AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ

ನಿರ್ದೇಶಕ ಪ್ರಶಾಂತ್​ ನೀಲ್​ ಅವರು ವ್ಯಾಕ್ಸಿನ್​ ಪಡೆಯುತ್ತಿರುವ ಫೋಟೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ಅವರ ಪೋಸ್​ ನೋಡಿ ಎಲ್ಲರೂ ಅಚ್ಚರಿ ಪಟ್ಟಿದ್ದಾರೆ.

ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ
ಕೊರೊನಾ ಲಸಿಕೆ ಪಡೆದ ಪ್ರಶಾಂತ್​ ನೀಲ್​ ಫೋಟೋ ವೈರಲ್​
ಮದನ್​ ಕುಮಾರ್​
|

Updated on: Jun 08, 2021 | 5:23 PM

Share

ಭಾರತೀಯ ಚಿತ್ರರಂಗದ ಸೆನ್ಸೇಷನಲ್​ ನಿರ್ದೇಶಕರ ಸಾಲಿನಲ್ಲಿ ಪ್ರಶಾಂತ್​ ನೀಲ್​ ಹೆಸರು ಕೂಡ ಮುಂಚೂಣಿಯಲ್ಲಿ ಕೇಳಿಬರುತ್ತದೆ. ‘ಕೆಜಿಎಫ್​’ ಚಿತ್ರದ ಯಶಸ್ಸಿನ ನಂತರ ಅವರಿಗೆ ದೇಶಾದ್ಯಂತ ಖ್ಯಾತಿ ಹೆಚ್ಚಿದೆ. ಈಗ ಅವರು ಸಿನಿಮಾಗೆ ಸಂಬಂಧವೇ ಇಲ್ಲದ ಒಂದು ವಿಚಾರಕ್ಕೆ ಸುದ್ದಿ ಆಗುತ್ತಿದ್ದಾರೆ. ಕೊರೊನಾ ಲಸಿಕೆ ಪಡೆಯುತ್ತಿರುವ ಪ್ರಶಾಂತ್​ ನೀಲ್​ ಅವರ ಫೋಟೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಪ್ರಶಾಂತ್​ ನೀಲ್​ ಅವರ ಇನ್ನೊಂದು ಮುಖ ಕಂಡ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ದೇಶದೆಲ್ಲೆಡೆ ವ್ಯಾಪಿಸಿರುವ ಕೊರೊನಾ ವೈರಸ್​ ಹಿಮ್ಮೆಟ್ಟಿಸಲು ವ್ಯಾಕ್ಸಿನ್​ ಪಡೆಯುವುದೇ ಸೂಕ್ತ ಅಸ್ತ್ರ. ಹಾಗಾಗಿ ಎಲ್ಲರೂ ಮುಗಿಬಿದ್ದು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಲಸಿಕೆ ಪಡೆದ ನಂತರ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವುದು ಒಂದು ಬಗೆಯ ಟ್ರೆಂಡ್​ ಆಗಿದೆ. ಪ್ರಶಾಂತ್​ ನೀಲ್​ ಕೂಡ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಫೋಟೋ ಹಂಚಿಕೊಂಡರು. ಆದರೆ ಆ ಫೋಟೋದಲ್ಲಿ ಅವರ ಪೋಸ್​ ನೋಡಿ ಎಲ್ಲರೂ ಅಚ್ಚರಿ ಪಟ್ಟಿದ್ದಾರೆ. ಲಸಿಕೆ ಪಡೆಯುವಾಗ ನರ್ಸ್​ ಮುಖವನ್ನೇ ನೋಡುತ್ತಿದ್ದ ಯುವಕನೊಬ್ಬನ ಫೋಟೋ ಇತ್ತೀಚೆಗೆ ವೈರಲ್​ ಆಗಿತ್ತು. ಅದೇ ರೀತಿ ಈಗ ಪ್ರಶಾಂತ್​ ನೀಲ್​ ಫೋಟೋ ಸಹ ವೈರಲ್​ ಆಗಿದೆ.

ನರ್ಸ್​ ಲಸಿಕೆ ಚುಚ್ಚುತ್ತಿದ್ದರೆ, ಪ್ರಶಾಂತ್​ ನೀಲ್​ ಮುಖ ಮುಚ್ಚಿಕೊಂಡಿದ್ದಾರೆ. ಇಷ್ಟು ಚಿಕ್ಕ ಇಂಜೆಕ್ಷನ್​ಗೆ ಹೆದರಿಕೊಂಡು ಪ್ರಶಾಂತ್​ ನೀಲ್​ ಹೀಗೆ ಮಾಡಿದ್ದಾರಾ ಅಥವಾ ನರ್ಸ್​ ಕಂಡು ಅವರು ನಾಚಿ ನೀರಾಗಿದ್ದಾರಾ? ಇಂಥ ಹಲವು ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ. ಫೋಟೋಗೆ ಕಮೆಂಟ್​ ಮಾಡುತ್ತಿರುವ ಜನರು ತಮಾಷೆಗೆ ಪ್ರಶಾಂತ್​ ನೀಲ್​ ಕಾಲೆಳೆಯುತ್ತಿದ್ದಾರೆ.

‘ಕೆಜಿಎಫ್​’ ಸಿನಿಮಾದಲ್ಲಿ ಅಷ್ಟೆಲ್ಲ ಕ್ರೌರ್ಯ ತೋರಿಸುವ ನೀವು ಇಂಜೆಕ್ಷನ್​ಗೆ ಭಯಪಡುತ್ತೀರಲ್ಲ. ಸಿನಿಮಾದಲ್ಲಿ ವಿಲನ್​ಗಳನ್ನು ಚಚ್ಚಿಹಾಕಿದ್ದೇನೆ ಎಂದು ಬೀಗಬೇಡ. ವ್ಯಾಕ್ಸಿನ್​ ಪಡೆಯುವಾಗ ಹೆದರಿಕೊಂಡಿದ್ದನ್ನು ನಾನು ನೋಡಿದ್ದೇನೆ ಎಂಬಿತ್ಯಾದಿ ಕಮೆಂಟ್​ಗಳು ಬರುತ್ತಿವೆ. ಅಲ್ಲದೆ, ಈ ಫೋಟೋ ಇಟ್ಟುಕೊಂಡು ಹಲವು ಮೀಮ್​ಗಳನ್ನು ಮಾಡಲಾಗುತ್ತಿದೆ.

‘ಕೊನೆಗೂ ವಾಕ್ಸಿನ್​ ಪಡೆದುಕೊಂಡೆ. ನೀವು ಇನ್ನೂ ಪಡೆದುಕೊಳ್ಳದೇ ಇದ್ದರೆ ದಯವಿಟ್ಟು ಸ್ಲಾಟ್​ ಬುಕ್​ ಮಾಡಿಕೊಂಡು ಫ್ಯಾಮಿಲಿ ಜೊತೆ ಲಸಿಕೆ ಹಾಕಿಸಿಕೊಳ್ಳಿ’ ಎಂದು ಎಲ್ಲರಲ್ಲೂ ಪ್ರಶಾಂತ್​ ನೀಲ್​ ಮನವಿ ಮಾಡಿದ್ದಾರೆ. ಸದ್ಯ ಅವರು ‘ಕೆಜಿಎಫ್: ಚಾಪ್ಟರ್​​ 2’ ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಲಾರ್​ ಸಿನಿಮಾದ ಮೇಲೂ ಗಮನ ಹರಿಸಿದ್ದಾರೆ.

ಇದನ್ನೂ ಓದಿ:

ಪ್ರಶಾಂತ್​ ನೀಲ್​ ಜನ್ಮದಿನ; ಪ್ರೀತಿಯಿಂದ ಶುಭಕೋರಿದ ಜ್ಯೂ. ಎನ್​ಟಿಆರ್​ ಕಾಯುತ್ತಿರುವುದು ಆ ಒಂದು ಕ್ಷಣಕ್ಕಾಗಿ

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು