AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2 ಚಿತ್ರದ ಅಪ್​ಡೇಟ್​ಗಾಗಿ ಕಾದಿದ್ದ ಎಲ್ಲರಿಗೂ ಗುಡ್​-ನ್ಯೂಸ್ ನೀಡಿದ ಯಶ್​-ಪ್ರಶಾಂತ್​ ನೀಲ್​!

Yash: ಇತ್ತೀಚೆಗೆ ಇಡೀ ‘ಕೆಜಿಎಫ್​ ಚಾಪ್ಟರ್​ 2’ ತಂಡ ಒಂದು ಕಡೆ ಸೇರಿಕೊಂಡಿದೆ. ಪ್ರಶಾಂತ್​ ನೀಲ್​, ಯಶ್​, ಗರುಡ ರಾಮ್​, ನಿರ್ಮಾಪಕ ವಿಜಯ್ ಕಿರಗಂದೂರು ಮುಂತಾದವರ ಜೊತೆ ರಾಧಿಕಾ ಪಂಡಿತ್​ ಕೂಡ ಒಟ್ಟಾಗಿ ಕಾಲ ಕಳೆದಿದ್ದಾರೆ.

KGF Chapter 2 ಚಿತ್ರದ ಅಪ್​ಡೇಟ್​ಗಾಗಿ ಕಾದಿದ್ದ ಎಲ್ಲರಿಗೂ ಗುಡ್​-ನ್ಯೂಸ್ ನೀಡಿದ ಯಶ್​-ಪ್ರಶಾಂತ್​ ನೀಲ್​!
ವಿಜಯ್​ ಕಿರಗಂದೂರು- ಯಶ್​- ಪ್ರಶಾಂತ್​ ನೀಲ್​
ಮದನ್​ ಕುಮಾರ್​
| Updated By: Digi Tech Desk|

Updated on:Mar 24, 2021 | 9:17 AM

Share

ಇಡೀ ಭಾರತೀಯ ಚಿತ್ರರಂಗವೇ ‘ಕೆಜಿಎಫ್​: ಚಾಪ್ಟರ್​ 2’ ಮೇಲೆ ನಿರೀಕ್ಷೆ ಇಟ್ಟುಕೊಂಡಿದೆ. ಈ ಸಿನಿಮಾ ತಂಡದಿಂದ ಬರುವ ಎಲ್ಲ ಅಪ್​ಡೇಟ್​ಗಳಿಗಾಗಿ ಸಿನಿಪ್ರಿಯರು ಕಾಯುತ್ತ ಇರುತ್ತಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮತ್ತು ‘ರಾಕಿಂಗ್​ ಸ್ಟಾರ್​​’ ಯಶ್​ ಬಳಗದಲ್ಲಿ ಏನಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಅಭಿಮಾನಿಗಳದ್ದು. ಅಂಥ ಎಲ್ಲ ಫ್ಯಾನ್ಸ್​ಗಾಗಿ ಲೇಟೆಸ್ಟ್ ಮಾಹಿತಿ ಹಂಚಿಕೊಂಡಿದೆ ‘ಕೆಜಿಎಫ್​ 2’ ಟೀಮ್​.

ಹೇಗೆ ಸಾಗುತ್ತಿದೆ KGF 2 ಕೆಲಸ? ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಶೂಟಿಂಗ್​ ಈಗಾಗಲೇ ಮುಗಿದಿದೆ. ಜುಲೈ 16ರಂದು ಈ ಸಿನಿಮಾ ತೆರೆಕಾಣುವುದು ಕೂಡ ಖಚಿತ ಆಗಿದೆ. ಹಾಗಾದರೆ ಸದ್ಯ ಈ ಚಿತ್ರದ ಕೆಲಸಗಳು ಯಾವ ಹಂತದಲ್ಲಿವೆ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಇದೆ. ಅದಕ್ಕೆ ಪ್ರಶಾಂತ್​ ನೀಲ್​ ಉತ್ತರ ನೀಡಿದ್ದಾರೆ. ಸದ್ಯಕ್ಕೆ ಡಬ್ಬಿಂಗ್ ಕೆಲಸಗಳು ಭರದಿಂದ ಸಾಗುತ್ತಿವೆ. ಆ ಖುಷಿಯನ್ನು ಹಂಚಿಕೊಳ್ಳುವ ಸಲುವಾಗಿ ಪ್ರಶಾಂತ್​ ನೀಲ್​ ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದಾರೆ.

ಡಬ್ಬಿಂಗ್​ ಶುರು ಮಾಡಿದ ರಾಕಿ ಭಾಯ್​! ಈ ಬಹುನಿರೀಕ್ಷಿತ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಬಹಳ ಹಿಂದೆಯೇ ಚಾಲನೆ ನೀಡಲಾಗಿತ್ತು. ಈಗ ರಾಕಿ ಭಾಯ್​ ಅಲಿಯಾಸ್​ ಅಭಿಮಾನಿಗಳ ನೆಚ್ಚಿನ ‘ರಾಕಿಂಗ್​ ಸ್ಟಾರ್​’ ಯಶ್​ ಅವರು ಡಬ್ಬಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಯಶ್ ಜೊತೆ ಇರುವ ಫೋಟೋವನ್ನು ಪ್ರಶಾಂತ್​ ನೀಲ್​ ಶೇರ್​ ಮಾಡಿಕೊಂಡಿದ್ದು, ‘ರಾಕಿ ಜೊತೆ ಡಬ್ಬಿಂಗ್​ ಮಾಡುವುದು ಯಾವಾಗಲೂ ರಾಕಿಂಗ್​ ಆಗಿರುತ್ತದೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ಇತ್ತೀಚೆಗೆ ಇಡೀ ‘ಕೆಜಿಎಫ್​ ಚಾಪ್ಟರ್​ 2’ ತಂಡ ಒಂದು ಕಡೆ ಸೇರಿಕೊಂಡಿದೆ. ಪ್ರಶಾಂತ್​ ನೀಲ್​, ಯಶ್​, ಗರುಡ ರಾಮ್​, ನಿರ್ಮಾಪಕ ವಿಜಯ್ ಕಿರಗಂದೂರು ಮುಂತಾದವರ ಜೊತೆ ರಾಧಿಕಾ ಪಂಡಿತ್​ ಕೂಡ ಒಟ್ಟಾಗಿ ಕಾಲ ಕಳೆದಿದ್ದಾರೆ. ಆ ಸಂದರ್ಭದ ಫೋಟೋವನ್ನೂ ಪ್ರಶಾಂತ್​ ಹಂಚಿಕೊಂಡಿದ್ದಾರೆ. ‘ಅದ್ಭುತವಾಗಿ ಶುರುವಾದ ಈ ಪಯಣಕ್ಕೆ ಕೊನೆ ಇಲ್ಲ’ ಎಂದು ತಮ್ಮ ಕೆಜಿಎಫ್​ ಫ್ಯಾಮಿಲಿ ಜೊತೆಗಿನ ಜರ್ನಿಯನ್ನು ಪ್ರಶಾಂತ್​ ಬಣ್ಣಿಸಿದ್ದಾರೆ.

‘ಕೆಜಿಎಫ್​ 1’ ಸೂಪರ್​ ಹಿಟ್​ ಆಗಿದ್ದರಿಂದ ಚಾಪ್ಟರ್​ 2 ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ಅವರ ಆಗಮನದಿಂದಾಗಿ ಚಿತ್ರದ ತೂಕ ಹೆಚ್ಚಿದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ 17.7 ಕೋಟಿ​ಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರದ ಮೇಲೆ ಸಿನಿಪ್ರಿಯರಿಗೆ ಯಾವ ಮಟ್ಟಿಗಿನ ಕಾತರ ಇದೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿ. ಇನ್ನು ‘ಕೆಜಿಎಫ್​ 2’ ಬಿಡುಗಡೆಗೂ ಮುನ್ನವೇ ಪ್ರಶಾಂತ್​ ನೀಲ್​ ‘ಸಲಾರ್​’ ಸಿನಿಮಾದ ಕಡೆಗೆ ಗಮನ ಹರಿಸಿದ್ದು ಆ ಬಗ್ಗೆಯೂ ಅಚ್ಚರಿಯ ಸುದ್ದಿಗಳು ಕೇಳಿಬರುತ್ತಿವೆ.

ಇದನ್ನೂ ಓದಿ: Yash: ಯಶ್​ ಪುತ್ರ ಹೇಳಿದ ಒಂದೇ ಪದಕ್ಕೆ ಮಿಲಿಯನ್​ ವ್ಯೂಸ್​! ಯಾವ ಸ್ಟಾರ್​ಗೂ ಕಮ್ಮಿ ಇಲ್ಲ ಯಥರ್ವ್​ ಹವಾ

ದುಡ್ಡು ಮಾಡೋಕೆ ಇಲ್ಲಿಗೆ ಬಂದಿಲ್ಲ, ತಂದೆ ತಾಯಿಗೆ ಸಮಸ್ಯೆ ಆದಾಗ ಇಮೇಜ್​ ಮುಖ ನೋಡಿ ಸುಮ್ಮನೆ ಕೂರೋಕಾಗಲ್ಲ: ಯಶ್​

Published On - 8:41 am, Wed, 24 March 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ