕಿರಗಂದೂರು ಅವರ ನಿರ್ಮಾಣದಲ್ಲಿ, ಹೊಂಬಾಳೆ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ 2022ರ ಎಪ್ರಿಲ್ 14ರಂದು ಸಿನಿಮಾ ರಿಲೀಸ್​ ಆಗುತ್ತಿದೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದು, 100ಕೋಟಿ ರೂ. ಬಂಡವಾಳದಲ್ಲಿ ಅದ್ದೂರಿಯಾಗಿ ಸಿನಿಮಾ ನಿರ್ಮಾಣವಾಗಿದೆ.

ಇದನ್ನು ಓದಿ:

ವಿಚ್ಛೇದನದ ಬಳಿಕ ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ: ಮನದ ಮಾತು ಹಂಚಿಕೊಂಡ ನಟಿ ಸಮಂತಾ ರುತ್ ಪ್ರಭು

ಕತ್ರೀನಾ- ವಿಕ್ಕಿ ಕೌಶಲ್​ಗೆ ಒಟಿಟಿಯಿಂದ 100 ಕೋಟಿ ರೂಪಾಯಿಯ ಆಫರ್​; ಏಕೆ ಗೊತ್ತಾ?

Published On - 1:09 pm, Tue, 7 December 21

Follow Us
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ