AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ

ನಿರ್ದೇಶಕ ಪ್ರಶಾಂತ್​ ನೀಲ್​ ಅವರು ವ್ಯಾಕ್ಸಿನ್​ ಪಡೆಯುತ್ತಿರುವ ಫೋಟೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ಅವರ ಪೋಸ್​ ನೋಡಿ ಎಲ್ಲರೂ ಅಚ್ಚರಿ ಪಟ್ಟಿದ್ದಾರೆ.

ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ
ಕೊರೊನಾ ಲಸಿಕೆ ಪಡೆದ ಪ್ರಶಾಂತ್​ ನೀಲ್​ ಫೋಟೋ ವೈರಲ್​
ಮದನ್​ ಕುಮಾರ್​
|

Updated on: Jun 08, 2021 | 5:23 PM

Share

ಭಾರತೀಯ ಚಿತ್ರರಂಗದ ಸೆನ್ಸೇಷನಲ್​ ನಿರ್ದೇಶಕರ ಸಾಲಿನಲ್ಲಿ ಪ್ರಶಾಂತ್​ ನೀಲ್​ ಹೆಸರು ಕೂಡ ಮುಂಚೂಣಿಯಲ್ಲಿ ಕೇಳಿಬರುತ್ತದೆ. ‘ಕೆಜಿಎಫ್​’ ಚಿತ್ರದ ಯಶಸ್ಸಿನ ನಂತರ ಅವರಿಗೆ ದೇಶಾದ್ಯಂತ ಖ್ಯಾತಿ ಹೆಚ್ಚಿದೆ. ಈಗ ಅವರು ಸಿನಿಮಾಗೆ ಸಂಬಂಧವೇ ಇಲ್ಲದ ಒಂದು ವಿಚಾರಕ್ಕೆ ಸುದ್ದಿ ಆಗುತ್ತಿದ್ದಾರೆ. ಕೊರೊನಾ ಲಸಿಕೆ ಪಡೆಯುತ್ತಿರುವ ಪ್ರಶಾಂತ್​ ನೀಲ್​ ಅವರ ಫೋಟೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಪ್ರಶಾಂತ್​ ನೀಲ್​ ಅವರ ಇನ್ನೊಂದು ಮುಖ ಕಂಡ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ದೇಶದೆಲ್ಲೆಡೆ ವ್ಯಾಪಿಸಿರುವ ಕೊರೊನಾ ವೈರಸ್​ ಹಿಮ್ಮೆಟ್ಟಿಸಲು ವ್ಯಾಕ್ಸಿನ್​ ಪಡೆಯುವುದೇ ಸೂಕ್ತ ಅಸ್ತ್ರ. ಹಾಗಾಗಿ ಎಲ್ಲರೂ ಮುಗಿಬಿದ್ದು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಲಸಿಕೆ ಪಡೆದ ನಂತರ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವುದು ಒಂದು ಬಗೆಯ ಟ್ರೆಂಡ್​ ಆಗಿದೆ. ಪ್ರಶಾಂತ್​ ನೀಲ್​ ಕೂಡ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಫೋಟೋ ಹಂಚಿಕೊಂಡರು. ಆದರೆ ಆ ಫೋಟೋದಲ್ಲಿ ಅವರ ಪೋಸ್​ ನೋಡಿ ಎಲ್ಲರೂ ಅಚ್ಚರಿ ಪಟ್ಟಿದ್ದಾರೆ. ಲಸಿಕೆ ಪಡೆಯುವಾಗ ನರ್ಸ್​ ಮುಖವನ್ನೇ ನೋಡುತ್ತಿದ್ದ ಯುವಕನೊಬ್ಬನ ಫೋಟೋ ಇತ್ತೀಚೆಗೆ ವೈರಲ್​ ಆಗಿತ್ತು. ಅದೇ ರೀತಿ ಈಗ ಪ್ರಶಾಂತ್​ ನೀಲ್​ ಫೋಟೋ ಸಹ ವೈರಲ್​ ಆಗಿದೆ.

ನರ್ಸ್​ ಲಸಿಕೆ ಚುಚ್ಚುತ್ತಿದ್ದರೆ, ಪ್ರಶಾಂತ್​ ನೀಲ್​ ಮುಖ ಮುಚ್ಚಿಕೊಂಡಿದ್ದಾರೆ. ಇಷ್ಟು ಚಿಕ್ಕ ಇಂಜೆಕ್ಷನ್​ಗೆ ಹೆದರಿಕೊಂಡು ಪ್ರಶಾಂತ್​ ನೀಲ್​ ಹೀಗೆ ಮಾಡಿದ್ದಾರಾ ಅಥವಾ ನರ್ಸ್​ ಕಂಡು ಅವರು ನಾಚಿ ನೀರಾಗಿದ್ದಾರಾ? ಇಂಥ ಹಲವು ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ. ಫೋಟೋಗೆ ಕಮೆಂಟ್​ ಮಾಡುತ್ತಿರುವ ಜನರು ತಮಾಷೆಗೆ ಪ್ರಶಾಂತ್​ ನೀಲ್​ ಕಾಲೆಳೆಯುತ್ತಿದ್ದಾರೆ.

‘ಕೆಜಿಎಫ್​’ ಸಿನಿಮಾದಲ್ಲಿ ಅಷ್ಟೆಲ್ಲ ಕ್ರೌರ್ಯ ತೋರಿಸುವ ನೀವು ಇಂಜೆಕ್ಷನ್​ಗೆ ಭಯಪಡುತ್ತೀರಲ್ಲ. ಸಿನಿಮಾದಲ್ಲಿ ವಿಲನ್​ಗಳನ್ನು ಚಚ್ಚಿಹಾಕಿದ್ದೇನೆ ಎಂದು ಬೀಗಬೇಡ. ವ್ಯಾಕ್ಸಿನ್​ ಪಡೆಯುವಾಗ ಹೆದರಿಕೊಂಡಿದ್ದನ್ನು ನಾನು ನೋಡಿದ್ದೇನೆ ಎಂಬಿತ್ಯಾದಿ ಕಮೆಂಟ್​ಗಳು ಬರುತ್ತಿವೆ. ಅಲ್ಲದೆ, ಈ ಫೋಟೋ ಇಟ್ಟುಕೊಂಡು ಹಲವು ಮೀಮ್​ಗಳನ್ನು ಮಾಡಲಾಗುತ್ತಿದೆ.

‘ಕೊನೆಗೂ ವಾಕ್ಸಿನ್​ ಪಡೆದುಕೊಂಡೆ. ನೀವು ಇನ್ನೂ ಪಡೆದುಕೊಳ್ಳದೇ ಇದ್ದರೆ ದಯವಿಟ್ಟು ಸ್ಲಾಟ್​ ಬುಕ್​ ಮಾಡಿಕೊಂಡು ಫ್ಯಾಮಿಲಿ ಜೊತೆ ಲಸಿಕೆ ಹಾಕಿಸಿಕೊಳ್ಳಿ’ ಎಂದು ಎಲ್ಲರಲ್ಲೂ ಪ್ರಶಾಂತ್​ ನೀಲ್​ ಮನವಿ ಮಾಡಿದ್ದಾರೆ. ಸದ್ಯ ಅವರು ‘ಕೆಜಿಎಫ್: ಚಾಪ್ಟರ್​​ 2’ ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಲಾರ್​ ಸಿನಿಮಾದ ಮೇಲೂ ಗಮನ ಹರಿಸಿದ್ದಾರೆ.

ಇದನ್ನೂ ಓದಿ:

ಪ್ರಶಾಂತ್​ ನೀಲ್​ ಜನ್ಮದಿನ; ಪ್ರೀತಿಯಿಂದ ಶುಭಕೋರಿದ ಜ್ಯೂ. ಎನ್​ಟಿಆರ್​ ಕಾಯುತ್ತಿರುವುದು ಆ ಒಂದು ಕ್ಷಣಕ್ಕಾಗಿ

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್