KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ

Sanjay Dutt | Adheera: ಕೆಜಿಎಪ್​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಡಬ್ಬಿಂಗ್​ ಮುಕ್ತಾಯಗೊಂಡಿದೆ ಎಂದು ಹಂಚಿಕೊಂಡಿದ್ದಾರೆ. ಅಧೀರನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿರುವ ಸಂಜಯ್​ದತ್​ ಜತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎನ್ನುವುದನ್ನು ತಿಳಿಸಿದ್ದಾರೆ.

KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ
ಪ್ರಶಾಂತ್​ನೀಲ್​ ಮತ್ತು ಸಂಜಯ್​ದತ್​
Follow us
| Updated By: Digi Tech Desk

Updated on:Dec 07, 2021 | 1:22 PM

ಬೆಂಗಳೂರು : ಚಂದನವನದಲ್ಲಿ ಹೊಸ ಅಲೆ ಎಬ್ಬಿಸಲು ರೆಡಿಯಾಗುತ್ತಿರುವ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಚಿತ್ರದ ಡಬ್ಬಂಗ್ ಮುಕ್ತಾಯವಾಗಿದೆ. ಪ್ರಶಾಂತ್​ ನೀಲ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕೆಜಿಎಫ್​ ಚಾಪ್ಟರ್-2ನಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್​ ನಟ ಸಂಜಯ್​ದತ್​ ಅವರ ಡಬ್ಬಿಂಗ್ ಮುಕ್ತಾಯಗೊಳ್ಳುವ ಮೂಲಕ ಎಲ್ಲಾ ಭಾಷೆಗಳ ಡಬ್ಬಿಂಗ್ ಕೆಲಸ ಮುಕ್ತಾಯಗೊಂಡಿದೆ. ಈ ಕುರಿತು ಕೆಜಿಎಪ್​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಧೀರನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿರುವ ಸಂಜಯ್​ದತ್​ ಜತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎಂದು ನಿರ್ದೇಶಕ ಪ್ರಶಾಂತ್​ ನೀಲ್ ತಿಳಿಸಿದ್ದಾರೆ. ಕನ್ನಡ ಚಿತ್ರರಂಗ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್​ ಚಾಪ್ಟರ್-1 ಹೊಸ ಸಂಚಲನ ಮೂಡಿಸಿತ್ತು. ಇದೀಗ ಕೆಜಿಎಫ್​ ಚಾಪ್ಟರ್ -2 ಎಪ್ರಿಲ್​ 14 ಕ್ಕೆ ಬಿಡುಗಡೆಯಾಗುತ್ತಿದೆ. ಹೀಗಾಗಿ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ.

ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್​ರೊಂದಿಗೆ ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಸಂಜಯದತ್​ ಸೇರಿದಂತೆ ದೊಡ್ಡ ತಾರಾಗಣವೇ ಕಾಣಿಸಿಕೊಳ್ಳುತ್ತಿದೆ. ವಿಜಯ್​ ಕಿರಗಂದೂರು ಅವರ ನಿರ್ಮಾಣದಲ್ಲಿ, ಹೊಂಬಾಳೆ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ 2022ರ ಎಪ್ರಿಲ್ 14ರಂದು ಸಿನಿಮಾ ರಿಲೀಸ್​ ಆಗುತ್ತಿದೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದು, 100ಕೋಟಿ ರೂ. ಬಂಡವಾಳದಲ್ಲಿ ಅದ್ದೂರಿಯಾಗಿ ಸಿನಿಮಾ ನಿರ್ಮಾಣವಾಗಿದೆ.

ಇದನ್ನು ಓದಿ:

ವಿಚ್ಛೇದನದ ಬಳಿಕ ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ: ಮನದ ಮಾತು ಹಂಚಿಕೊಂಡ ನಟಿ ಸಮಂತಾ ರುತ್ ಪ್ರಭು

ಕತ್ರೀನಾ- ವಿಕ್ಕಿ ಕೌಶಲ್​ಗೆ ಒಟಿಟಿಯಿಂದ 100 ಕೋಟಿ ರೂಪಾಯಿಯ ಆಫರ್​; ಏಕೆ ಗೊತ್ತಾ?

Published On - 1:09 pm, Tue, 7 December 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ