AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF 2 Trailer: ‘ಕೆಜಿಎಫ್​: ಚಾಪ್ಟರ್​ 2’ ಟ್ರೇಲರ್​ ಬಗ್ಗೆ ಮತ್ತೊಂದು ಬಿಗ್​ ನ್ಯೂಸ್​; ಈ ಬಾರಿ ಎಂಟ್ರಿ ಕೊಡ್ತಿರೋದು ಶಿವಣ್ಣ

KGF Chapter 2 Trailer | Shivarajkumar: ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲೇ ಹಮ್ಮಿಕೊಳ್ಳಲಾಗುತ್ತಿದೆ. ಅದಕ್ಕಾಗಿ ಸಕಲ ತಯಾರಿ ನಡೆದಿದೆ.

KGF 2 Trailer: ‘ಕೆಜಿಎಫ್​: ಚಾಪ್ಟರ್​ 2’ ಟ್ರೇಲರ್​ ಬಗ್ಗೆ ಮತ್ತೊಂದು ಬಿಗ್​ ನ್ಯೂಸ್​; ಈ ಬಾರಿ ಎಂಟ್ರಿ ಕೊಡ್ತಿರೋದು ಶಿವಣ್ಣ
ಶಿವರಾಜ್​ಕುಮಾರ್​, ಯಶ್
TV9 Web
| Edited By: |

Updated on:Mar 25, 2022 | 11:44 AM

Share

ಇಡೀ ಭಾರತೀಯ ಚಿತ್ರರಂಗದಲ್ಲಿ ಮತ್ತೆ ಹಳೇ ಚಾರ್ಮ್​ ಮರುಕಳಿಸಿದೆ. ಕೊರೊನಾ ಹಾವಳಿ ಕಡಿಮೆ ಆಗಿರುವುದರಿಂದ ಜನರು ಚಿತ್ರಮಂದಿರಕ್ಕೆ ಬಂದು ಎಂದಿನಂತೆ ಎಂಜಾಯ್​ ಮಾಡುತ್ತಿದ್ದಾರೆ. ಕೊವಿಡ್​ ಕಾರಣದಿಂದ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದ್ದ ಅನೇಕ ಬಿಗ್​ ಬಜೆಟ್​ ಸಿನಿಮಾಗಳು ಒಂದೊಂದಾಗಿಯೇ ರಿಲೀಸ್​ ಆಗುತ್ತಿವೆ. ಇತ್ತೀಚೆಗೆ ‘ಜೇಮ್ಸ್​’ ಸಿನಿಮಾ ಬಂದು ಧೂಳೆಬ್ಬಿಸಿತು. ಈಗ ‘ಆರ್​ಆರ್​ಆರ್​’ ಚಿತ್ರ ಕೂಡ ಸಖತ್​ ಸೌಂಡು ಮಾಡಿದೆ. ಇನ್ನೇನಿದ್ದರೂ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಅಬ್ಬರಿಸುವುದು ಮಾತ್ರ ಬಾಕಿ. ಈ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ. ಏ.14ರಂದು ವಿಶ್ವಾದ್ಯಂತ ‘ಕೆಜಿಎಫ್​ 2’ ಬಿಡುಗಡೆ ಆಗಲಿದ್ದು, ಅದಕ್ಕಾಗಿ ಯಶ್​ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಈಗ ಟ್ರೇಲರ್​ ಬಗ್ಗೆ ಕಾತರ ಹೆಚ್ಚಿದೆ. ಹೌದು, ‘ಕೆಜಿಎಫ್​: ಚಾಪ್ಟರ್​ 2’ ಟ್ರೇಲರ್​ (KGF Chapter 2 Trailer) ಮಾ.27ರಂದು ಬಿಡುಗಡೆ ಆಗಲಿದೆ. ಅದನ್ನು ರಿಲೀಸ್​ ಮಾಡುವುದು ಯಾರು ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ (Shivarajkumar) ಅವರು ‘ಕೆಜಿಎಫ್​ 2’ ಟ್ರೇಲರ್​ ಬಿಡುಗಡೆ ಮಾಡಲಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತವಾಗಿ ಮಾಹಿತಿ ಹೊರಬಿದ್ದಿದೆ.

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆಗೆ ಇನ್ನು ಕೆಲವೇ ದಿನಗಳ ಬಾಕಿ ಉಳಿದುಕೊಂಡಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಚಾಲನೆ ನೀಡಿದೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದಿಂದ ‘ತೂಫಾನ್​..’ ಲಿರಿಕಲ್​ ವಿಡಿಯೋ ಬಿಡುಗಡೆ ಮಾಡಲಾಗಿತ್ತು. ಅದಕ್ಕೆ ಜನರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಅದರ ಬೆನ್ನಲ್ಲೇ ಅದ್ದೂರಿಯಾಗಿ ಟ್ರೇಲರ್​ ರಿಲೀಸ್​ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ‘ಕೆಜಿಎಫ್​: ಚಾಪ್ಟರ್​ 2’ ಒಂದು ಪ್ಯಾನ್​ ಇಂಡಿಯಾ ಸಿನಿಮಾ. ಕನ್ನಡದಲ್ಲಿ ನಿರ್ಮಾಣವಾದ ಈ ಚಿತ್ರ ತೆಲುಗು, ಹಿಂದಿ, ಮಲಯಾಳಂ ಮತ್ತು ತಮಿಳು ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲೇ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ ರಾಜ್ಯಗಳಿಂದ ಮಾಧ್ಯಮದವರನ್ನು ಆಹ್ವಾನಿಸಲಾಗಿದೆ. ಎಲ್ಲರ ಸಮ್ಮುಖದಲ್ಲಿ ಶಿವರಾಜ್​ಕುಮಾರ್​ ಅವರು ಈ ಸಿನಿಮಾದ ಟ್ರೇಲರ್​ ಅನಾವರಣ ಮಾಡಲಿದ್ದಾರೆ. ಈ ವಿಚಾರವನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ತಿಳಿಸಿದೆ. ಈ ಸುದ್ದಿ ಕೇಳಿ ಶಿವಣ್ಣನ ಫ್ಯಾನ್ಸ್​ ಖುಷಿ ಆಗಿದ್ದಾರೆ.

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ನಟಿಸಿರುವುದರಿಂದ ಹಿಂದಿ ಪ್ರೇಕ್ಷಕರ ವಲಯದಲ್ಲೂ ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಹೈಪ್​ ಸೃಷ್ಟಿ ಆಗಿದೆ. ಅಧೀರ ಎಂಬ ಪಾತ್ರಕ್ಕೆ ಸಂಜಯ್​ ದತ್​ ಬಣ್ಣ ಹಚ್ಚಿದ್ದರೆ, ರಮಿಕಾ ಸೇನ್​ ಎಂಬ ಪವರ್​ಫುಲ್​ ಮಹಿಳೆಯ ಪಾತ್ರದಲ್ಲಿ ರವೀನಾ ಟಂಡನ್​ ಅಭಿನಯಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ಭಾರಿ ಯಶಸ್ಸು ಕಂಡಿದ್ದರಿಂದ ಸಹಜವಾಗಿಯೇ ಈಗ ಅದರ ಸೀಕ್ವೆಲ್​ ಮೇಲೆ ನಿರೀಕ್ಷೆ ಮೂಡಿದೆ.

‘ತೂಫಾನ್​..’ ಲಿರಿಕಲ್ ಹಾಡು ಸೂಪರ್​ ಹಿಟ್​:

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಅವರ ಬತ್ತಳಿಕೆಯಿಂದ ಬಂದ ‘ತೂಫಾನ್​..’ ಹಾಡು ಸೂಪರ್​ ಹಿಟ್​ ಆಗಿದೆ. ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಗೀತೆಯನ್ನು ಬಿಡುಗಡೆ ಮಾಡಲಾಗಿದೆ. ಮಾ.21ರಂದು ರಿಲೀಸ್​ ಆದ ಈ ಸಾಂಗ್​ 4 ದಿನ ಕಳೆಯುವುದರೊಳಗೆ ಕನ್ನಡದಲ್ಲಿ 6.8 ಮಿಲಿಯನ್​, ತಮಿಳಿನಲ್ಲಿ 2.4 ಮಿಲಿಯನ್​, ಹಿಂದಿಯಲ್ಲಿ 12 ಮಿಲಿಯನ್​ ವೀಕ್ಷಣೆ ಕಾಣುವ ಮೂಲಕ ಧೂಳೆಬ್ಬಿಸಿದೆ.

ಇದನ್ನೂ ಓದಿ:

10 ಗಂಟೆಗಳಲ್ಲಿ 93 ಲಕ್ಷ ವೀಕ್ಷಣೆ ಕಂಡ ‘ತೂಫಾನ್​’ ಸಾಂಗ್​; ಟ್ರೆಂಡಿಂಗ್​ನಲ್ಲಿ 1ನೇ ಸ್ಥಾನ

ಮುಂಬೈನ ಆರಂತಸ್ತಿನ ಮಾಲ್​ ಮೇಲೆ ರಾರಾಜಿಸಿದ ಯಶ್​ ಪೋಸ್ಟರ್​​; ಇದು ‘ಕೆಜಿಎಫ್​ 2’ ಕ್ರೇಜ್​

Published On - 11:37 am, Fri, 25 March 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು