AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ

Sanjay Dutt | Adheera: ಕೆಜಿಎಪ್​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಡಬ್ಬಿಂಗ್​ ಮುಕ್ತಾಯಗೊಂಡಿದೆ ಎಂದು ಹಂಚಿಕೊಂಡಿದ್ದಾರೆ. ಅಧೀರನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿರುವ ಸಂಜಯ್​ದತ್​ ಜತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎನ್ನುವುದನ್ನು ತಿಳಿಸಿದ್ದಾರೆ.

KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ
ಪ್ರಶಾಂತ್​ನೀಲ್​ ಮತ್ತು ಸಂಜಯ್​ದತ್​
TV9 Web
| Edited By: |

Updated on:Dec 07, 2021 | 1:22 PM

Share

ಬೆಂಗಳೂರು : ಚಂದನವನದಲ್ಲಿ ಹೊಸ ಅಲೆ ಎಬ್ಬಿಸಲು ರೆಡಿಯಾಗುತ್ತಿರುವ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಚಿತ್ರದ ಡಬ್ಬಂಗ್ ಮುಕ್ತಾಯವಾಗಿದೆ. ಪ್ರಶಾಂತ್​ ನೀಲ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕೆಜಿಎಫ್​ ಚಾಪ್ಟರ್-2ನಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್​ ನಟ ಸಂಜಯ್​ದತ್​ ಅವರ ಡಬ್ಬಿಂಗ್ ಮುಕ್ತಾಯಗೊಳ್ಳುವ ಮೂಲಕ ಎಲ್ಲಾ ಭಾಷೆಗಳ ಡಬ್ಬಿಂಗ್ ಕೆಲಸ ಮುಕ್ತಾಯಗೊಂಡಿದೆ. ಈ ಕುರಿತು ಕೆಜಿಎಪ್​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಧೀರನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿರುವ ಸಂಜಯ್​ದತ್​ ಜತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎಂದು ನಿರ್ದೇಶಕ ಪ್ರಶಾಂತ್​ ನೀಲ್ ತಿಳಿಸಿದ್ದಾರೆ. ಕನ್ನಡ ಚಿತ್ರರಂಗ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್​ ಚಾಪ್ಟರ್-1 ಹೊಸ ಸಂಚಲನ ಮೂಡಿಸಿತ್ತು. ಇದೀಗ ಕೆಜಿಎಫ್​ ಚಾಪ್ಟರ್ -2 ಎಪ್ರಿಲ್​ 14 ಕ್ಕೆ ಬಿಡುಗಡೆಯಾಗುತ್ತಿದೆ. ಹೀಗಾಗಿ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ.

ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್​ರೊಂದಿಗೆ ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಸಂಜಯದತ್​ ಸೇರಿದಂತೆ ದೊಡ್ಡ ತಾರಾಗಣವೇ ಕಾಣಿಸಿಕೊಳ್ಳುತ್ತಿದೆ. ವಿಜಯ್​ ಕಿರಗಂದೂರು ಅವರ ನಿರ್ಮಾಣದಲ್ಲಿ, ಹೊಂಬಾಳೆ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ 2022ರ ಎಪ್ರಿಲ್ 14ರಂದು ಸಿನಿಮಾ ರಿಲೀಸ್​ ಆಗುತ್ತಿದೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದು, 100ಕೋಟಿ ರೂ. ಬಂಡವಾಳದಲ್ಲಿ ಅದ್ದೂರಿಯಾಗಿ ಸಿನಿಮಾ ನಿರ್ಮಾಣವಾಗಿದೆ.

ಇದನ್ನು ಓದಿ:

ವಿಚ್ಛೇದನದ ಬಳಿಕ ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ: ಮನದ ಮಾತು ಹಂಚಿಕೊಂಡ ನಟಿ ಸಮಂತಾ ರುತ್ ಪ್ರಭು

ಕತ್ರೀನಾ- ವಿಕ್ಕಿ ಕೌಶಲ್​ಗೆ ಒಟಿಟಿಯಿಂದ 100 ಕೋಟಿ ರೂಪಾಯಿಯ ಆಫರ್​; ಏಕೆ ಗೊತ್ತಾ?

Published On - 1:09 pm, Tue, 7 December 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ