AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಕ್ತದಿಂದ ಬರೆದ ಕಥೆ ಇದು’; ‘ಕೆಜಿಎಫ್​ ಚಾಪ್ಟರ್​ 2’ ಟ್ರೇಲರ್​ನಲ್ಲಿ ಅಬ್ಬರಿಸಿ, ಬೊಬ್ಬಿರಿದ ಯಶ್​

KGF Chapter 2 Trailer: : ಈ ಮೊದಲು ರಿಲೀಸ್ ಆಗಿದ್ದ ‘ತೂಫಾನ್​..’ ಹಾಡು ಅಬ್ಬರಿಸಿದೆ. ಕನ್ನಡ ವರ್ಷನ್​ಗಿಂತ ಹಿಂದಿ ವರ್ಷನ್​ನ ಹಾಡು ಹೆಚ್ಚು ವೀಕ್ಷಣೆ ಕಂಡಿದೆ. ಈಗ ಟ್ರೇಲರ್ ಅಬ್ಬರಿಸುತ್ತಿದೆ.

‘ರಕ್ತದಿಂದ ಬರೆದ ಕಥೆ ಇದು’; ‘ಕೆಜಿಎಫ್​ ಚಾಪ್ಟರ್​ 2’ ಟ್ರೇಲರ್​ನಲ್ಲಿ ಅಬ್ಬರಿಸಿ, ಬೊಬ್ಬಿರಿದ ಯಶ್​
ಯಶ್
TV9 Web
| Edited By: |

Updated on:Mar 27, 2022 | 7:04 PM

Share

ಹಲವು ಸಮಯದಿಂದ ಕಾಯುತ್ತಿದ್ದ ದಿನ ಬಂದೇಬಿಟ್ಟಿದೆ. ‘ಕೆಜಿಎಫ್​ 2’ ಚಿತ್ರದ ಟ್ರೇಲರ್ (KGF Chapter 2 Trailer)​ ಇಂದು (ಮಾರ್ಚ್​ 27) ರಿಲೀಸ್ ಆಗಿದೆ. ‘ಕೆಜಿಎಫ್​’ ಸಿನಿಮಾ ತೆರೆಕಂಡು ಮೂರು ವರ್ಷಗಳ ಬಳಿಕ ‘ಕೆಜಿಎಫ್​ 2’ ತೆರೆಗೆ ಬರುತ್ತಿದೆ. ಈ ಸಿನಿಮಾ ಹೇಗಿದೆ ಎನ್ನುವ ಝಲಕ್ ಇಂದು ರಿಲೀಸ್ ಆದ ಟ್ರೇಲರ್​ನಲ್ಲಿ ಸಿಕ್ಕಿದೆ. ಶಿವರಾಜ್​ಕುಮಾರ್ (Shivaraj Kumar) ಅವರು ಟ್ರೇಲರ್ ರಿಲೀಸ್ ಮಾಡಿ ಚಿತ್ರಕ್ಕೆ ಆಲ್​ ದಿ ಬೆಸ್ಟ್​ ಹೇಳಿದರು. ಖ್ಯಾತ ನಿರೂಪಕ ಕರಣ್​ ಜೋಹರ್ (Karan Johar)​ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು.

ಕೆಜಿಎಫ್​ನ ಅಧಿಪತಿ ಆಗಿದ್ದ ಗರುಡನನ್ನು ಹತ್ಯೆ ಮಾಡಿದ ನಂತರದಲ್ಲಿ ಆ ಸಾಮ್ರಾಜ್ಯ ರಾಕಿಯ ಕೈ ಸೇರಿದೆ. ರಾಕಿ ನಟೋರಿಯಸ್​ ಗ್ಯಾಂಗ್​ಸ್ಟರ್​ ಹಾಗೂ ಉದ್ಯಮಿ ಎರಡೂ ಹೌದು. ‘ಕೆಜಿಎಫ್​ ಚಾಪ್ಟರ್​ 2 ’ ಟ್ರೇಲರ್ ತುಂಬಾನೇ ಅದ್ಭುತವಾಗಿ ಮೂಡಿ ಬಂದಿದೆ. ಯಶ್ ಪಾತ್ರ ಸಖತ್ ಹೈಲೈಟ್​ ಆಗಿದೆ. ಅಧೀರನಾಗಿ ಸಂಜಯ್​ ದತ್​ ಮಿಂಚಿದ್ದಾರೆ. ರಾಕಿ ಹಾಗೂ ಅಧೀರನ ನಡುವೆ ದೊಡ್ಡ ಫೈಟ್​ ಇದೆ ಎನ್ನುವ ಸೂಚನೆ ಟ್ರೇಲರ್​ನಲ್ಲಿ ಸಿಕ್ಕಿದೆ.

‘ರಕ್ತದಿಂದ ಬರೆದ ಕಥೆ ಇದು, ಶಾಹಿಯಿಂದ ಮುಂದುವರಿಸೋಕೆ ಆಗಲ್ಲ. ಮುಂದುವರಿಸಬೇಕು ಎಂದರೆ ಮತ್ತೆ ರಕ್ತವನ್ನೇ ಕೇಳತ್ತೆ’, ‘ಅಲ್ಲಿ ಬೀಳುವ ಹೆಣಗಳೂ ಉಪಯೋಗಕ್ಕೆ ಬರುತ್ತದೆ, ಬೇಕಿದ್ದರೆ ರಣಹದ್ದುಗಳನ್ನು ಕೇಳು’ ಎಂಬಿತ್ಯಾದಿ ಡೈಲಾಗ್​ಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಸಿನಿಮಾದ ಹಿನ್ನೆಲೆ ಸಂಗೀತ ಟ್ರೇಲರ್​ನ ತೂಕವನ್ನು ಹೆಚ್ಚಿಸಿದೆ.

ಸಿನಿಮಾ ವಿಳಂಬ ಏಕೆ?

‘ಕೆಜಿಎಫ್​’ ಸಿನಿಮಾ ಸೃಷ್ಟಿಸಿದ ಹೈಪ್​ ತುಂಬಾನೇ ದೊಡ್ಡಮಟ್ಟದ್ದು. ಈ ಕಾರಣಕ್ಕೆ ‘ಕೆಜಿಎಫ್​ 2’ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ಸಿನಿಮಾ ತೆರೆಗೆ ಬಂದು ಅಬ್ಬರಿಸಬೇಕಿತ್ತು. ಮೊದಲ ಚಾಪ್ಟರ್​ ಪೂರ್ಣಗೊಳ್ಳುತ್ತಿದ್ದಂತೆ ಎರಡನೇ ಚಾಪ್ಟರ್​ ಕೆಲಸಗಳು ಆರಂಭಗೊಂಡಿದ್ದವು. ಆದರೆ, ಕೊವಿಡ್​ ಮೂರು ಅಲೆಗಳಿಂದ ಸಿನಿಮಾ ಕೆಲಸಗಳು ವಿಳಂಬ ಆದವು. ಈಗ ಮೂರನೇ ಅಲೆ ತಣ್ಣಗಾಗಿದೆ. ಹೀಗಾಗಿ, ಸಿನಿಮಾ ಏಪ್ರಿಲ್​ 14ರಂದು ರಿಲೀಸ್ ಆಗುತ್ತಿದೆ.

ಅಬ್ಬರಿಸಿದ್ದ ‘ತೂಫಾನ್​..’ ಸಾಂಗ್​

ಈ ಮೊದಲು ರಿಲೀಸ್ ಆಗಿದ್ದ ‘ತೂಫಾನ್​..’ ಹಾಡು ಅಬ್ಬರಿಸಿದೆ. ಕನ್ನಡ ವರ್ಷನ್​ಗಿಂತ ಹಿಂದಿ ವರ್ಷನ್​ನ ಹಾಡು ಹೆಚ್ಚು ವೀಕ್ಷಣೆ ಕಂಡಿದೆ. ಇದರಿಂದ ಸಿನಿಮಾ ಮೇಲೆ ಬಾಲಿವುಡ್​ ಮಂದಿ ಎಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬುದು ಸಾಬೀತಾಗಿದೆ.

ಸಿನಿಮಾದಲ್ಲಿದೆ ದೊಡ್ಡ ತಾರಾಗಣ..

‘ಕೆಜಿಎಫ್​ 2’ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಬಾಲಿವುಡ್​ನ ಖ್ಯಾತ ನಟ ಸಂಜಯ್ ದತ್​ ಅಧೀರನಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ರವೀನಾ ಟಂಡನ್​ ಹಲವು ವರ್ಷಗಳ ಬಳಿಕ ಸ್ಯಾಂಡಲ್​ವುಡ್​ಗೆ ಮರಳುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್​ ಚಿತ್ರದಲ್ಲಿ ನಟಿಸಿದ್ದಾರೆ. ಯಶ್​ಗೆ ಜತೆಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಕೆಜಿಎಫ್​ 2’ ಟ್ರೇಲರ್ ಲಾಂಚ್​ಗೂ ಮುನ್ನ ಕ್ಯಾಮೆರಾಗೆ ಪೋಸ್​ ನೀಡಿದ ಸಂಜಯ್​ ದತ್​, ಪೃಥ್ವಿರಾಜ್​

‘ಕೆಜಿಎಫ್​ 2’ ಟ್ರೇಲರ್​ ಲಾಂಚ್ ಇವೆಂಟ್​​ನಲ್ಲಿ ಹಲವು ದಿಗ್ಗಜರು; ಇಲ್ಲಿದೆ ಲೈವ್ ವಿಡಿಯೋ

Published On - 6:49 pm, Sun, 27 March 22

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ