AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಲುಕ್​ನಲ್ಲಿ ಪ್ರತ್ಯಕ್ಷರಾದ ಯಶ್; ಹೇಗಿದೆ ನೋಡಿ ಹೇರ್​ಸ್ಟೈಲ್

‘ಕೆಜಿಎಫ್’ ರಿಲೀಸ್ ಆದ ಬಳಿಕ ಅವರು ಗಡ್ಡ ಹಾಗೂ ಕೂದಲಿಗೆ ಕತ್ತರಿ ಹಾಕಿದ್ದರು. ‘ಕೆಜಿಎಫ್ 2’ ಬಿಡುಗಡೆ ಆದ ನಂತರದಲ್ಲಿ ಯಶ್ ಅವರು ಗಡ್ಡಕ್ಕೆ ಹಾಗೂ ತಲೆಕೂದಲನ್ನು ಕತ್ತರಿಸಲಿದ್ದಾರೆ ಎಂದೇ ಭಾವಿಸಲಾಗಿತ್ತು. ಆದರೆ, ಅದು ಸುಳ್ಳಾಗಿದೆ.

ಹೊಸ ಲುಕ್​ನಲ್ಲಿ ಪ್ರತ್ಯಕ್ಷರಾದ ಯಶ್; ಹೇಗಿದೆ ನೋಡಿ ಹೇರ್​ಸ್ಟೈಲ್
TV9 Web
| Edited By: |

Updated on: Nov 07, 2022 | 5:29 PM

Share

‘ಕೆಜಿಎಫ್ 2’ (KGF: Chapter 2) ಗೆದ್ದ ಬಳಿಕ ಯಶ್ ಅವರ ಖ್ಯಾತಿ ದುಪ್ಪಟ್ಟಾಗಿದೆ. ದೇಶ-ವಿದೇಶಗಳಲ್ಲಿ ಅವರ ಖ್ಯಾತಿ ಹೆಚ್ಚಿದೆ. ದೇಶದ ವಿವಿಧ ಕಡೆಗಳಲ್ಲಿ ನಡೆವ ಕಾರ್ಯಕ್ರಮಕ್ಕೆ ಯಶ್ ತೆರಳುತ್ತಿದ್ದಾರೆ. ಈಗ ಅವರ ಹೊಸ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ. ಹೊಸ ಕೇಶ ವಿನ್ಯಾಸದೊಂದಿಗೆ ಯಶ್ (Yash) ಪ್ರತ್ಯಕ್ಷರಾಗಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಯಶ್ ಅವರ ಹೊಸ ಲುಕ್ ನೋಡಿ ಫ್ಯಾನ್ಸ್​ಗೆ ಹಲವು ಅನುಮಾನಗಳು ಮೂಡುತ್ತಿವೆ.

ಯಶ್ ಅವರು ಇತ್ತೀಚೆಗೆ ಹೊರ ರಾಜ್ಯಕ್ಕೆ ತೆರಳಿದ್ದರು. ಅಲ್ಲಿ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ವೇಳೆ ಅನೇಕರು ಫೋಟೋ ಕ್ಲಿಕ್ ಮಾಡಿಕೊಂಡಿದ್ದಾರೆ. ಯಶ್ ಅವರು ತಮ್ಮ ಹೇರ್​ಸ್ಟೈಲ್ ಬದಲಿಸಿದ್ದಾರೆ. ‘ಕೆಜಿಎಫ್’ ರಿಲೀಸ್ ಆದ ಬಳಿಕ ಅವರು ಗಡ್ಡ ಹಾಗೂ ಕೂದಲಿಗೆ ಕತ್ತರಿ ಹಾಕಿದ್ದರು. ‘ಕೆಜಿಎಫ್ 2’ ಬಿಡುಗಡೆ ಆದ ನಂತರದಲ್ಲಿ ಯಶ್ ಅವರು ಗಡ್ಡಕ್ಕೆ ಹಾಗೂ ತಲೆಕೂದಲನ್ನು ಕತ್ತರಿಸಲಿದ್ದಾರೆ ಎಂದೇ ಭಾವಿಸಲಾಗಿತ್ತು. ಆದರೆ, ಅದು ಸುಳ್ಳಾಗಿದೆ.

ಯಶ್ ಅವರು ತಲೆಕೂದಲನ್ನು ಇನ್ನೂ ಉದ್ದಕ್ಕೆ ಬಿಟ್ಟಿದ್ದಾರೆ. ಅಷ್ಟೇ ಅಲ್ಲ, ತಮ್ಮ ಹೇರ್​ಸ್ಟೈಲ್ ಅನ್ನು ಬದಲಿಸಿದ್ದಾರೆ. ಈ ಫೋಟೋಗಳು ಫ್ಯಾನ್ಸ್ ವಲಯದಲ್ಲಿ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇದು ಯಶ್ ಅವರ ಮುಂದಿನ ಚಿತ್ರದ ಗೆಟಪ್​​ ಇರಬಹುದು ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.

ಇದನ್ನೂ ಓದಿ: ‘ಒಂದು ಬಂಡೆ ಒಡೆಯಬೇಕಾದರೆ ನಿರಂತರ ಪ್ರಯತ್ನ ಬೇಕು’; ದಕ್ಷಿಣದ ಸಿನಿಮಾಗಳ ಬಗ್ಗೆ ಯಶ್ ಮಾತು

ಯಶ್ ಅವರ ಮುಂದಿನ ಚಿತ್ರದ ಬಗ್ಗೆ ಸಾಕಷ್ಟು ವದಂತಿ ಇದೆ. ‘ಕೆಜಿಎಫ್ 2’ ಬಳಿಕ ಅವರ ಹೊಸ ಸಿನಿಮಾ ಘೋಷಣೆಗಾಗಿ ಎಲ್ಲರೂ ಕಾಯುತ್ತಿದ್ದಾರೆ. ನರ್ತನ್ ಜತೆ ಯಶ್ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಆ ಬಗ್ಗೆ ಈವರೆಗೆ ಘೋಷಣೆ ಆಗಿಲ್ಲ. ಶಂಕರ್ ಜತೆ ಯಶ್ ಸಿನಿಮಾ ಮಾಡುತ್ತಾರೆ ಎಂಬ ವದಂತಿಯೂ ಹುಟ್ಟಿಕೊಂಡಿತ್ತು. ಯಶ್ ಮುಂದಿನ ಪ್ರಾಜೆಕ್ಟ್ ‘ಕೆಜಿಎಫ್ 3’ ಆಗಿರಲಿದೆ ಎಂಬುದು ಕೆಲವರ ಊಹೆ. ಇದಕ್ಕೆ ಯಶ್ ಕಡೆಯಿಂದಲೇ ಉತ್ತರ ಸಿಗಬೇಕಿದೆ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ