AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ಕೆಜಿಎಫ್​ 3’ ಮಾತ್ರ ನಿಮಗೆ ಉಳಿದಿರುವ ಆಯ್ಕೆ ಎಂದವರಿಗೆ ಯಶ್ ಕೊಟ್ರು ಖಡಕ್ ಉತ್ತರ

‘ನಿಮಗೆ ಉಳಿದಿರುವುದು ಕೆಜಿಎಫ್​ 3 ಮಾತ್ರ. ನೀವು ಅದನ್ನೇ ಮಾಡಬೇಕು’ ಎಂದು ಯಶ್​ಗೆ ಅನೇಕರು ಕಿವಿಮಾತು ಹೇಳಿದ್ದರಂತೆ. ಇವರಿಗೆ ಯಶ್ ತಿರುಗೇಟು ಕೊಟ್ಟಿದ್ದಾರೆ.

Yash: ‘ಕೆಜಿಎಫ್​ 3’ ಮಾತ್ರ ನಿಮಗೆ ಉಳಿದಿರುವ ಆಯ್ಕೆ ಎಂದವರಿಗೆ ಯಶ್ ಕೊಟ್ರು ಖಡಕ್ ಉತ್ತರ
ಯಶ್
TV9 Web
| Edited By: |

Updated on: Jan 12, 2023 | 8:01 AM

Share

ಒಂದು ದೊಡ್ಡ ಯಶಸ್ಸು ಸಿಕ್ಕ ನಂತರದಲ್ಲಿ ಆ ವರ್ಚಸ್ಸನ್ನು ಮುಂದುವರಿಸಿಕೊಂಡು ಹೋಗುವುದು ತುಂಬಾ ಸವಾಲಿನ ಕೆಲಸ. ಇದಕ್ಕೆ ತಾಜಾ ಉದಾಹರಣೆ ಪ್ರಭಾಸ್(Prabhas). ‘ಬಾಹುಬಲಿ’ ಸರಣಿಯಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಈ ಚಿತ್ರದಿಂದ ಅವರು ಗೆದ್ದರು. ಅವರ ಸಿನಿಮಾಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿತು. ‘ಬಾಹುಬಲಿ 2’ ಬಳಿಕ ಬಂದ ಎರಡು ಸಿನಿಮಾಗಳು ಸೋತವು. ಯಶ್​ಗೂ (Yash) ಹೀಗೆಯೇ ಆಗುತ್ತದೆ ಎಂದು ಅನೇಕರು ಹೇಳಿದ್ದಿದೆ. ಇದಕ್ಕೆ ಯಶ್ ಖಡಕ್ ಆಗಿ ಉತ್ತರಿಸಿದ್ದಾರೆ.

ಯಶ್ ‘ಕೆಜಿಎಫ್ 2’ ಮೂಲಕ ಯಶಸ್ಸು ಕಂಡಿದ್ದಾರೆ. ಅವರ ಮುಂದಿನ ಸಿನಿಮಾ ‘ಕೆವಿಎನ್​ ಪ್ರೊಡಕ್ಷನ್​’ ಜತೆ ಎಂಬ ವಿಚಾರ ರಿವೀಲ್ ಆಗಿದೆ. ಆದರೆ, ನಿರ್ದೇಶಕರು ಯಾರು ಎಂಬುದು ಇನ್ನೂ ಘೋಷಣೆ ಆಗಿಲ್ಲ. ಹೀಗಿರುವಾಗಲೇ ಯಶ್​ಗೆ ಅನೇಕರು ಅನೇಕ ರೀತಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ‘ನಿಮಗೆ ಉಳಿದಿರುವುದು ಕೆಜಿಎಫ್​ 3 ಮಾತ್ರ. ನೀವು ಅದನ್ನೇ ಮಾಡಬೇಕು’ ಎಂದು ಯಶ್​ಗೆ ಅನೇಕರು ಕಿವಿಮಾತು ಹೇಳಿದ್ದರಂತೆ. ಇವರಿಗೆ ಯಶ್ ತಿರುಗೇಟು ಕೊಟ್ಟಿದ್ದಾರೆ. ಒಂದು ಕಡೆ ಸೆಟಲ್ ಆಗಿ ಕೆಲಸ ಮಾಡುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

ಇದನ್ನೂ ಓದಿ
Image
Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ
Image
Yash Birthday: ಬರ್ತ್​ಡೇಗೂ ಮೊದಲು ಅಭಿಮಾನಿಗಳ ಭೇಟಿ ಮಾಡಿದ ಯಶ್; ಇದಕ್ಕಿದೆ ಕಾರಣ
Image
Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
Image
Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ಸಂದರ್ಶನ ಒಂದರಲ್ಲಿ ಮಾತನಾಡಿರುವ ಯಶ್​, ‘ಜನರು ಈಗಲೂ ಕೇಳುತ್ತಾರೆ. ಹೊಸ ಸಿನಿಮಾ ಘೋಷಿಸಲು ಇಷ್ಟೊಂದು ಸಮಯ ಏಕೆ ತೆಗೆದುಕೊಳ್ಳುತ್ತಿದ್ದೀರಿ? ನೀವು ಮುಂದೇನು ಮಾಡುತ್ತೀರಿ? ನನ್ನ ಪ್ರಕಾರ ನಿಮಗೆ ಉಳಿದಿರೋದು ಕೆಜಿಎಫ್ 3 ಮಾತ್ರ. ಗಡ್ಡ ತೆಗೆದರೆ ಜನರು ನಿಮ್ಮನ್ನು ಹೇಗೆ ಒಪ್ಪಿಕೊಳ್ಳುತ್ತಾರೆ? ಈ ರೀತಿಯ ಪ್ರಶ್ನೆಗಳು, ಮಾತುಗಳು ನನ್ನ ಗೆಳೆಯರ ವಲಯದಿಂದಲೇ ಬಂದಿದೆ’ ಎಂದಿದ್ದಾರೆ ಯಶ್.

‘ನಿಮ್ಮಿಂದ ಏನು ಮಾಡಲು ಸಾಧ್ಯ? ಇದೇ ಕೊನೆಯೇ​? ಎಂದು ಕೇಳುತ್ತಾರೆ. ಅದು ನಿಮಗೆ ಇರಬಹುದು. ಗೆದ್ದಿರುವುದನ್ನು ನಿಭಾಯಿಸುವುದಕ್ಕಿಂತ ಹೊಸದನ್ನು ಗೆಲ್ಲುವುದು ನನಗಿಷ್ಟ. ಎಗ್ಸೈಟ್​ಮೆಂಟ್ ಕೊಡುವ ಕೆಲಸವನ್ನು ನಾನು ಮಾಡುತ್ತೇನೆ. ಹೋರಾಡುತ್ತ ಮೃತಪಟ್ಟರೆ ನನಗೇನೂ ಬೇಸರ ಇಲ್ಲ. ಆದರೆ, ಹೋರಾಡುತ್ತಿದ್ದೇನಲ್ಲ ಅದು ಮುಖ್ಯ’ ಎಂದು ಯಶ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​