AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.21ಕ್ಕೆ ಬರಲಿದೆ ದೊಡ್ಡ ‘ತೂಫಾನ್​..’; ಮೊದಲೇ ಸೂಚನೆ ನೀಡಿದ ‘ಕೆಜಿಎಫ್​: ಚಾಪ್ಟರ್​ 2’ ಟೀಮ್​

KGF Chapter 2: ‘ತೂಫಾನ್​..’ ಲಿರಿಕಲ್​ ಸಾಂಗ್​ ಬಿಡುಗಡೆ ಮಾಡಲು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ಅದಕ್ಕಾಗಿ ಯಶ್​ ಅಭಿಮಾನಿಗಳು ಕಾದು ಕೂತಿದ್ದಾರೆ.

ಮಾ.21ಕ್ಕೆ ಬರಲಿದೆ ದೊಡ್ಡ ‘ತೂಫಾನ್​..’; ಮೊದಲೇ ಸೂಚನೆ ನೀಡಿದ ‘ಕೆಜಿಎಫ್​: ಚಾಪ್ಟರ್​ 2’ ಟೀಮ್​
ಕೆಜಿಎಫ್​: ಚಾಪ್ಟರ್​ 2
TV9 Web
| Edited By: |

Updated on:Mar 18, 2022 | 1:42 PM

Share

‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸುವ ಕೆಲಸ ಆಗುತ್ತಿದೆ. ಮಾ.27ರಂದು ಟ್ರೇಲರ್​ ಬರಲಿದೆ. ಅದಕ್ಕಾಗಿ ‘ರಾಕಿಂಗ್​ ಸ್ಟಾರ್​’ ಯಶ್​ (Yash) ಅಭಿಮಾನಿಗಳು ಕಾದು ಕೂತಿದ್ದಾರೆ. ವಿಶೇಷ ಏನೆಂದರೆ ಸಡನ್​ ಆಗಿ ‘ಕೆಜಿಎಫ್​ 2’ ತಂಡ ಒಂದು ಬ್ರೇಕಿಂಗ್​​ ನ್ಯೂಸ್​ ನೀಡಿದೆ. ಮಾ.21ರಂದು ಈ ಸಿನಿಮಾದ ಮೊದಲ ಲಿರಿಕಲ್​ ವಿಡಿಯೋ ರಿಲೀಸ್​ ಆಗಲಿದೆ. ‘ತೂಫಾನ್​..’ ಎಂಬ ಲಿರಿಕಲ್​ ಸಾಂಗ್​ (Toofan Lyrical Video) ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಈ ಮಾಹಿತಿಯನ್ನು ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಸ್ಮ್​ ಅಧಿಕೃತವಾಗಿ ಸೋಶಿಯಲ್​ ಮೀಡಿಯಾ ಮೂಲಕ ಪ್ರಕಟಿಸಿದೆ. ಪ್ರಶಾಂತ್​ ನೀಲ್​ ನಿರ್ದೇಶನದ ಈ ಚಿತ್ರದ ಬಗ್ಗೆ ದೇಶಾದ್ಯಂತ ನಿರೀಕ್ಷೆ ಸೃಷ್ಟಿ ಆಗಿದೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸಂಗೀತದಿಂದಾಗಿ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾಗೆ ಹೊಸ ಮೆರುಗು ಬಂದಿತ್ತು. ಈಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹಾಡುಗಳ ಮೂಲಕ ಅವರು ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಸೋಮವಾರ (ಮಾ.21) ಬೆಳಗ್ಗೆ 11.07ಕ್ಕೆ ಈ ಸಾಂಗ್​ ರಿಲೀಸ್​ ಆಗಲಿದೆ.

ಪ್ರಶಾಂತ್​ ನೀಲ್​ ಆ್ಯಕ್ಷನ್​-ಕಟ್​ ಹೇಳಿರುವ ಈ ಚಿತ್ರ ಬಗ್ಗೆ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಟ್ರೇಲರ್​ ಬಿಡುಗಡೆ ಆದ ಬಳಿಕ ನಿರೀಕ್ಷೆ ಡಬಲ್​ ಆಗಲಿದೆ. ‘ಕೆಜಿಎಫ್​ 2’ ಸಿನಿಮಾದಿಂದ ಈವರೆಗೆ ಬಿಡುಗಡೆ ಆಗಿರುವುದು ಕೆಲವು ಪೋಸ್ಟರ್​ ಮತ್ತು ಒಂದೇ ಒಂದು ಟೀಸರ್​ ಮಾತ್ರ. ಈಗ ‘ತೂಫಾನ್​..’ ಲಿರಿಕಲ್​ ಸಾಂಗ್​ ಬಿಡುಗಡೆಯಾದರೆ ಸಿನಿಮಾ ಮೇಲಿನ ಕ್ರೇಜ್​ ಹೆಚ್ಚಲಿದೆ.

ಏಪ್ರಿಲ್​ 14ರಂದು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆಯೇ ಪ್ರಚಾರ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಅದಕ್ಕಾಗಿ ಈಗಾಗಲೇ ಭರದ ಸಿದ್ಧತೆ ನಡೆದಿದೆ. ಭಾರತ ಮಾತ್ರವಲ್ಲದೇ ವಿದೇಶದ ಚಿತ್ರಮಂದಿರಗಳಲ್ಲಿ ಸ್ಟ್ಯಾಂಡಿ ಮತ್ತು ಪೋಸ್ಟರ್​ಗಳನ್ನು ಪ್ರದರ್ಶಿಸಲು ತಯಾರಿ ನಡೆದಿದೆ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಸ್ಟ್ಯಾಂಡಿಗಳು ವಿಶೇಷವಾಗಿ ವಿನ್ಯಾಸಗೊಂಡಿವೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಲಿರುವುದರಿಂದ ಅದೇ ರೀತಿಯಲ್ಲಿ ಭರ್ಜರಿ ಪ್ರಚಾರಕಾರ್ಯಕ್ಕೆ ಚಿತ್ರತಂಡ ಪ್ಲ್ಯಾನ್​ ಮಾಡಿಕೊಳ್ಳುತ್ತಿದೆ. ಬಾಲಿವುಡ್​ ಸ್ಟಾರ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ಕೂಡ ನಟಿಸಿರುವುದರಿಂದ ಸಹಜವಾಗಿಯೇ ಹಿಂದಿ ಭಾಷಿಕ ರಾಜ್ಯಗಳಲ್ಲಿ ಹೈಪ್​ ಹೆಚ್ಚಿದೆ. ಅಧೀರ ಎಂಬ ಡಿಫರೆಂಟ್​ ಪಾತ್ರಕ್ಕೆ ಸಂಜಯ್​ ದತ್​ ಬಣ್ಣ ಹಚ್ಚಿದ್ದಾರೆ. ರಮಿಕಾ ಸೇನ್​ ಎಂಬ ಪವರ್​ಫುಲ್​ ಮಹಿಳೆಯಾಗಿ ರವೀನಾ ಟಂಡನ್​ ಕಾಣಿಸಿಕೊಳ್ಳಲಿದ್ದಾರೆ. ಆ ಪಾತ್ರದ ಝಲಕ್​ ಹೇಗಿರಲಿದೆ ಎಂಬುದನ್ನು ಈಗಾಗಲೇ ತೋರಿಸಲಾಗಿದೆ.

‘ಕೆಜಿಎಫ್​ನ ಮೊದಲ ಭಾಗ ಶೂಟ್​ ಮಾಡುವಾಗ ‘ಕೆಜಿಎಫ್​ 2’ನ ಕೆಲ ಪಾರ್ಟ್​ಗಳನ್ನು ಶೂಟ್​ ಮಾಡಲಾಗಿತ್ತು. ಇದು ಯಾವ ಭಾಷೆ ಅಥವಾ ಯಾವ ಮಾರುಕಟ್ಟೆ ಎನ್ನುವುದಲ್ಲ. ನಾವು ಎಷ್ಟು ಜನರಿಗೆ ರೀಚ್​ ಆಗುತ್ತೇವೆ ಎನ್ನುವುದು ಪ್ರಮುಖವಾಗುತ್ತದೆ. ಎಲ್ಲಾ ವಯಸ್ಸಿನವರು ಆನಂದಿಸಬಹುದಾದ ಕಥೆಯನ್ನು ಹೇಳುವ ಗುರಿಯನ್ನು ನಾನು ಹೊಂದಿದ್ದೇನೆ’ ಎಂದು ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯಶ್​ ಹೇಳಿದ್ದಾರೆ​.

ಇದನ್ನೂ ಓದಿ:

‘ಕೆಜಿಎಫ್​ 2’ ನಟಿ ರವೀನಾ ಟಂಡನ್​ಗೆ ಮೋದಿ ಪತ್ರ; ಎಮೋಷನಲ್​ ಲೆಟರ್​ ಹಂಚಿಕೊಂಡ ರಮಿಕಾ ಸೇನ್​

‘ಕೆಜಿಎಫ್​ 2’ ಜತೆಗಿನ ರೇಸ್​​ನಿಂದ ಹಿಂದೆ ಸರಿದ ‘ಲಾಲ್​ ಸಿಂಗ್​ ಛಡ್ಡಾ’​; ಆಮಿರ್​ ಖಾನ್ ನೀಡಿದ ಕಾರಣ ಏನು?

Published On - 1:16 pm, Fri, 18 March 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ