AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಹಾಲಿವುಡ್​ ಸಿನಿಮಾದಲ್ಲಿ ಕೆಜಿಎಫ್​-2 ಡೈಲಾಗ್? ಏನಿದರ ಹಿಂದಿನ ರಹಸ್ಯ

ಕೆಜಿಎಫ್​-2 ಸಿನಿಮಾದ ಟೀಸರ್​ ಸಾಕಷ್ಟು ದಾಖಲೆಗಳನ್ನು ಮಾಡಿತ್ತು. ಈ ಟೀಸರ್​ ಸೃಷ್ಟಿಸಿದ ಹವಾ ನೋಡಿಯೇ ಸಿನಿಮಾ ಮೇಲೆ ಎಷ್ಟು ನಿರೀಕ್ಷೆ ಇದೆ ಎನ್ನುವ ವಿಚಾರ ಸ್ಪಷ್ಟವಾಗಿತ್ತು.

KGF Chapter 2: ಹಾಲಿವುಡ್​ ಸಿನಿಮಾದಲ್ಲಿ ಕೆಜಿಎಫ್​-2 ಡೈಲಾಗ್? ಏನಿದರ ಹಿಂದಿನ ರಹಸ್ಯ
ಯಶ್
Follow us
ರಾಜೇಶ್ ದುಗ್ಗುಮನೆ
|

Updated on: Mar 15, 2021 | 4:32 PM

ಕೆಜಿಎಫ್​ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಕೆಜಿಎಫ್​-2 ಚಿತ್ರ ಜುಲೈನಲ್ಲಿ ತೆರೆಗೆ ಬರಲಿದ್ದು ಮತ್ತೊಂದು ಹೊಸ ದಾಖಲೆ ಸೃಷ್ಟಿ ಮಾಡುವ ಲಕ್ಷಣ ಎದ್ದು ಕಾಣುತ್ತಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೆ ಬಾಲಿವುಡ್​, ಟಾಲಿವುಡ್​ನಲ್ಲೂ ಕೆಜಿಎಫ್​-2 ಸಿನಿಮಾ ಬಗ್ಗೆ ಚರ್ಚೆ ಆಗುತ್ತಿದೆ. ಈಗ ಹಾಲಿವುಡ್​ ಅಂಗಳದಲ್ಲೂ ಕೆಜಿಎಫ್​-2  ಸದ್ದು ಮಾಡುತ್ತಿದೆ.

ಯಶ್​ ಜನ್ಮದಿನದ ಅಂಗವಾಗಿ ಕೆಜಿಎಫ್​-2 ಸಿನಿಮಾದ ಟೀಸರ್​ ರಿಲೀಸ್​ ಆಗಿತ್ತು. ಈ ಟೀಸರ್​ ಸಾಕಷ್ಟು ದಾಖಲೆಗಳನ್ನು ಕೂಡ ಮಾಡಿತ್ತು. ಈ ಟೀಸರ್​ ಸೃಷ್ಟಿಸಿದ ಹವಾ ನೋಡಿಯೇ ಸಿನಿಮಾ ಮೇಲೆ ಎಷ್ಟು ನಿರೀಕ್ಷೆ ಇದೆ ಎನ್ನುವ ವಿಚಾರ ಸ್ಪಷ್ಟವಾಗಿತ್ತು. ಈ ಟೀಸರ್​ನಲ್ಲಿ A promise was made, and That Promise will be kept.. ಎನ್ನುವ ಡೈಲಾಗ್​ ಬಂದಿತ್ತು. ಈ ಡೈಲಾಗ್​ ಸಾಕಷ್ಟು ವೈರಲ್​ ಆಗಿತ್ತು. ಇದನ್ನು ಹಾಲಿವುಡ್​ ಮಂದಿ ಕೂಡ ಬಳಕೆ ಮಾಡಿಕೊಂಡಂತಿದೆ.

ಗಾಡ್ಜಿಲಾ vs ಕಾಂಗ್​ ಸಿನಿಮಾ ಎಚ್​ಬಿಒ ಮ್ಯಾಕ್ಸ್​ನಲ್ಲಿ ಮಾರ್ಚ್​ 31ರಂದು ರಿಲೀಸ್​ ಆಗುತ್ತಿದೆ. ಈ ಸಿನಿಮಾ ರಿಲೀಸ್​ ಆಗುವುದಕ್ಕೂ ಮುನ್ನ ಚಿತ್ರತಂಡ ಟ್ವೀಟ್​ ಒಂದನ್ನು ಮಾಡಿದೆ. ಅದರಲ್ಲಿ A promise was made, and it will be kept.. ಎಂದು ಹೇಳಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಅಂದಹಾಗೆ, ಇದು ಕೆಜಿಎಫ್​ ಡೈಲಾಗ್​ ಅಲ್ಲ. ಕೆಜಿಎಫ್​ ಸಿನಿಮಾದಲ್ಲೇ ಇದು ಮೊದಲು ಬಳಕೆ ಆಗಿಯೂ ಇಲ್ಲ. ಇಂಗ್ಲಿಷ್​ನಲ್ಲಿ ಇದು ಹೆಚ್ಚು ಬಳಕೆಯಲ್ಲಿರುವ ವಾಕ್ಯ (Saying). ಇದನ್ನು ಕೆಜಿಎಫ್​-2ನಲ್ಲಿ ಬಳಕೆ ಮಾಡಲಾಗಿತ್ತು. ಅದನ್ನೇ, ಗಾಡ್ಜಿಲಾ vs ಕಾಂಗ್​ ಸಿನಿಮಾ ತಂಡ ಕೂಡ ಬಳಕೆ ಮಾಡಿಕೊಂಡಿದೆ ಅಷ್ಟೇ.

ಇದನ್ನೂ ಓದಿ: Yash: ಸ್ಯಾಂಡಲ್‌ವುಡ್ ಸ್ಟಾರ್ ಆಗಿದ್ದ ರಾಕಿ ಭಾಯ್ ಇದೀಗ ಯೂನಿವರ್ಸಲ್ ಸ್ಟಾರ್! ರೋಬೋ 2.O ಮೀರಿಸಿದ ‘ಕೆಜಿಎಫ್​ ಚಾಪ್ಟರ್​ 2’

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ