AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಲ್ಲಿ ‘ಕೆಜಿಎಫ್​ 2’ ಟಿಕೆಟ್​ ಸಿಗದೇ ವಿಮಾನ ಹತ್ತಿ ಬೆಂಗಳೂರಿಗೆ ಬಂದ ಲೇಡಿ ಫ್ಯಾನ್ಸ್​​: ಆಹಾ ಅಭಿಮಾನ

KGF Chapter 2: ಭಾರತದ ಎಲ್ಲ ನಗರಗಳಲ್ಲೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಧೂಳೆಬ್ಬಿಸಲು ಸಜ್ಜಾಗಿದೆ. ಹಿಂದಿ ಪ್ರೇಕ್ಷಕರು ಈ ಚಿತ್ರ ನೋಡಲು ಬೆಂಗಳೂರಿಗೆ ಬಂದಿದ್ದಾರೆ.

ಪುಣೆಯಲ್ಲಿ ‘ಕೆಜಿಎಫ್​ 2’ ಟಿಕೆಟ್​ ಸಿಗದೇ ವಿಮಾನ ಹತ್ತಿ ಬೆಂಗಳೂರಿಗೆ ಬಂದ ಲೇಡಿ ಫ್ಯಾನ್ಸ್​​: ಆಹಾ ಅಭಿಮಾನ
ಯಶ್
ಮದನ್​ ಕುಮಾರ್​
|

Updated on: Apr 13, 2022 | 4:39 PM

Share

ನಟ ಯಶ್​ (Yash) ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ದೇಶದ ಹಲವು ನಗರಗಳಲ್ಲಿ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾ ನೋಡಲು ಫ್ಯಾನ್ಸ್​ ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರಕ್ಕೆ ಎಷ್ಟರಮಟ್ಟಿಗೆ ಕ್ರೇಜ್​ ಸೃಷ್ಟಿ ಆಗಿದೆ ಎಂದರೆ ಮೊದಲ ದಿನದ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಹೇಗಾದರೂ ಮಾಡಿ ಮೊದಲೇ ದಿನ ಮೊದಲ ಶೋ ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳೆಲ್ಲರೂ ಮುಗಿಬಿದ್ದು ಟಿಕೆಟ್​ ಬುಕ್​ ಮಾಡುತ್ತಿದ್ದಾರೆ. ಬಹುತೇಕ ಎಲ್ಲ ರಾಜ್ಯಗಳಲ್ಲೂ ಇದೇ ಪರಿಸ್ಥಿತಿ ಇದೆ. ಅಚ್ಚರಿ ಏನೆಂದರೆ ಪುಣೆಯಲ್ಲಿ ‘ಕೆಜಿಎಫ್​ 2’ (KGF 2) ಸಿನಿಮಾದ ಟಿಕೆಟ್​ ಸಿಕ್ಕಿಲ್ಲ ಎಂಬ ಕಾರಣಕ್ಕೆ ಮಹಿಳಾ ಅಭಿಮಾನಿಗಳು ಬೆಂಗಳೂರಿಗೆ ಬಂದಿದ್ದಾರೆ. ವಿಮಾನದ ಮೂಲಕ ಬಂದಿರುವ ದೀಪ್ತಿ ಮತ್ತು ಅವರ ಸಹೋದ್ಯೋಗಿಗಳು ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ನಿರ್ಧರಿಸಿದ್ದಾರೆ. ಮಧ್ಯರಾತ್ರಿ 12 ಗಂಟೆಗೆ ಇಲ್ಲಿ ಫ್ಯಾನ್ಸ್​ ಶೋ ಆರಂಭ ಆಗಲಿದೆ. ಆ ಬಳಿಕ ಮತ್ತೊಂದು ಶೋ ಪ್ರದರ್ಶನಗೊಳ್ಳಲಿದ್ದು, ಅದರ ಟಿಕೆಟ್​ ಅನ್ನು ದೀಪ್ತಿ ಬುಕ್​ ಮಾಡಿದ್ದಾರೆ.

ಕನ್ನಡದಿಂದ ಸಿನಿಮಾ ಜರ್ನಿ ಆರಂಭಿಸಿದ ನಟ ಯಶ್​ ಅವರು ಈಗ ದೇಶವ್ಯಾಪಿ ಹವಾ ಸೃಷ್ಟಿ ಮಾಡಿದ್ದಾರೆ. ಅವರು ಬಾಲಿವುಡ್​ ಸಿನಿಮಾದಲ್ಲಿ ನಟಿಸಿಲ್ಲವಾದರೂ ಯಾವ ಹಿಂದಿ ಹೀರೋಗಳಿಗೂ ಕಡಿಮೆ ಇಲ್ಲದಷ್ಟು ಜನಪ್ರಿಯತೆ ಸಂಪಾದನೆ ಮಾಡಿದ್ದಾರೆ. ಉತ್ತರ ಭಾರತದ ಮಂದಿ ಕೂಡ ಯಶ್​ ಮೇಲೆ ಅಪಾರ ಅಭಿಮಾನ ಇಟ್ಟುಕೊಂಡಿದ್ದಾರೆ. ಮುಂಬೈ, ಪುಣೆ, ದೆಹಲಿ ಮುಂತಾದ ಕಡೆಗಳಲ್ಲಿ ಯಶ್​ ಅವರ ಪೋಸ್ಟರ್​ಗಳು ರಾರಾಜಿಸುತ್ತಿವೆ. ಪುಣೆಯಲ್ಲಿ ಬಹುತೇಕ ಎಲ್ಲ ಶೋಗಳ ಟಿಕೆಟ್​ ಸೋಲ್ಡ್​ ಔಟ್​ ಆಗುತ್ತಿದೆ. ಮುಂಜಾನೆ ಶೋಗೆ ಟಿಕೆಟ್​ ಸಿಕ್ಕಿಲ್ಲ ಎಂಬ ಕಾರಣಕ್ಕೆ ದೀಪ್ತಿ ಮತ್ತು ಅವರ ಸ್ನೇಹಿತರು ವಿಮಾನ ಹತ್ತಿ ಬೆಂಗಳೂರಿಗೆ ಬಂದಿರುವುದು ವಿಶೇಷ.

ಕನ್ನಡ, ಹಿಂದಿ, ಮಲಯಾಳಂ, ತಮಿಳು ಹಾಗು ಹಿಂದಿ ಭಾಷೆಗಳಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ತೆರೆಕಾಣುತ್ತಿದೆ. ಸಂಜಯ್​ ದತ್​, ರವೀನಾ ಟಂಡನ್​ ಅವರ ಆಗಮನದಿಂದಾಗಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಈ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಅದಕ್ಕಿಂತಲೂ ಹೆಚ್ಚಾಗಿ ಈ ಸಿನಿಮಾದ ಕಥೆಗೆ ಮುಂಬೈ ಟಚ್​ ಇದೆ. ಇನ್ನು ಮುಂಬೈನ ಪ್ರಮುಖ ಸ್ಥಳಗಳಲ್ಲಿ ‘ಕೆಜಿಎಫ್​ 2’ ಪೋಸ್ಟರ್​ಗಳು ರಾರಾಜಿಸುತ್ತಿವೆ. ಅಲ್ಲಿನ ಚಿತ್ರಮಂದಿರಗಳಲ್ಲಿ ಯಶ್​ ಕಟೌಟ್​ಗಳನ್ನು ನಿಲ್ಲಿಸಲಾಗಿದೆ. ಆ ಮೂಲಕ ಜನರು ಅಭಿಮಾನ ಪ್ರದರ್ಶಿಸುತ್ತಿದ್ದಾರೆ.

ಪ್ರಶಾಂತ್​ ನೀಲ್​ ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್​ ಕಿರಗಂದೂರು ಅವರು ಬಂಡವಾಳ ಹೂಡಿದ್ದಾರೆ. ಯಶ್​ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ಪ್ರಕಾಶ್​ ರೈ, ರಾವ್​ ರಮೇಶ್​ ಮುಂತಾದ ಅನುಭವಿ ಕಲಾವಿದರಿಂದಾಗಿ ಸಿನಿಮಾದ ಚಾರ್ಮ್​ ಹೆಚ್ಚಿದೆ. ಫಸ್ಟ್​ ಡೇ ಫಸ್ಟ್​ ಶೋ ಸೆಲೆಬ್ರೇಷನ್​ ಆರಂಭ ಆಗಲು ಇನ್ನೇನು ಕೆಲವೇ ಗಂಟೆಗಳು ಬಾಕಿ ಇವೆ. ವಿದೇಶದಲ್ಲೂ ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಅಬ್ಬರಿಸಲಿದೆ.

ಇದನ್ನೂ ಓದಿ:

ದೇವರ ಎದುರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಪೋಸ್ಟರ್​ ಇಟ್ಟು ಪೂಜೆ ಮಾಡಿದ ಯಶ್​ ಅಭಿಮಾನಿಗಳು

ಸುನಾಮಿ ಸೃಷ್ಟಿ ಮಾಡಲಿದೆ ‘ಕೆಜಿಎಫ್​: ಚಾಪ್ಟರ್ 2’ ಚಿತ್ರ: ಮೊದಲ ದಿನ ಆಗುವ ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ