AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF 3 Movie: ‘ಕೆಜಿಎಫ್ 3’ ಚಿತ್ರಕ್ಕಾಗಿ ಕಾಯಬೇಕು ಮತ್ತಷ್ಟು ವರ್ಷ; ಅಪ್​​ಡೇಟ್​ ನೀಡಿದ ವಿಜಯ್ ಕಿರಗಂದೂರು

‘ಕೆಜಿಎಫ್ 2’ ಕ್ಲೈಮ್ಯಾಕ್ಸ್​ನಲ್ಲಿ ರಾಕಿ (ಯಶ್​) ಮೃತಪಡುತ್ತಾನೆ. ಆತ ಭಾರತದಲ್ಲಿ ಮಾಡಿದ ಕೃತ್ಯಗಳ ಲೆಕ್ಕವಷ್ಟೇ ಸರ್ಕಾರಕ್ಕೆ ಸಿಕ್ಕಿರುತ್ತದೆ. ವಿದೇಶದಲ್ಲೂ ಆತ ಒಂದಷ್ಟು ಕೃತ್ಯಗಳನ್ನು ಮಾಡಿದ್ದ. ‘ಕೆಜಿಎಫ್ 3’ ಚಿತ್ರದಲ್ಲಿ ಈ ವಿಚಾರ ಹೈಲೈಟ್ ಆಗಲಿದೆ ಎನ್ನಲಾಗುತ್ತಿದೆ.

KGF 3 Movie: ‘ಕೆಜಿಎಫ್ 3’ ಚಿತ್ರಕ್ಕಾಗಿ ಕಾಯಬೇಕು ಮತ್ತಷ್ಟು ವರ್ಷ; ಅಪ್​​ಡೇಟ್​ ನೀಡಿದ ವಿಜಯ್ ಕಿರಗಂದೂರು
ಯಶ್
TV9 Web
| Edited By: |

Updated on: Jan 09, 2023 | 7:50 AM

Share

‘ಕೆಜಿಎಫ್ 2’ ಸಿನಿಮಾ ಕ್ಲೈಮ್ಯಾಕ್ಸ್​​ನಲ್ಲಿ ‘ಕೆಜಿಎಫ್ 3’ (KGF 3 Movie) ಬಗ್ಗೆ ಅಪ್​ಡೇಟ್​ ಸಿಕ್ಕಿತ್ತು. ‘ಕೆಜಿಎಫ್’ ಸೀರಿಸ್​​ನ ಮೂರನೇ ಪಾರ್ಟ್ ಯಾವಾಗ ಸೆಟ್ಟೇರಲಿದೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿದೆ. ಆದರೆ, ಇದಕ್ಕೆ ಮತ್ತಷ್ಟು ವರ್ಷ ಕಾಯಬೇಕಾಗಿರುವುದು ಅನಿವಾರ್ಯ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​​​ನ ವಿಜಯ್ ಕಿರಗಂದೂರು (Vijay Kiragandur) ಅವರು ಮಾಹಿತಿ ನೀಡಿದ್ದಾರೆ. ಈ ಸಿನಿಮಾದ ಕೆಲಸ ಯಾವಾಗ ಶುರುವಾಗಲಿದೆ ಎಂಬ ಪ್ರಶ್ನೆಗೆ ಅವರ ಕಡೆಯಿಂದ ಉತ್ತರ ಸಿಕ್ಕಿದೆ.

‘ಕೆಜಿಎಫ್ 2’ ಕ್ಲೈಮ್ಯಾಕ್ಸ್​ನಲ್ಲಿ ರಾಕಿ (ಯಶ್​) ಮೃತಪಡುತ್ತಾನೆ. ಆತ ಭಾರತದಲ್ಲಿ ಮಾಡಿದ ಕೃತ್ಯಗಳ ಲೆಕ್ಕವಷ್ಟೇ ಸರ್ಕಾರಕ್ಕೆ ಸಿಕ್ಕಿರುತ್ತದೆ. ವಿದೇಶದಲ್ಲೂ ಆತ ಒಂದಷ್ಟು ಕೃತ್ಯಗಳನ್ನು ಮಾಡಿದ್ದ. ‘ಕೆಜಿಎಫ್ 3’ ಚಿತ್ರದಲ್ಲಿ ಈ ವಿಚಾರ ಹೈಲೈಟ್ ಆಗಲಿದೆ ಎನ್ನಲಾಗುತ್ತಿದೆ. ಈ ಸಿನಿಮಾ ಸೆಟ್ಟೇರೋದು 2025ರಲ್ಲಿ. ರಿಲೀಸ್ ಆಗೋದು 2026ರಲ್ಲಂತೆ! ಈ ಬಗ್ಗೆ ವಿಜಯ್ ಅವರು ಕೋಯಿಮೋಯಿ ಸೈಟ್​ಗೆ ಮಾಹಿತಿ ನೀಡಿದ್ದಾರೆ.

‘ಕೆಜಿಎಫ್ 3 ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಇನ್ನೂ ಆರಂಭ ಆಗಿಲ್ಲ. 2025ರಲ್ಲಿ ಸಿನಿಮಾ ಸೆಟ್ಟೇರುವ ನಿರೀಕ್ಷೆ ಇದೆ. ಕೆಜಿಎಫ್​ ಸೀರಿಸ್​ನಲ್ಲಿ ಐದು ಪಾರ್ಟ್​​ಗಳು ಬರಬಹುದು. ಜೇಮ್ಸ್​ ಬಾಂಡ್ ಸಿನಿಮಾಗಳಲ್ಲಿ ಬಾಂಡ್ ಪಾತ್ರವನ್ನು ಬೇರೆಯವರು ಮಾಡಿದ್ದರು. ಅದೇ ರೀತಿ ‘ಕೆಜಿಎಫ್​’ ಸೀರಿಸ್​ನ ರಾಕಿಭಾಯ್ ಪಾತ್ರವನ್ನು ಬೇರೆಯವರು ಮಾಡಬಹುದು. ಹೀರೋಗಳು ಬದಲಾಗುತ್ತಿರುತ್ತಾರೆ’ ಎಂದಿದ್ದಾರೆ ವಿಜಯ್. ಈ ಮೂಲಕ ಅವರು ಕುತೂಹಲ ಹುಟ್ಟುಹಾಕಿದ್ದಾರೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಪ್ರಶಾಂತ್ ನೀಲ್ ಅವರು ‘ಸಲಾರ್​’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಮುಂದಿನ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಈ ಚಿತ್ರದ ಬಳಿಕ ಅವರು ಜೂ.ಎನ್​ಟಿಆರ್​​ ಜತೆಗಿನ ಸಿನಿಮಾದಲ್ಲಿ ಬ್ಯುಸಿ ಆಗಲಿದ್ದಾರೆ. ಇದಾದ ಬಳಿಕವೇ ‘ಕೆಜಿಎಫ್ 3’ ಕೆಲಸಗಳಲ್ಲಿ ಪ್ರಶಾಂತ್ ನೀಲ್ ಬ್ಯುಸಿ ಆಗಲಿದ್ದಾರೆ.

ಇದನ್ನೂ ಓದಿ: ‘ನಾನು ತೆಲುಗು ನಟರ ಹಿಂದೆ ಹೋಗಿಲ್ಲ, ಅವರೇ ನನ್ನ ಹುಡುಕಿ ಬಂದರು’; ಪ್ರಶಾಂತ್ ನೀಲ್

ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್​’ ಚಿತ್ರಕ್ಕೂ ‘ಕೆಜಿಎಫ್ 3’ಗೂ ಲಿಂಕ್ ಇದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ. ‘ಸಲಾರ್​’ ಚಿತ್ರದಲ್ಲಿ ಯಶ್ ಕೂಡ ಇರಲಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ