ಮದುವೆ ಆಹ್ವಾನ ಪತ್ರಿಕೆಯಲ್ಲೂ ‘ಕೆಜಿಎಫ್​: ಚಾಪ್ಟರ್​ 2’ ಡೈಲಾಗ್​; ಆದ್ರೆ ಇಲ್ಲಿದೆ ಒಂದು ಟ್ವಿಸ್ಟ್

KGF Chapter 2: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಡೈಲಾಗ್​ಗಳು ತುಂಬ ಫೇಮಸ್​ ಆಗಿವೆ. ಮದುವೆ ಆಮಂತ್ರಣ ಪತ್ರಿಕೆಯಲ್ಲಿ ‘ವಾಯ್ಲೆನ್ಸ್​.. ವಾಯ್ಲೆನ್ಸ್​..’ ಡೈಲಾಗ್​ಗಳು ಬೇರೆ ರೂಪ ಪಡೆದುಕೊಂಡಿದೆ.

ಮದುವೆ ಆಹ್ವಾನ ಪತ್ರಿಕೆಯಲ್ಲೂ ‘ಕೆಜಿಎಫ್​: ಚಾಪ್ಟರ್​ 2’ ಡೈಲಾಗ್​; ಆದ್ರೆ ಇಲ್ಲಿದೆ ಒಂದು ಟ್ವಿಸ್ಟ್
ಯಶ್​, ವೈರಲ್​ ಆಗಿರುವ ಆಮಂತ್ರಣ ಪತ್ರಿಕೆ
Follow us
| Updated By: ಮದನ್​ ಕುಮಾರ್​

Updated on: Apr 20, 2022 | 1:46 PM

ಕನ್ನಡದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಎಷ್ಟು ಮೋಡಿ ಮಾಡಿದೆ ಎಂಬುದನ್ನು ವಿವರಿಸುವುದು ಕಷ್ಟ. ಪ್ರೇಕ್ಷಕರ ವಲಯದಲ್ಲಿ ಈ ಚಿತ್ರ ಒಂದು ಬಗೆಯ ಗಂಗು ಹಿಡಿಸಿದೆ. ಚಿಕ್ಕ ಟೀಸರ್​ ರಿಲೀಸ್​ ಆದ ದಿನದಿಂದಲೂ ಯಶ್​ ( Yash) ಅಭಿಮಾನಿಗಳು ಈ ಸಿನಿಮಾ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಟ್ರೇಲರ್​ ಬಿಡುಗಡೆ ಆದಾಗ ಆ ನಿರೀಕ್ಷೆ ದುಪ್ಪಟ್ಟಾಯಿತು. ಈಗ ಸಿನಿಮಾ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಪ್ರತಿ ಡೈಲಾಗ್​ ಕೂಡ ವೈರಲ್​ ಆಗಿದೆ. ಅದರಲ್ಲೂ ಯಶ್​ ಹೇಳಿದ ‘ವಾಯ್ಲೆನ್ಸ್​ ವಾಯ್ಲೆನ್ಸ್​ ವಾಯ್ಲೆನ್ಸ್​..’ ಡೈಲಾಗ್​ ದೇಶಾದ್ಯಂತ ಫೇಮಸ್​ ಆಗಿದೆ. ರೀಲ್ಸ್​ ತುಂಬೆಲ್ಲ ಈ ಡೈಲಾಗ್​ ಕೇಳಿಸುತ್ತಿದೆ. ಇದೇ ಡೈಲಾಗ್​ ಇಟ್ಟುಕೊಂಡು ಕೆಲವರು ಹೊಸ ಹೊಸ ವರ್ಷನ್​ ಮಾಡುತ್ತಿದ್ದಾರೆ. ಈಗ ಮದುವೆ ಆಹ್ವಾನ ಪತ್ರಿಕೆಯ ಮೇಲೂ ‘ವಾಯ್ಲೆನ್ಸ್​ ವಾಯ್ಲೆನ್ಸ್​ ವಾಯ್ಲೆನ್ಸ್​..’ ಡೈಲಾಗ್​ನ ಶೈಲಿಯಲ್ಲಿ ಒಂದು ಸಾಲು ಬರೆಯಲಾಗಿದೆ. ಆ ಮದುವೆ ಕಾರ್ಡ್ (Wedding Card)​ ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅಷ್ಟಕ್ಕೂ ಅದರಲ್ಲಿ ಬರೆದಿರುವುದು ಏನು? ಈ ಮದುವೆ ಎಲ್ಲಿ ನಡೆಯುತ್ತಿದೆ? ಇಲ್ಲಿದೆ ಪೂರ್ತಿ ಮಾಹಿತಿ.

ಚಂದ್ರಶೇಖರ್​ ಮತ್ತು ಶ್ವೇತಾ ಎಂಬುವವರು ಮೇ 13ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬೆಳಗಾವಿಯಲ್ಲಿ ಇವರ ಮದುವೆ ನಡೆಯಲಿದೆ. ವಿವಾಹದ ಆಮಂತ್ರಣ ಪತ್ರಿಕೆಯನ್ನು ಇಂಗ್ಲಿಷ್​ನಲ್ಲಿ ಮುದ್ರಿಸಲಾಗಿದೆ. ಇದರಲ್ಲಿ ಈ ರೀತಿ ಒಂದು ಸಾಲು ಬರೆಯಲಾಗಿದೆ. ‘ಮ್ಯಾರೇಜ್​ ಮ್ಯಾರೇಜ್​ ಮ್ಯಾರೇಜ್​.. ಐ ಡೋಂಟ್​ ಲೈಕ್​ ಇಟ್​. ಐ ಅವಾಯ್ಡ್​.. ಬಟ್​ ಮೈ ರಿಲೇಟಿವ್ಸ್​ ಲೈಕ್​ ಮ್ಯಾರೇಜ್​. ಐ ಕಾಂಟ್​ ಅವಾಯ್ಡ್​’ ಎಂದು ಬರೆದಿರುವುದು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿದೆ.

ಬಾಕ್ಸ್​ ಆಫೀಸ್​ನಲ್ಲಿ ‘ಕೆಜಿಎಫ್​ 2’ ಆರ್ಭಟ:

ವಿಶ್ವಾದ್ಯಂತ ‘ಕೆಜಿಎಫ್​ 2’ ಸಿನಿಮಾ ಧೂಳೆಬ್ಬಿಸಿದೆ. ಎಲ್ಲ ಭಾಷೆಗಳಿಂದ ಈಗಾಗಲೇ 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿದೆ. ಚಿತ್ರಕ್ಕೆ ಬಂಡವಾಳ ಹೂಡಿದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಭರ್ಜರಿ ಲಾಭದಲ್ಲಿದೆ. ಯಶ್​ ವೃತ್ತಿ ಜೀವನಕ್ಕೆ ಈ ಸಿನಿಮಾದಿಂದ ಬಹು ದೊಡ್ಡ ಗೆಲುವು ಸಿಕ್ಕಿದೆ. ‘ಕೆಜಿಎಫ್​ 2’ ಸಿನಿಮಾದ ಲೈಫ್​ ಟೈಮ್​ ಕಲೆಕ್ಷನ್​ ಎಷ್ಟಾಗಬಹುದು ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾದಲ್ಲಿ ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ಅವರು ನಟಿಸಿದ್ದಾರೆ. ಉತ್ತರ ಭಾರತದ ಪ್ರೇಕ್ಷಕರು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪ್ರಕಾಶ್​ ರೈ, ರಾವ್​ ರಮೇಶ್​ ಮುಂತಾದ ಕಲಾವಿದರ ನಟನೆಯಿಂದಾಗಿ ಚಿತ್ರದ ತೂಕ ಹೆಚ್ಚಿದೆ. ಈ ಸಿನಿಮಾ ಮಾಡುತ್ತಿರುವ ದಾಖಲೆಗಳನ್ನು ಕಂಡು ಪರಭಾಷೆ ಮಂದಿ ಕೂಡ ಫಿದಾ ಆಗಿದ್ದಾರೆ. ವಿಶಾಲ್​, ಕಾರ್ತಿ, ಜಗಪತಿ ಬಾಬು, ಶಿವಕಾರ್ತಿಕೇಯನ್​, ಕೃತಿ ಕರಬಂಧ ಸೇರಿದಂತೆ ಅನೇಕರು ‘ಕೆಜಿಎಫ್​ 2’ ಸಿನಿಮಾದ ಸಾಧೆನಯನ್ನು ಕೊಂಡಾಡುತ್ತಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗೆ ಹಿಂದಿ ಮಾರುಕಟ್ಟೆಯಲ್ಲೂ ಅತ್ಯುತ್ತಮ ಕಲೆಕ್ಷನ್​ ಆಗುತ್ತಿದೆ. ಮೊದಲ ದಿನ 53.95 ಕೋಟಿ ರೂಪಾಯಿ, ಎರಡನೇ ದಿನ 46.79 ಕೋಟಿ, ಮೂರನೇ ದಿನ 42.90 ಕೋಟಿ, ನಾಲ್ಕನೇ ದಿನ 50.35 ಕೋಟಿ, ಐದನೇ ದಿನ 25.57 ಕೋಟಿ ಹಾಗೂ ಆರನೇ ದಿನ 19.14 ಕೋಟಿ ರೂಪಾಯಿ ಕಲೆಕ್ಷನ್​ ಹಿಂದಿ ಅವತರಣಿಕೆಯಿಂದ ಆಗಿದೆ.

ಇದನ್ನೂ ಓದಿ:

ರಾಕಿ ಭಾಯ್​ ತಾಯಿ ಪಾತ್ರ ಮಾಡಿದ ‘ಕೆಜಿಎಫ್​ 2’ ನಟಿ ಅರ್ಚನಾ ಜೋಯಿಸ್​ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​

‘RRR​’ ಚಿತ್ರದ ಹಿಂದಿ ಕಲೆಕ್ಷನ್​ ಹಿಂದಿಕ್ಕಲು ‘ಕೆಜಿಎಫ್​ 2’ ಸಿನಿಮಾಗೆ ಇನ್ನೆಷ್ಟು ಕೋಟಿ ರೂ. ಬಾಕಿ? ​ಇಲ್ಲಿದೆ ಲೆಕ್ಕ

ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!