AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2 ಚಿತ್ರದ ಅಪ್​ಡೇಟ್​ಗಾಗಿ ಕಾದಿದ್ದ ಎಲ್ಲರಿಗೂ ಗುಡ್​-ನ್ಯೂಸ್ ನೀಡಿದ ಯಶ್​-ಪ್ರಶಾಂತ್​ ನೀಲ್​!

Yash: ಇತ್ತೀಚೆಗೆ ಇಡೀ ‘ಕೆಜಿಎಫ್​ ಚಾಪ್ಟರ್​ 2’ ತಂಡ ಒಂದು ಕಡೆ ಸೇರಿಕೊಂಡಿದೆ. ಪ್ರಶಾಂತ್​ ನೀಲ್​, ಯಶ್​, ಗರುಡ ರಾಮ್​, ನಿರ್ಮಾಪಕ ವಿಜಯ್ ಕಿರಗಂದೂರು ಮುಂತಾದವರ ಜೊತೆ ರಾಧಿಕಾ ಪಂಡಿತ್​ ಕೂಡ ಒಟ್ಟಾಗಿ ಕಾಲ ಕಳೆದಿದ್ದಾರೆ.

KGF Chapter 2 ಚಿತ್ರದ ಅಪ್​ಡೇಟ್​ಗಾಗಿ ಕಾದಿದ್ದ ಎಲ್ಲರಿಗೂ ಗುಡ್​-ನ್ಯೂಸ್ ನೀಡಿದ ಯಶ್​-ಪ್ರಶಾಂತ್​ ನೀಲ್​!
ವಿಜಯ್​ ಕಿರಗಂದೂರು- ಯಶ್​- ಪ್ರಶಾಂತ್​ ನೀಲ್​
ಮದನ್​ ಕುಮಾರ್​
| Edited By: |

Updated on:Mar 24, 2021 | 9:17 AM

Share

ಇಡೀ ಭಾರತೀಯ ಚಿತ್ರರಂಗವೇ ‘ಕೆಜಿಎಫ್​: ಚಾಪ್ಟರ್​ 2’ ಮೇಲೆ ನಿರೀಕ್ಷೆ ಇಟ್ಟುಕೊಂಡಿದೆ. ಈ ಸಿನಿಮಾ ತಂಡದಿಂದ ಬರುವ ಎಲ್ಲ ಅಪ್​ಡೇಟ್​ಗಳಿಗಾಗಿ ಸಿನಿಪ್ರಿಯರು ಕಾಯುತ್ತ ಇರುತ್ತಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮತ್ತು ‘ರಾಕಿಂಗ್​ ಸ್ಟಾರ್​​’ ಯಶ್​ ಬಳಗದಲ್ಲಿ ಏನಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಅಭಿಮಾನಿಗಳದ್ದು. ಅಂಥ ಎಲ್ಲ ಫ್ಯಾನ್ಸ್​ಗಾಗಿ ಲೇಟೆಸ್ಟ್ ಮಾಹಿತಿ ಹಂಚಿಕೊಂಡಿದೆ ‘ಕೆಜಿಎಫ್​ 2’ ಟೀಮ್​.

ಹೇಗೆ ಸಾಗುತ್ತಿದೆ KGF 2 ಕೆಲಸ? ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಶೂಟಿಂಗ್​ ಈಗಾಗಲೇ ಮುಗಿದಿದೆ. ಜುಲೈ 16ರಂದು ಈ ಸಿನಿಮಾ ತೆರೆಕಾಣುವುದು ಕೂಡ ಖಚಿತ ಆಗಿದೆ. ಹಾಗಾದರೆ ಸದ್ಯ ಈ ಚಿತ್ರದ ಕೆಲಸಗಳು ಯಾವ ಹಂತದಲ್ಲಿವೆ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಇದೆ. ಅದಕ್ಕೆ ಪ್ರಶಾಂತ್​ ನೀಲ್​ ಉತ್ತರ ನೀಡಿದ್ದಾರೆ. ಸದ್ಯಕ್ಕೆ ಡಬ್ಬಿಂಗ್ ಕೆಲಸಗಳು ಭರದಿಂದ ಸಾಗುತ್ತಿವೆ. ಆ ಖುಷಿಯನ್ನು ಹಂಚಿಕೊಳ್ಳುವ ಸಲುವಾಗಿ ಪ್ರಶಾಂತ್​ ನೀಲ್​ ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದಾರೆ.

ಡಬ್ಬಿಂಗ್​ ಶುರು ಮಾಡಿದ ರಾಕಿ ಭಾಯ್​! ಈ ಬಹುನಿರೀಕ್ಷಿತ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಬಹಳ ಹಿಂದೆಯೇ ಚಾಲನೆ ನೀಡಲಾಗಿತ್ತು. ಈಗ ರಾಕಿ ಭಾಯ್​ ಅಲಿಯಾಸ್​ ಅಭಿಮಾನಿಗಳ ನೆಚ್ಚಿನ ‘ರಾಕಿಂಗ್​ ಸ್ಟಾರ್​’ ಯಶ್​ ಅವರು ಡಬ್ಬಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಯಶ್ ಜೊತೆ ಇರುವ ಫೋಟೋವನ್ನು ಪ್ರಶಾಂತ್​ ನೀಲ್​ ಶೇರ್​ ಮಾಡಿಕೊಂಡಿದ್ದು, ‘ರಾಕಿ ಜೊತೆ ಡಬ್ಬಿಂಗ್​ ಮಾಡುವುದು ಯಾವಾಗಲೂ ರಾಕಿಂಗ್​ ಆಗಿರುತ್ತದೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ಇತ್ತೀಚೆಗೆ ಇಡೀ ‘ಕೆಜಿಎಫ್​ ಚಾಪ್ಟರ್​ 2’ ತಂಡ ಒಂದು ಕಡೆ ಸೇರಿಕೊಂಡಿದೆ. ಪ್ರಶಾಂತ್​ ನೀಲ್​, ಯಶ್​, ಗರುಡ ರಾಮ್​, ನಿರ್ಮಾಪಕ ವಿಜಯ್ ಕಿರಗಂದೂರು ಮುಂತಾದವರ ಜೊತೆ ರಾಧಿಕಾ ಪಂಡಿತ್​ ಕೂಡ ಒಟ್ಟಾಗಿ ಕಾಲ ಕಳೆದಿದ್ದಾರೆ. ಆ ಸಂದರ್ಭದ ಫೋಟೋವನ್ನೂ ಪ್ರಶಾಂತ್​ ಹಂಚಿಕೊಂಡಿದ್ದಾರೆ. ‘ಅದ್ಭುತವಾಗಿ ಶುರುವಾದ ಈ ಪಯಣಕ್ಕೆ ಕೊನೆ ಇಲ್ಲ’ ಎಂದು ತಮ್ಮ ಕೆಜಿಎಫ್​ ಫ್ಯಾಮಿಲಿ ಜೊತೆಗಿನ ಜರ್ನಿಯನ್ನು ಪ್ರಶಾಂತ್​ ಬಣ್ಣಿಸಿದ್ದಾರೆ.

‘ಕೆಜಿಎಫ್​ 1’ ಸೂಪರ್​ ಹಿಟ್​ ಆಗಿದ್ದರಿಂದ ಚಾಪ್ಟರ್​ 2 ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಬಾಲಿವುಡ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ಅವರ ಆಗಮನದಿಂದಾಗಿ ಚಿತ್ರದ ತೂಕ ಹೆಚ್ಚಿದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ 17.7 ಕೋಟಿ​ಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರದ ಮೇಲೆ ಸಿನಿಪ್ರಿಯರಿಗೆ ಯಾವ ಮಟ್ಟಿಗಿನ ಕಾತರ ಇದೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿ. ಇನ್ನು ‘ಕೆಜಿಎಫ್​ 2’ ಬಿಡುಗಡೆಗೂ ಮುನ್ನವೇ ಪ್ರಶಾಂತ್​ ನೀಲ್​ ‘ಸಲಾರ್​’ ಸಿನಿಮಾದ ಕಡೆಗೆ ಗಮನ ಹರಿಸಿದ್ದು ಆ ಬಗ್ಗೆಯೂ ಅಚ್ಚರಿಯ ಸುದ್ದಿಗಳು ಕೇಳಿಬರುತ್ತಿವೆ.

ಇದನ್ನೂ ಓದಿ: Yash: ಯಶ್​ ಪುತ್ರ ಹೇಳಿದ ಒಂದೇ ಪದಕ್ಕೆ ಮಿಲಿಯನ್​ ವ್ಯೂಸ್​! ಯಾವ ಸ್ಟಾರ್​ಗೂ ಕಮ್ಮಿ ಇಲ್ಲ ಯಥರ್ವ್​ ಹವಾ

ದುಡ್ಡು ಮಾಡೋಕೆ ಇಲ್ಲಿಗೆ ಬಂದಿಲ್ಲ, ತಂದೆ ತಾಯಿಗೆ ಸಮಸ್ಯೆ ಆದಾಗ ಇಮೇಜ್​ ಮುಖ ನೋಡಿ ಸುಮ್ಮನೆ ಕೂರೋಕಾಗಲ್ಲ: ಯಶ್​

Published On - 8:41 am, Wed, 24 March 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ