AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ

Sanjay Dutt | Adheera: ಕೆಜಿಎಪ್​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಡಬ್ಬಿಂಗ್​ ಮುಕ್ತಾಯಗೊಂಡಿದೆ ಎಂದು ಹಂಚಿಕೊಂಡಿದ್ದಾರೆ. ಅಧೀರನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿರುವ ಸಂಜಯ್​ದತ್​ ಜತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎನ್ನುವುದನ್ನು ತಿಳಿಸಿದ್ದಾರೆ.

KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ
ಪ್ರಶಾಂತ್​ನೀಲ್​ ಮತ್ತು ಸಂಜಯ್​ದತ್​
TV9 Web
| Updated By: Digi Tech Desk|

Updated on:Dec 07, 2021 | 1:22 PM

Share

ಬೆಂಗಳೂರು : ಚಂದನವನದಲ್ಲಿ ಹೊಸ ಅಲೆ ಎಬ್ಬಿಸಲು ರೆಡಿಯಾಗುತ್ತಿರುವ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಚಿತ್ರದ ಡಬ್ಬಂಗ್ ಮುಕ್ತಾಯವಾಗಿದೆ. ಪ್ರಶಾಂತ್​ ನೀಲ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕೆಜಿಎಫ್​ ಚಾಪ್ಟರ್-2ನಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್​ ನಟ ಸಂಜಯ್​ದತ್​ ಅವರ ಡಬ್ಬಿಂಗ್ ಮುಕ್ತಾಯಗೊಳ್ಳುವ ಮೂಲಕ ಎಲ್ಲಾ ಭಾಷೆಗಳ ಡಬ್ಬಿಂಗ್ ಕೆಲಸ ಮುಕ್ತಾಯಗೊಂಡಿದೆ. ಈ ಕುರಿತು ಕೆಜಿಎಪ್​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಧೀರನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿರುವ ಸಂಜಯ್​ದತ್​ ಜತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎಂದು ನಿರ್ದೇಶಕ ಪ್ರಶಾಂತ್​ ನೀಲ್ ತಿಳಿಸಿದ್ದಾರೆ. ಕನ್ನಡ ಚಿತ್ರರಂಗ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್​ ಚಾಪ್ಟರ್-1 ಹೊಸ ಸಂಚಲನ ಮೂಡಿಸಿತ್ತು. ಇದೀಗ ಕೆಜಿಎಫ್​ ಚಾಪ್ಟರ್ -2 ಎಪ್ರಿಲ್​ 14 ಕ್ಕೆ ಬಿಡುಗಡೆಯಾಗುತ್ತಿದೆ. ಹೀಗಾಗಿ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ.

ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್​ರೊಂದಿಗೆ ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಸಂಜಯದತ್​ ಸೇರಿದಂತೆ ದೊಡ್ಡ ತಾರಾಗಣವೇ ಕಾಣಿಸಿಕೊಳ್ಳುತ್ತಿದೆ. ವಿಜಯ್​ ಕಿರಗಂದೂರು ಅವರ ನಿರ್ಮಾಣದಲ್ಲಿ, ಹೊಂಬಾಳೆ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ 2022ರ ಎಪ್ರಿಲ್ 14ರಂದು ಸಿನಿಮಾ ರಿಲೀಸ್​ ಆಗುತ್ತಿದೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದು, 100ಕೋಟಿ ರೂ. ಬಂಡವಾಳದಲ್ಲಿ ಅದ್ದೂರಿಯಾಗಿ ಸಿನಿಮಾ ನಿರ್ಮಾಣವಾಗಿದೆ.

ಇದನ್ನು ಓದಿ:

ವಿಚ್ಛೇದನದ ಬಳಿಕ ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ: ಮನದ ಮಾತು ಹಂಚಿಕೊಂಡ ನಟಿ ಸಮಂತಾ ರುತ್ ಪ್ರಭು

ಕತ್ರೀನಾ- ವಿಕ್ಕಿ ಕೌಶಲ್​ಗೆ ಒಟಿಟಿಯಿಂದ 100 ಕೋಟಿ ರೂಪಾಯಿಯ ಆಫರ್​; ಏಕೆ ಗೊತ್ತಾ?

Published On - 1:09 pm, Tue, 7 December 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ